‘ಮರಗಳನ್ನು ಕಡಿಯುತ್ತಿರುವುದು ಪರಿಸರದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ತಾಪಮಾನ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಆಮ್ಲಜನಕವನ್ನು ಹಣಕೊಟ್ಟು ಖರೀದಿಸುವ ಪರಿಸ್ಥಿತಿ ನಿಮಾರ್ಣವಾಗುತ್ತದೆ. ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಗಿಡ ಮರಗಳನ್ನು ಬೆಳೆಸುವಂತೆ ತಿಳಿಸಲಾಗುವುದು. ಅಂತರ್ಜಲ ಮಟ್ಟ 1200 ಅಡಿ ಆಳಕ್ಕೆ ಕುಸಿದಿದೆ. ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ವತಿಯಿಂದ, ಯಾವುದೇ ಬಡಾವಣೆ ನಿರ್ಮಾಣ ಮಾಡಿದರೆ, ಉದ್ಯಾನದ ಜಾಗದಲ್ಲಿ ಸಸಿಗಳನ್ನು ನೆಟ್ಟು, ಮಕ್ಕಳಿಗೆ ಆಟವಾಡಲು ಅವಕಾಶ ಕಲ್ಪಿಸುವುದು ಕಡ್ಡಾಯ ಎಂದು ಬಡಾವಣೆ ಮಾಲೀಕರಿಗೆ ಸೂಚಿಸಬೇಕು’ ಎಂದರು.