ಆಧುನಿಕ ಭಾರತದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರು ಭಾರತದಲ್ಲಿ ಸಾಮಾಜಿಕ ಕ್ರಾಂತಿಯನ್ನು ಹುಟ್ಟುಹಾಕಿ ದಲಿತ ಸಮುದಾಯದ ಏಳಿಗೆಗಾಗಿ, ಸಮಾನತೆಗಾಗಿ ನಡೆಸಿದ ಚಿಂತನೆಗಳು, ಹೋರಾಟಗಳು ಚಿರಸ್ಮರಣೀಯವಾಗಿವೆ. ಅವರು ನಡೆದು ಬಂದ ಕಷ್ಟದ ದಾರಿಯಲ್ಲಿ ಇಡೀ ಭಾರತವೇ ಗುರುತಿಸುವ ವ್ಯಕ್ತಿಯಾಗಿ ಸಮಾಜದ ಹಿಂದುಳಿದವರ ದೀನ ದಲಿತರ ಸಮಗ್ರ ಅಭಿವೃದ್ಧಿಗೆ ಅವರು ಹಾಕಿ ಕೊಟ್ಟಿರುವ ಭದ್ರ ಬುನಾದಿಯ ಪರಿಣಾಮ ಇಂದು ದಲಿತರು ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ ಎಂದರು.