<p>ಹೊಸಕೋಟೆ: ‘ಆರೋಗ್ಯ ತಜ್ಞರ ಸೂಚನೆಯಂತೆ ಕೊರೊನಾ ಮೂರನೇ ಅಲೆಯು ಮಕ್ಕಳಿಗೆ ಹೆಚ್ಚಾಗಿ ಬಾಧಿಸುತ್ತದೆ. ಹಾಗಾಗಿ, ಪೋಷಕರು ಎಚ್ಚರಿಕೆವಹಿಸಬೇಕು’ ಎಂದು ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮುಗಬಾಳದಲ್ಲಿ ಬುಧವಾರ ಮಕ್ಕಳ ತಜ್ಞರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಹಮ್ಮಿಕೊಂಡಿರುವ ಸರ್ಕಾರಿ ಕಾರ್ಯಕ್ರಮ ಇದಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ ಕಾರ್ಯಕ್ರಮಕ್ಕೆ ದೇವನಹಳ್ಳಿಯಲ್ಲಿ ಚಾಲನೆ ನೀಡಿದ್ದಾರೆ ಎಂದರು.</p>.<p>ಮೂರನೇ ಅಲೆಯು ಪೌಷ್ಟಿಕತೆ ಕೊರತೆಯಿರುವ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಅದಕ್ಕಾಗಿ ಸರ್ಕಾರ ಅಂತಹ ಮಕ್ಕಳನ್ನು ಪ್ರತಿ ಗ್ರಾಮದಲ್ಲಿ ಪ್ರಾರಂಭದಲ್ಲಿಯೇ ಗುರುತಿಸಿ ಅವರಿಗೆ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಮುಗಬಾಳ ಪಂಚಾಯಿತಿಯಲ್ಲಿ ಐದು ವೈದ್ಯರ ತಂಡಗಳು ರಚನೆಯಾಗಿವೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ ನೀಡುವ ಮೂಲಕ ಮಕ್ಕಳಿಗೆ ಸೋಂಕು ಬಾಧಿಸದಂತೆ ಎಚ್ಚರಿಕೆವಹಿಸಲಾಗುತ್ತದೆ ಎಂದರು.</p>.<p>ಇದಕ್ಕೂ ಮೊದಲು ಶಾಸಕರು ಹೋಬಳಿಯ 12 ಗ್ರಾಮಗಳಲ್ಲಿ 1,800ಕ್ಕೂ ಹೆಚ್ಚು ದಿನಸಿ ಕಿಟ್ ವಿತರಿಸಿದರು. ಜಿ.ಪಂ. ಮಾಜಿ ಸದಸ್ಯ ಚನ್ನಸಂದ್ರ ನಾಗರಾಜ್, ನಾಗರಾಜ್, ಕೃಷ್ಣಪ್ಪ, ನಾರಾಯಣಸ್ವಾಮಿ, ಬಸವರಾಜ್, ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಕೋಟೆ: ‘ಆರೋಗ್ಯ ತಜ್ಞರ ಸೂಚನೆಯಂತೆ ಕೊರೊನಾ ಮೂರನೇ ಅಲೆಯು ಮಕ್ಕಳಿಗೆ ಹೆಚ್ಚಾಗಿ ಬಾಧಿಸುತ್ತದೆ. ಹಾಗಾಗಿ, ಪೋಷಕರು ಎಚ್ಚರಿಕೆವಹಿಸಬೇಕು’ ಎಂದು ಸಚಿವ ಎಂಟಿಬಿ ನಾಗರಾಜ್ ಸಲಹೆ ನೀಡಿದರು.</p>.<p>ತಾಲ್ಲೂಕಿನ ಮುಗಬಾಳದಲ್ಲಿ ಬುಧವಾರ ಮಕ್ಕಳ ತಜ್ಞರ ನಡಿಗೆ ಹಳ್ಳಿಯ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ರಾಜ್ಯ ಸರ್ಕಾರ ಮತ್ತು ಜಿಲ್ಲಾಡಳಿತ ಹಮ್ಮಿಕೊಂಡಿರುವ ಸರ್ಕಾರಿ ಕಾರ್ಯಕ್ರಮ ಇದಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ ಕಾರ್ಯಕ್ರಮಕ್ಕೆ ದೇವನಹಳ್ಳಿಯಲ್ಲಿ ಚಾಲನೆ ನೀಡಿದ್ದಾರೆ ಎಂದರು.</p>.<p>ಮೂರನೇ ಅಲೆಯು ಪೌಷ್ಟಿಕತೆ ಕೊರತೆಯಿರುವ ಮಕ್ಕಳ ಮೇಲೆ ಪರಿಣಾಮ ಬೀರಲಿದೆ. ಅದಕ್ಕಾಗಿ ಸರ್ಕಾರ ಅಂತಹ ಮಕ್ಕಳನ್ನು ಪ್ರತಿ ಗ್ರಾಮದಲ್ಲಿ ಪ್ರಾರಂಭದಲ್ಲಿಯೇ ಗುರುತಿಸಿ ಅವರಿಗೆ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಿಳಿಸಿದರು.</p>.<p>ತಾಲ್ಲೂಕಿನ ಮುಗಬಾಳ ಪಂಚಾಯಿತಿಯಲ್ಲಿ ಐದು ವೈದ್ಯರ ತಂಡಗಳು ರಚನೆಯಾಗಿವೆ. ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್ ನೀಡುವ ಮೂಲಕ ಮಕ್ಕಳಿಗೆ ಸೋಂಕು ಬಾಧಿಸದಂತೆ ಎಚ್ಚರಿಕೆವಹಿಸಲಾಗುತ್ತದೆ ಎಂದರು.</p>.<p>ಇದಕ್ಕೂ ಮೊದಲು ಶಾಸಕರು ಹೋಬಳಿಯ 12 ಗ್ರಾಮಗಳಲ್ಲಿ 1,800ಕ್ಕೂ ಹೆಚ್ಚು ದಿನಸಿ ಕಿಟ್ ವಿತರಿಸಿದರು. ಜಿ.ಪಂ. ಮಾಜಿ ಸದಸ್ಯ ಚನ್ನಸಂದ್ರ ನಾಗರಾಜ್, ನಾಗರಾಜ್, ಕೃಷ್ಣಪ್ಪ, ನಾರಾಯಣಸ್ವಾಮಿ, ಬಸವರಾಜ್, ಲಕ್ಷ್ಮಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>