ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರಜಿಲ್ಲೆಯಲ್ಲಿ ಬೆಳೆಯಲಾಗಿರುವ ದ್ರಾಕ್ಷಿ ಸೇರಿದಂತೆ ಯಾವುದೇ ರೀತಿಯ ಹಣ್ಣುಗಳನ್ನು ಹೊರ ಜಿಲ್ಲೆ, ರಾಜ್ಯಗಳಿಗೆ ಸಾಗಣೆ ಮಾಡಿ ಮಾರಾಟ ಮಾಡಲು ರೈತರು ಹಾಗೂ ವ್ಯಾಪಾರಸ್ಥರಿಗೆ ಮಂಗಳವಾರದಿಂದ ಅವಕಾಶ ನೀಡಲಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರಗೋಡ ತಿಳಿಸಿದ್ದಾರೆ.