ಕಾಲೇಜಿನ ವಿದ್ಯಾರ್ಥಿಗಳಾದ ಅನನ್ಯ, ತರುಣ್ ಮಾತನಾಡಿ, ಟ್ಯಾಬ್ ವಿತರಣೆಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದ್ದು, ಶಿಕ್ಷಣಕ್ಕೆ ನೆರವಾಗುವ ಈ ಯೋಜನೆ ನೀಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಟಿ.ಎಸ್. ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್ ಎಸ್. ಸುಣಗಾರ್, ಸರ್ಕಾರಿ ಪದವಿ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಶ್ಯಾಮರಾಜ್, ಪ್ರಾಧ್ಯಾಪಕರಾದ ಸದಾಶಿವ ರಾಮಚಂದ್ರಗೌಡ, ನರಸಿಂಹಮೂರ್ತಿ, ವಿ.ಆರ್. ಮಹೇಶ್, ಕೆಂಪರಾಜು, ಮನ್ಸೂರ್ ಇದ್ದರು.