<p><strong>ವಿಜಯಪುರ:</strong> ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅದರ ಪರಿಣಾಮ ರಾಜ್ಯದಲ್ಲಿ ಬೀರಲಿದೆ. ಬದಲಾವಣೆ ಆಗುವ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.</p>.<p>ಇಲ್ಲಿ ಗಂಗಾತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ. ಕೋಲಾರದಲ್ಲಿ ಮುನಿಸ್ವಾಮಿ, ಚಿಕ್ಕಬಳ್ಳಾಪುರದಲ್ಲಿ ನಾನು ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ. ದೇಶಕ್ಕೆ ಮೋದಿ ಅವಶ್ಯಕತೆ ಜಾಸ್ತಿ ಇದೆ. ಮಾಧ್ಯಮಗಳಲ್ಲಿನ ಸಮೀಕ್ಷೆಗಳ ಆಧಾರದಲ್ಲಿ ಹೇಳುತ್ತಿದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸಮ್ಮಿಶ್ರ ಸರ್ಕಾರದಲ್ಲಿ ದಿನಾ ಕಚ್ಚಾಟಗಳು ಆಗುತ್ತಿವೆ. ಅವರಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಆಗುತ್ತಿಲ್ಲ. ಹೆಚ್ಚು ದಿನ ಉಳಿಯುವ ಸಾಧ್ಯತೆ ಇಲ್ಲ. ಮತ ಎಣಿಕೆ ಆದ ಮೇಲೆ ಸಮ್ಮಿಶ್ರ ಸರ್ಕಾರ ಇರುವುದಿಲ್ಲ’ ಎಂದರು.</p>.<p>ಪುರಸಭಾ ಸದಸ್ಯರಾದ ಎಂ.ಸತೀಶ್ ಕುಮಾರ್, ಬಲಮುರಿ ಶ್ರೀನಿವಾಸ್, ಮುಖಂಡರಾದ ರಾಜಣ್ಣ, ಚ.ವಿಜಯಬಾಬು, ಕನಕರಾಜು, ರವಿಕುಮಾರ್, ಗಂಗಾತಾಯಿ ದೇವಾಲಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅದರ ಪರಿಣಾಮ ರಾಜ್ಯದಲ್ಲಿ ಬೀರಲಿದೆ. ಬದಲಾವಣೆ ಆಗುವ ಬಗ್ಗೆ ಈಗಲೇ ಏನೂ ಹೇಳಲು ಸಾಧ್ಯವಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎನ್.ಬಚ್ಚೇಗೌಡ ಹೇಳಿದರು.</p>.<p>ಇಲ್ಲಿ ಗಂಗಾತಾಯಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>‘ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ. ಕೋಲಾರದಲ್ಲಿ ಮುನಿಸ್ವಾಮಿ, ಚಿಕ್ಕಬಳ್ಳಾಪುರದಲ್ಲಿ ನಾನು ಗೆಲ್ಲುವುದು ನಿಶ್ಚಿತ. ರಾಜ್ಯದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲುವು ಸಾಧಿಸುತ್ತೇವೆ. ದೇಶಕ್ಕೆ ಮೋದಿ ಅವಶ್ಯಕತೆ ಜಾಸ್ತಿ ಇದೆ. ಮಾಧ್ಯಮಗಳಲ್ಲಿನ ಸಮೀಕ್ಷೆಗಳ ಆಧಾರದಲ್ಲಿ ಹೇಳುತ್ತಿದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸಮ್ಮಿಶ್ರ ಸರ್ಕಾರದಲ್ಲಿ ದಿನಾ ಕಚ್ಚಾಟಗಳು ಆಗುತ್ತಿವೆ. ಅವರಲ್ಲಿ ಒಬ್ಬರ ಮೇಲೆ ಒಬ್ಬರಿಗೆ ಆಗುತ್ತಿಲ್ಲ. ಹೆಚ್ಚು ದಿನ ಉಳಿಯುವ ಸಾಧ್ಯತೆ ಇಲ್ಲ. ಮತ ಎಣಿಕೆ ಆದ ಮೇಲೆ ಸಮ್ಮಿಶ್ರ ಸರ್ಕಾರ ಇರುವುದಿಲ್ಲ’ ಎಂದರು.</p>.<p>ಪುರಸಭಾ ಸದಸ್ಯರಾದ ಎಂ.ಸತೀಶ್ ಕುಮಾರ್, ಬಲಮುರಿ ಶ್ರೀನಿವಾಸ್, ಮುಖಂಡರಾದ ರಾಜಣ್ಣ, ಚ.ವಿಜಯಬಾಬು, ಕನಕರಾಜು, ರವಿಕುಮಾರ್, ಗಂಗಾತಾಯಿ ದೇವಾಲಯ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>