‘ಹೈದರಾಬಾದ್ ನಿಂದ ಬೆಂಗಳೂರಿಗೆ ಸಂಚರಿಸುವ ರಾಷ್ಟ್ರೀಯ ಹೆದ್ದಾರಿ 234 ರಲ್ಲಿರುವ ವೆಂಕಟಗಿರಿಕೋಟೆ ಗೇಟ್, ಬುಳ್ಳಹಳ್ಳಿ ಗೇಟ್, ಆವತಿ ಮುಂತಾದ ಕಡೆಗಳಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರಾಗಲಿ, ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಾಗಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ. ಇಲ್ಲಿ ಹೊರ ಪೊಲೀಸ್ ಠಾಣೆ ತೆರೆಯುವಂತೆ ಆಗ್ರಹಿಸಿದ್ದೇವೆ. ಯಾವುದಕ್ಕೂ ಸ್ಪಂದಿಸದೆ ಇರುವುದರಿಂದ ಅಮಾಯಕರು ಬಲಿಯಾಗುತ್ತಲೇ ಇದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.