ಹೊಸಕೋಟೆ: ಅಲ್ಪಸಂಖ್ಯಾತರು ಅಭಿವೃದ್ಧಿ ಜತೆ ಸಾಧನೆ ಮಾಡಲು ಸರ್ಕಾರದ ಸೌಲಭ್ಯ ಅತಿ ಮುಖ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪುಂಡಲೀಕ ಅನವಾಲ ತಿಳಿಸಿದರು.
ನಗರದ ದಂಡುಪಾಳ್ಯದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹೊಸಕೋಟೆ ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಏಕತಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಸುಬ್ರಮಣಿ, ವಕೀಲರ ಸಂಘದ ಉಪಾಧ್ಯಕ್ಷ ಹನುಮಂತ ರಾವ್, ಪ್ರಧಾನ ಕಾರ್ಯದರ್ಶಿ ರಮೇಶ್ ಇದ್ದರು.