ಬನ್ನೇರುಘಟ್ಟ ಜೈವಿಕ ಉದ್ಯಾನದ ಸನಾ ಮತ್ತು ಶಂಕರ್ ಜೋಡಿಗೆ ಜನಿಸಿದ್ದ ಈ ನಾಲ್ಕು ತಿಂಗಳ ಈ ಮರಿಗೆ ಜಿ.ಕೃಷ್ಣ ಎಂದು ನಾಮಕರಣ ಮಾಡಲಾಗಿದೆ. ಜೈವಿಕ ಉದ್ಯಾನದ ಪ್ರಾಣಿಗಳನ್ನು ದತ್ತು ಪಡೆಯುವ ಮೂಲಕ ಹಲವಾರು ಮಂದಿ ಉದ್ಯಾನದ ಅಭಿವೃದ್ಧಿಗೆ ನೆರವು ನೀಡತ್ತಿರುವುದು ಆಶಾದಾಯಕವಾಗಿದೆ ಎಂದು ಜೈವಿಕ ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.