<p><strong>ಹೊಸಕೋಟೆ:</strong> ಸ್ವಚ್ಛತೆ ಕಡೆಗೆ ಶಾಸಕರ ನಡಿಗೆ ಎಂಬ ಧ್ಯೇಯಂದಂತೆ ಪ್ರತಿ ತಿಂಗಳ ಮೊದಲನೇ ಭಾನುವಾರ ತಾಲ್ಲೂಕಿನಲ್ಲಿ ಎಸ್ಬಿಜಿ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಾ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಜಡಗೇನಹಳ್ಳಿಯಲ್ಲಿ ಕರಗ ಪರಮೇಶ್ವರಿ ದೇವಾಲಯದ ಬಳಿ ಇರುವ ಕಲ್ಯಾಣಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಳೆ ಪ್ರಮಾಣ ಕಡಿಮೆಯಾಗಿ ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರ ಸ್ಥಿತಿಗೆ ತಲುಪಲಿದೆ. ಇದಕ್ಕಾಗಿ ನದಿ ಮೂಲಗಳಿಲ್ಲದ ತಾಲ್ಲೂಕಿಗೆ ಕಲ್ಯಾಣಿ, ಕೆರೆ, ಕಾಲುವೆಗಳು ಪ್ರಮುಖ ಜಲಮೂಲಗಳಾಗಿವೆ ಎಂದರು.</p>.<p>ಈಗಾಗಲೇ ತಾಲ್ಲೂಕಿನಲ್ಲಿ ಹಲವು ಕಲ್ಯಾಣಿಗಳನ್ನು ಗುರುತಿಸಿ ಸ್ವಚ್ಛ ಮಾಡಲಾಗಿದೆ ಎಂದರು.</p>.<p>ಎಸ್ಬಿಜಿ ತಂಡದ ಸದಸ್ಯ ಚಿಕ್ಕ ಅರಳಗೆರ ಮುನಿರಾಜು, ಜಿಲ್ಲಾ ಪಂಚಾಯತಿ ಸದಸ್ಯ ವೈ.ಎಸ್.ಎಂ. ಮಂಜುನಾಥ್, ಮುಖಂಡರಾದ ವಾಗಟ ನರೇಂದ್ರ, ಕರಿಬೀರನ ಹೊಸಹಳ್ಳಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ:</strong> ಸ್ವಚ್ಛತೆ ಕಡೆಗೆ ಶಾಸಕರ ನಡಿಗೆ ಎಂಬ ಧ್ಯೇಯಂದಂತೆ ಪ್ರತಿ ತಿಂಗಳ ಮೊದಲನೇ ಭಾನುವಾರ ತಾಲ್ಲೂಕಿನಲ್ಲಿ ಎಸ್ಬಿಜಿ ತಂಡದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಪ್ರತಿಭಾ ಶರತ್ ಬಚ್ಚೇಗೌಡ ತಿಳಿಸಿದರು.</p>.<p>ತಾಲ್ಲೂಕಿನ ಜಡಗೇನಹಳ್ಳಿಯಲ್ಲಿ ಕರಗ ಪರಮೇಶ್ವರಿ ದೇವಾಲಯದ ಬಳಿ ಇರುವ ಕಲ್ಯಾಣಿ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಳೆ ಪ್ರಮಾಣ ಕಡಿಮೆಯಾಗಿ ಅಂತರ್ಜಲ ಪಾತಾಳಕ್ಕೆ ಕುಸಿದಿದೆ. ಇದು ಹೀಗೆ ಮುಂದುವರಿದರೆ ಮುಂದಿನ ದಿನಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರ ಸ್ಥಿತಿಗೆ ತಲುಪಲಿದೆ. ಇದಕ್ಕಾಗಿ ನದಿ ಮೂಲಗಳಿಲ್ಲದ ತಾಲ್ಲೂಕಿಗೆ ಕಲ್ಯಾಣಿ, ಕೆರೆ, ಕಾಲುವೆಗಳು ಪ್ರಮುಖ ಜಲಮೂಲಗಳಾಗಿವೆ ಎಂದರು.</p>.<p>ಈಗಾಗಲೇ ತಾಲ್ಲೂಕಿನಲ್ಲಿ ಹಲವು ಕಲ್ಯಾಣಿಗಳನ್ನು ಗುರುತಿಸಿ ಸ್ವಚ್ಛ ಮಾಡಲಾಗಿದೆ ಎಂದರು.</p>.<p>ಎಸ್ಬಿಜಿ ತಂಡದ ಸದಸ್ಯ ಚಿಕ್ಕ ಅರಳಗೆರ ಮುನಿರಾಜು, ಜಿಲ್ಲಾ ಪಂಚಾಯತಿ ಸದಸ್ಯ ವೈ.ಎಸ್.ಎಂ. ಮಂಜುನಾಥ್, ಮುಖಂಡರಾದ ವಾಗಟ ನರೇಂದ್ರ, ಕರಿಬೀರನ ಹೊಸಹಳ್ಳಿ ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>