ರೈತ ಮುಖಂಡ ಮಂಡಿಬೆಲೆ ನಾರಾಯಣಸ್ವಾಮಿ ಮಾತನಾಡಿ, ರಸ್ತೆಗಳಲ್ಲಿ ಅನುಸರಿಸಬೇಕಾಗಿರುವ ಸುರಕ್ಷತಾ ಕ್ರಮಗಳ ಬಗ್ಗೆ ಮಕ್ಕಳಿಗೆ ಮನೆಗಳಲ್ಲೆ ಜಾಗೃತಿ ಮೂಡಿಸುವಂತಹ ಕೆಲಸವಾಗಬೇಕು. ಇಲಾಖೆಗಳಿಂದ ಎಷ್ಟೇ ಜಾಗೃತಿ ಮೂಡಿಸಿದರೂ ನಿಯಮಗಳನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅಪಘಾತಗಳಾದಾಗ ಮಾತ್ರ. ಜಾಗ್ರತೆ ವಹಿಸುವಂತಹ ಜನರು ಪುನಃ ಅರಿವಿಲ್ಲದಂತೆ ವರ್ತನೆ ಮಾಡುತ್ತಿರುವುದು ಖಂಡನೀಯವಾದ ವಿಚಾರ ಎಂದರು.