<p><strong>ವಿಜಯಪುರ</strong>:‘ಗ್ರಾಮೀಣ ಭಾಗದಲ್ಲಿ ಜೀವಂತವಾಗಿರುವ ರಂಗ ಕಲೆಯನ್ನು ಮತ್ತಷ್ಟು ಶ್ರೀಮಂತಗೊಳಿಸುವಂತಹ ಕೆಲಸ ಮಾಡಬೇಕಾಗಿದೆ’ ಎಂದು ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಬಾಬು ಹೇಳಿದರು.</p>.<p>ಇಲ್ಲಿನ ಸಂತೆ ಗೇಟ್ನಲ್ಲಿರುವ ಕನ್ನಡ ಕಲಾವಿದರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ದೀಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಳ್ಳಿಗಳಲ್ಲಿರುವ ರಂಗ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವಂತಹ ಕೆಲಸ ಮಾಡಬೇಕಾಗಿರುವುದು ನಮ್ಮ ಧರ್ಮ. ಕಲಾವಿದರ ಬದುಕಿಗೆ ಆಶ್ರಯ ಕಲ್ಪಿಸುವ ಕಾರ್ಯಕ್ರಮಗಳನ್ನು ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳೂ ಮಾಡದ ಕಾರಣ ರಂಗಭೂಮಿ ಕಲಾವಿದರ ಬದುಕು ದುಸ್ತರವಾಗುತ್ತಿದೆ ಎಂದು ವಿಷಾದಿಸಿದರು.</p>.<p>ರಂಗಭೂಮಿ ಕಲಾವಿದರಿಂದ ಗ್ರಾಮೀಣ ಭಾಗದಲ್ಲಿ ಜನಪದ ಸಾಹಿತ್ಯ ಜೀವಂತವಾಗಿದೆ. ಇಂತಹ ಕಲಾವಿದರ ಏಳಿಗೆ ಹಾಗೂ ಸಾಹಿತ್ಯದ ಉದ್ಧಾರಕ್ಕಾಗಿ ಪ್ರತ್ಯೇಕವಾದ ಇಲಾಖೆಯಿದ್ದರೂ ನಾಡಿನಲ್ಲಿ ಕಲಾವಿದರು ಹಾಗೂ ಕಲೆ ಅಳಿವಿನಂಚಿಗೆ ಸರಿಯುತ್ತಿರುವುದು ದುರಂತ. ಈ ಬಗ್ಗೆ ಕಲಾವಿದರು ಒಗ್ಗಟ್ಟಾಗಿ ಸರ್ಕಾರದ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕಾಗಿದೆ. ತಾಲ್ಲೂಕಿನಲ್ಲಿ ಕಲಾವಿದರ ಭವನ ನಿರ್ಮಾಣವಾಗಬೇಕು. ಕಲಾವಿದರಿಗೆ ಪ್ರತಿ ತಿಂಗಳು ಮಾಸಾಶನ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.</p>.<p>ಸಾಹಿತಿ ಆರ್.ಕೆ. ನಂಜೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಪ್ರಾಮಾಣಿಕವಾಗಿ ಕನ್ನಡದ ಸೇವೆ ಮಾಡುವವರು, ಕಲಾವಿದರಿಗೆ ವೇದಿಕೆಗಳು ಕೊಟ್ಟು ಅವರಿಗಾಗಿ ದುಡಿಯವಂತಹ ವ್ಯಕ್ತಿಗಳು ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಇವರನ್ನು ಗುರ್ತಿಸುವಂತಹ ಕೆಲಸವನ್ನು ಯಾವ ಸರ್ಕಾರವೂ ಮಾಡಿಲ್ಲ ಎಂದು ದೂರಿದರು.</p>.<p>ಸರ್ಕಾರದ ಗಮನ ಸೆಳೆಯಬೇಕಾದರೆ ಹೋರಾಟ ಮಾಡಬೇಕಾಗಿ ಬಂದಿರುವುದು ಶೋಚನೀಯ. ಕೊರೊನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ಮಂದಿ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ಸ್ಪಂದಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.</p>.<p>ಮುಖಂಡ ಬಿ.ಕೆ. ಶಿವಪ್ಪ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಎಲೆಮರೆ ಕಾಯಿಯಂತೆ ಇರುವ ಕಲಾವಿದರಿಗೆ ವೇದಿಕೆಗಳು ಕಲ್ಪಿಸುವಂತಹ ಕೆಲಸ ಮಾಡಬೇಕು. ಅವರಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಇಂತಹ ವೇದಿಕೆ ಒದಗಿಸಿಕೊಡಬೇಕಾದರೆ ಸುಸಜ್ಜಿತವಾದ ಕಲಾಭವನ ನಿರ್ಮಾಣ ಮಾಡಬೇಕಾಗಿದೆ ಎಂದರು.</p>.<p>ಬಿಜೆಪಿ ಮುಖಂಡ ಆರ್.ಸಿ. ಮಂಜುನಾಥ್ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.</p>.<p>ಶರಣ ಸಾಹಿತ್ಯ ಪರಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಕೋವಿಡ್ ಮತ್ತು ಲಾಕ್ಡೌನ್ನಿಂದ ವೃತ್ತಿ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರಿಗೆ ಮಾಸಾಶನ ಬಿಡುಗಡೆ ಆಗಿಲ್ಲ. ಇದರಿಂದ ಕಲಾವಿದರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ₹ 3 ಸಾವಿರ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಮಾಸಾಶನ ಬಿಡುಗಡೆಯಾಗದೇ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದರು.</p>.<p>ಎಂ.ವಿ. ನಾಯ್ಡು ತಂಡದಿಂದ ರಂಗಗೀತೆಗಳ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಲಾವಿದ ಹಾರೋಹಳ್ಳಿ ಸುಬ್ಬರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಜೆ.ಆರ್. ಮುನಿವೀರಣ್ಣ, ಸುಭ್ರಮಣಿ, ಗೋವಿಂದರಾಜು, ಕನಕರಾಜು, ರಾಮಣ್ಣ, ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ</strong>:‘ಗ್ರಾಮೀಣ ಭಾಗದಲ್ಲಿ ಜೀವಂತವಾಗಿರುವ ರಂಗ ಕಲೆಯನ್ನು ಮತ್ತಷ್ಟು ಶ್ರೀಮಂತಗೊಳಿಸುವಂತಹ ಕೆಲಸ ಮಾಡಬೇಕಾಗಿದೆ’ ಎಂದು ತಾಲ್ಲೂಕು ಕನ್ನಡ ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಬಾಬು ಹೇಳಿದರು.</p>.<p>ಇಲ್ಲಿನ ಸಂತೆ ಗೇಟ್ನಲ್ಲಿರುವ ಕನ್ನಡ ಕಲಾವಿದರ ಸಂಘದ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ದೀಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಹಳ್ಳಿಗಳಲ್ಲಿರುವ ರಂಗ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವಂತಹ ಕೆಲಸ ಮಾಡಬೇಕಾಗಿರುವುದು ನಮ್ಮ ಧರ್ಮ. ಕಲಾವಿದರ ಬದುಕಿಗೆ ಆಶ್ರಯ ಕಲ್ಪಿಸುವ ಕಾರ್ಯಕ್ರಮಗಳನ್ನು ಅಧಿಕಾರಕ್ಕೆ ಬಂದ ಯಾವ ಸರ್ಕಾರಗಳೂ ಮಾಡದ ಕಾರಣ ರಂಗಭೂಮಿ ಕಲಾವಿದರ ಬದುಕು ದುಸ್ತರವಾಗುತ್ತಿದೆ ಎಂದು ವಿಷಾದಿಸಿದರು.</p>.<p>ರಂಗಭೂಮಿ ಕಲಾವಿದರಿಂದ ಗ್ರಾಮೀಣ ಭಾಗದಲ್ಲಿ ಜನಪದ ಸಾಹಿತ್ಯ ಜೀವಂತವಾಗಿದೆ. ಇಂತಹ ಕಲಾವಿದರ ಏಳಿಗೆ ಹಾಗೂ ಸಾಹಿತ್ಯದ ಉದ್ಧಾರಕ್ಕಾಗಿ ಪ್ರತ್ಯೇಕವಾದ ಇಲಾಖೆಯಿದ್ದರೂ ನಾಡಿನಲ್ಲಿ ಕಲಾವಿದರು ಹಾಗೂ ಕಲೆ ಅಳಿವಿನಂಚಿಗೆ ಸರಿಯುತ್ತಿರುವುದು ದುರಂತ. ಈ ಬಗ್ಗೆ ಕಲಾವಿದರು ಒಗ್ಗಟ್ಟಾಗಿ ಸರ್ಕಾರದ ಕಣ್ಣು ತೆರೆಸುವಂತಹ ಕೆಲಸ ಮಾಡಬೇಕಾಗಿದೆ. ತಾಲ್ಲೂಕಿನಲ್ಲಿ ಕಲಾವಿದರ ಭವನ ನಿರ್ಮಾಣವಾಗಬೇಕು. ಕಲಾವಿದರಿಗೆ ಪ್ರತಿ ತಿಂಗಳು ಮಾಸಾಶನ ನೀಡುವಂತಾಗಬೇಕು ಎಂದು ಒತ್ತಾಯಿಸಿದರು.</p>.<p>ಸಾಹಿತಿ ಆರ್.ಕೆ. ನಂಜೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶದಲ್ಲಿ ಪ್ರಾಮಾಣಿಕವಾಗಿ ಕನ್ನಡದ ಸೇವೆ ಮಾಡುವವರು, ಕಲಾವಿದರಿಗೆ ವೇದಿಕೆಗಳು ಕೊಟ್ಟು ಅವರಿಗಾಗಿ ದುಡಿಯವಂತಹ ವ್ಯಕ್ತಿಗಳು ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಇವರನ್ನು ಗುರ್ತಿಸುವಂತಹ ಕೆಲಸವನ್ನು ಯಾವ ಸರ್ಕಾರವೂ ಮಾಡಿಲ್ಲ ಎಂದು ದೂರಿದರು.</p>.<p>ಸರ್ಕಾರದ ಗಮನ ಸೆಳೆಯಬೇಕಾದರೆ ಹೋರಾಟ ಮಾಡಬೇಕಾಗಿ ಬಂದಿರುವುದು ಶೋಚನೀಯ. ಕೊರೊನಾ ಸಂಕಷ್ಟದ ಸಮಯದಲ್ಲಿ ಸಾಕಷ್ಟು ಮಂದಿ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ. ಅವರಿಗೆ ಸ್ಪಂದಿಸುವಂತಹ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.</p>.<p>ಮುಖಂಡ ಬಿ.ಕೆ. ಶಿವಪ್ಪ ಮಾತನಾಡಿ, ತಾಲ್ಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ ಎಲೆಮರೆ ಕಾಯಿಯಂತೆ ಇರುವ ಕಲಾವಿದರಿಗೆ ವೇದಿಕೆಗಳು ಕಲ್ಪಿಸುವಂತಹ ಕೆಲಸ ಮಾಡಬೇಕು. ಅವರಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು. ಇಂತಹ ವೇದಿಕೆ ಒದಗಿಸಿಕೊಡಬೇಕಾದರೆ ಸುಸಜ್ಜಿತವಾದ ಕಲಾಭವನ ನಿರ್ಮಾಣ ಮಾಡಬೇಕಾಗಿದೆ ಎಂದರು.</p>.<p>ಬಿಜೆಪಿ ಮುಖಂಡ ಆರ್.ಸಿ. ಮಂಜುನಾಥ್ ಮಾತನಾಡಿ, ಕಲೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಾವೆಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕಾಗಿದೆ ಎಂದು ಹೇಳಿದರು.</p>.<p>ಶರಣ ಸಾಹಿತ್ಯ ಪರಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಹಡಪದ್ ಮಾತನಾಡಿ, ಕೋವಿಡ್ ಮತ್ತು ಲಾಕ್ಡೌನ್ನಿಂದ ವೃತ್ತಿ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರಿಗೆ ಮಾಸಾಶನ ಬಿಡುಗಡೆ ಆಗಿಲ್ಲ. ಇದರಿಂದ ಕಲಾವಿದರ ಬದುಕು ಮತ್ತಷ್ಟು ದುಸ್ತರವಾಗಿದೆ ಎಂದರು.</p>.<p>ರಾಜ್ಯ ಸರ್ಕಾರ ₹ 3 ಸಾವಿರ ಪರಿಹಾರದ ಪ್ಯಾಕೇಜ್ ಘೋಷಣೆ ಮಾಡಿದ್ದರೂ ಮಾಸಾಶನ ಬಿಡುಗಡೆಯಾಗದೇ ಕಲಾವಿದರು ತೊಂದರೆಗೆ ಸಿಲುಕಿದ್ದಾರೆ ಎಂದು ಹೇಳಿದರು.</p>.<p>ಎಂ.ವಿ. ನಾಯ್ಡು ತಂಡದಿಂದ ರಂಗಗೀತೆಗಳ ಗಾಯನ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಲಾವಿದ ಹಾರೋಹಳ್ಳಿ ಸುಬ್ಬರಾಯಪ್ಪ ಅವರನ್ನು ಸನ್ಮಾನಿಸಲಾಯಿತು. ಜೆ.ಆರ್. ಮುನಿವೀರಣ್ಣ, ಸುಭ್ರಮಣಿ, ಗೋವಿಂದರಾಜು, ಕನಕರಾಜು, ರಾಮಣ್ಣ, ಕೃಷ್ಣಪ್ಪ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>