<p><strong>ದೇವನಹಳ್ಳಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡು ಟರ್ಮಿನಲ್ನಲ್ಲೂ ಹದ್ದಿನ ಕಣ್ಣು ಇಡಲಾಗಿದೆ.</p>.<p>ಕೇಂದ್ರ ಕೈಗಾರಿಕ ಭದ್ರತೆ ಪಡೆಯೂ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ಪೊಲೀಸರು ವಿಮಾನ ನಿಲ್ದಾಣದ ಸುತ್ತ ಮುತ್ತ ಅಹಿತ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ. ಪ್ರತಿ ಅರ್ಧ ಗಂಟೆಗೊಮ್ಮೆ ಶ್ವಾನ ದಳ ಮೂಲಕ ಎಲ್ಲೆಡೆ ತಪಾಸಣೆ ಮಾಡಲಾಗುತ್ತಿದೆ.</p>.<p>ಟರ್ಮಿನಲ್ಗಳಲ್ಲಿ ಅನಾಮದೇಯ ವಸ್ತುಗಳು ಕಂಡು ಬಂದರೇ ಕೂಡಲೇ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಬಿಟ್ಟು ಹೋಗಲು ಬರುವ ಹಿತೈಶಿಗಳ ಸಂಖ್ಯೆಯೂ ಹೆಚ್ಚಾಗಿ ಕಂಡು ಬಂದರೇ ಅವರನ್ನು ಹೆಚ್ಚು ಸಮಯ ಟರ್ಮಿನಲ್ಗಳಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.</p>.<p>ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತವಾಗಿ ಪರಿಶೀಲನೆ ನಿಗಾವಹಿಸಲು ಕಂಟ್ರೋಲ್ ರೂಂಗಳಲ್ಲಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಟರ್ಮಿನಲ್ನಲ್ಲಿರುವ ಚೆಕ್ ಪೋಸ್ಟ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.</p>.<p>ಟ್ಯಾಕ್ಸಿಗಳ ಮೂಲಕ ಹಾಗೂ ಖಾಸಗಿ ವಾಹನಗಳ ನಿಲುಗಡೆ ಸ್ಥಳದಲ್ಲಿ ಐದು ನಿಮಿಷಕ್ಕೂ ಹೆಚ್ಚಿನ ಕಾಲ ಕ್ಯಾಬ್ಗಳು ನಿಲ್ಲದಂತೆ ಭದ್ರತಾ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಶಸ್ತ್ರ ಸಜ್ಜಿತ ಸಿಐಎಸ್ಎಫ್ ಸಿಬ್ಬಂದಿಯನ್ನು 24 ಗಂಟೆಯೂ ನಿಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟ ಸಂಭವಿಸಿದ ಬಳಿಕ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಎರಡು ಟರ್ಮಿನಲ್ನಲ್ಲೂ ಹದ್ದಿನ ಕಣ್ಣು ಇಡಲಾಗಿದೆ.</p>.<p>ಕೇಂದ್ರ ಕೈಗಾರಿಕ ಭದ್ರತೆ ಪಡೆಯೂ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ರಾಜ್ಯ ಪೊಲೀಸರು ವಿಮಾನ ನಿಲ್ದಾಣದ ಸುತ್ತ ಮುತ್ತ ಅಹಿತ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ವಹಿಸಿದ್ದಾರೆ. ಪ್ರತಿ ಅರ್ಧ ಗಂಟೆಗೊಮ್ಮೆ ಶ್ವಾನ ದಳ ಮೂಲಕ ಎಲ್ಲೆಡೆ ತಪಾಸಣೆ ಮಾಡಲಾಗುತ್ತಿದೆ.</p>.<p>ಟರ್ಮಿನಲ್ಗಳಲ್ಲಿ ಅನಾಮದೇಯ ವಸ್ತುಗಳು ಕಂಡು ಬಂದರೇ ಕೂಡಲೇ ಬಾಂಬ್ ನಿಷ್ಕ್ರೀಯ ದಳದಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಯಾಣಿಕರನ್ನು ಬಿಟ್ಟು ಹೋಗಲು ಬರುವ ಹಿತೈಶಿಗಳ ಸಂಖ್ಯೆಯೂ ಹೆಚ್ಚಾಗಿ ಕಂಡು ಬಂದರೇ ಅವರನ್ನು ಹೆಚ್ಚು ಸಮಯ ಟರ್ಮಿನಲ್ಗಳಲ್ಲಿ ನಿಲ್ಲದಂತೆ ಭದ್ರತಾ ಸಿಬ್ಬಂದಿ ಎಚ್ಚರಿಕೆ ನೀಡುತ್ತಿದ್ದಾರೆ.</p>.<p>ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತವಾಗಿ ಪರಿಶೀಲನೆ ನಿಗಾವಹಿಸಲು ಕಂಟ್ರೋಲ್ ರೂಂಗಳಲ್ಲಿ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಟರ್ಮಿನಲ್ನಲ್ಲಿರುವ ಚೆಕ್ ಪೋಸ್ಟ್ಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ.</p>.<p>ಟ್ಯಾಕ್ಸಿಗಳ ಮೂಲಕ ಹಾಗೂ ಖಾಸಗಿ ವಾಹನಗಳ ನಿಲುಗಡೆ ಸ್ಥಳದಲ್ಲಿ ಐದು ನಿಮಿಷಕ್ಕೂ ಹೆಚ್ಚಿನ ಕಾಲ ಕ್ಯಾಬ್ಗಳು ನಿಲ್ಲದಂತೆ ಭದ್ರತಾ ಸಿಬ್ಬಂದಿ ಸೂಚಿಸುತ್ತಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಶಸ್ತ್ರ ಸಜ್ಜಿತ ಸಿಐಎಸ್ಎಫ್ ಸಿಬ್ಬಂದಿಯನ್ನು 24 ಗಂಟೆಯೂ ನಿಯೋಜಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>