ಶಿಕ್ಷಕ ನಾಗೇಶ್ ಮಾತನಾಡಿ, ‘ಜಂತುಹುಳುವಿನ ಬಾಧೆಯು ಮಕ್ಕಳ ಆರೋಗ್ಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಮಗುವಿನ ಆರೋಗ್ಯ ಮತ್ತು ಶಿಕ್ಷಣಕ್ಕೂ ನಿಕಟ ಸಂಬಂಧವಿದ್ದು, ಮಗುವು ಒಳ್ಳೆಯ ಶಿಕ್ಷಣ ಪಡೆಯಬೇಕಾದರೆ ಸದೃಢ ಆರೋಗ್ಯ ಹೊಂದುವುದು ಅವಶ್ಯಕವಾಗಿದೆ. ಮನೆಯಲ್ಲಿ ಅಥವಾ ಶಾಲೆಯಲ್ಲಿ ಊಟಕ್ಕೆ ಮುಂಚೆ ಕೈತೊಳೆದುಕೊಳ್ಳಬೇಕು. ಜಂತುಹುಳುಗಳಿಂದ ಮಗುವಿನಲ್ಲಿ ರಕ್ತಹೀನತೆ, ಪೌಷ್ಟಿಕಾಂಶದ ಕೊರತೆ, ಹಸಿವೆಯಾಗದಿರುವುದು, ತೂಕ ಕಡಿಮೆಯಾಗುವುದು ಸಂಭವಿಸುತ್ತದೆ. ಅಲ್ಬಂಡೆಜೋಲ್ ಮಾತ್ರೆಯನ್ನು ತಪ್ಪದೇ ಸೇವಿಸಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆಯ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಸುಧಾರಾಣಿ, ಸಹಾಯಕಿ ಶಿಕ್ಷಕ ಹನುಮಂತರಾಜು, ರವಿಚಂದ್ರ ಇದ್ದರು.