ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗೆ ಕೊರೊನಾ ಸೋಂಕು

Last Updated 30 ಜೂನ್ 2020, 9:34 IST
ಅಕ್ಷರ ಗಾತ್ರ

ದೇವನಹಳ್ಳಿ: ಇಲ್ಲಿನ ವಿಶ್ವನಾಥಪುರ ಪೊಲೀಸ್ ಠಾಣೆಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರೆತಂದಿದ್ದ ಆರೋಪಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.

ವಿಶ್ವನಾಥಪುರ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳೆದ ಮೂರು ತಿಂಗಳ ಹಿಂದೆ ಆರೋಪಿ ಚಿನ್ನದ ಸರ ಕಳ್ಳತನ ಮಾಡಿ ತಪ್ಪಿಸಿಕೊಂಡಿದ್ದ.

ಜೂನ್‌ 22 ರಂದು ಆರೋಪಿಯನ್ನು ಬಂಧಿಸಿ ಎರಡು ದಿನ ವಿಚಾರಣೆಗೆಂದು ಠಾಣೆಯಲ್ಲಿ ಇರಿಸಿಕೊಳ್ಳಲಾಗಿತ್ತು, ಜೂನ್‌ 26ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲು ಆರೋಗ್ಯ ಪರೀಕ್ಷೆ ನಡೆಸಿದ ಸಂದರ್ಭದಲ್ಲಿ ಕೊರೊನ ಸೋಂಕು ಇರುವುದು ಪತ್ತೆಯಾಗಿದೆ ಎಂದು ಹೇಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲು ಕರೆ ತಂದ ನಂತರ ನ್ಯಾಯಾಲಯದ ಆವರಣ ಮತ್ತು ಕಲಾಪದ ಸಭಾಂಗಣದಲ್ಲಿದ್ದ ಎಲ್ಲ ವಕೀಲರನ್ನು ಹೊರಗೆ ಕಳುಹಿಸಿ ಆರೋಪಿಯನ್ನು ನ್ಯಾಯಾಂಗ ಬಂಧನದಲ್ಲಿ ಪ್ರತ್ಯೇಕವಾಗಿ ಇರಿಸುವುವಂತೆ ನ್ಯಾಯಾಧೀಶರು ಆದೇಶ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT