<p><strong>ಹೊಸಕೋಟೆ: </strong>ನಗರದ ಜಿಇಎಫ್ ಕಣ್ಣಿನ ಆಸ್ಪತ್ರೆಗೆ ಕ್ಯಾನ್ ಫಿನ್ ಹೋಮ್ಸ್ನಿಂದ ಆಸ್ಪತ್ರೆಯ ತುರ್ತು ಬಳಕೆಗಾಗಿ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಲಾಯಿತು.</p>.<p>ಕ್ಯಾನ್ ಫಿನ್ ಹೋಮ್ಸ್ನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಅಮಿತಾಬ್ ಚಟರ್ಜಿ ಮಾತನಾಡಿ, ಜಿಇಎಫ್ ಆಸ್ಪತ್ರೆಯ ಸೇವೆ ಪರಿಗಣಿಸಿ ಸುಮಾರು ₹ 20 ಲಕ್ಷ ವೆಚ್ಚದ ಆಧುನಿಕ ತಂತ್ರಜ್ಞಾನದ ಸಲಕರಣೆಗಳನ್ನು ಒಳಗೊಂಡ ಆಂಬುಲೆನ್ಸ್ ಅನ್ನು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಅವಶ್ಯಕತೆ ಇರುವ ಇತರೆ ಸೌಲಭ್ಯಗಳನ್ನೂ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.</p>.<p>ಆಸ್ಪತ್ರೆ ಅಧ್ಯಕ್ಷ ಡಾ.ಸುಂದರರಾಮ್ ಶೆಟ್ಟಿ, ಆಸ್ಪತ್ರೆಯು ಕಳೆದ 27 ವರ್ಷಗಳ ಹಿಂದೆ ಗ್ಲೋಬಲ್ ಐ ಫೌಂಡೇಶನ್ ಎಂಬ ಸಾಮಾಜಿಕ ಸೇವಾ ಸಂಸ್ಥೆಯಡಿ ಸಣ್ಣದಾಗಿ ಪ್ರಾರಂಭವಾಯಿತು. ಇದುವರೆಗೂ ಸುಮಾರು 8 ಲಕ್ಷ ಜನರಿಗೆ ನೇತ್ರ ತಪಾಸಣೆ ನಡೆಸಿ ಅಗತ್ಯವಿರುವ 1.5 ಲಕ್ಷ ಜನರಿಗೆ ರೋಟರಿ ಸಂಸ್ಥೆ, ರಾಷ್ಟ್ರೀಯ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ ಎಂದರು.</p>.<p>ಆಸ್ಪತ್ರೆಯು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಆಯೋಜಿಸುವುದರೊಂದಿಗೆ ಸಾರ್ವಜನಿಕರಿಗೆ ನೇತ್ರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಕ್ಯಾನ್ ಫಿನ್ ಹೋಮ್ಸ್ನ ಪ್ರಶಾಂತ ಜೋಷಿ, ಜಿಇಎಫ್ ಕಣ್ಣಿನ ಆಸ್ಪತ್ರೆ ಕಾರ್ಯದರ್ಶಿ ಎಂ.ಕೆ. ರಂಜನ್ ಭಂಡಾರಿ, ವ್ಯವಸ್ಥಾಪಕ ಬಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ನಗರದ ಜಿಇಎಫ್ ಕಣ್ಣಿನ ಆಸ್ಪತ್ರೆಗೆ ಕ್ಯಾನ್ ಫಿನ್ ಹೋಮ್ಸ್ನಿಂದ ಆಸ್ಪತ್ರೆಯ ತುರ್ತು ಬಳಕೆಗಾಗಿ ಆಂಬುಲೆನ್ಸ್ ಅನ್ನು ಕೊಡುಗೆಯಾಗಿ ನೀಡಲಾಯಿತು.</p>.<p>ಕ್ಯಾನ್ ಫಿನ್ ಹೋಮ್ಸ್ನ ಡೆಪ್ಯುಟಿ ಮ್ಯಾನೇಜಿಂಗ್ ಡೈರೆಕ್ಟರ್ ಅಮಿತಾಬ್ ಚಟರ್ಜಿ ಮಾತನಾಡಿ, ಜಿಇಎಫ್ ಆಸ್ಪತ್ರೆಯ ಸೇವೆ ಪರಿಗಣಿಸಿ ಸುಮಾರು ₹ 20 ಲಕ್ಷ ವೆಚ್ಚದ ಆಧುನಿಕ ತಂತ್ರಜ್ಞಾನದ ಸಲಕರಣೆಗಳನ್ನು ಒಳಗೊಂಡ ಆಂಬುಲೆನ್ಸ್ ಅನ್ನು ಸಂಸ್ಥೆಯ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ಅವಶ್ಯಕತೆ ಇರುವ ಇತರೆ ಸೌಲಭ್ಯಗಳನ್ನೂ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದರು.</p>.<p>ಆಸ್ಪತ್ರೆ ಅಧ್ಯಕ್ಷ ಡಾ.ಸುಂದರರಾಮ್ ಶೆಟ್ಟಿ, ಆಸ್ಪತ್ರೆಯು ಕಳೆದ 27 ವರ್ಷಗಳ ಹಿಂದೆ ಗ್ಲೋಬಲ್ ಐ ಫೌಂಡೇಶನ್ ಎಂಬ ಸಾಮಾಜಿಕ ಸೇವಾ ಸಂಸ್ಥೆಯಡಿ ಸಣ್ಣದಾಗಿ ಪ್ರಾರಂಭವಾಯಿತು. ಇದುವರೆಗೂ ಸುಮಾರು 8 ಲಕ್ಷ ಜನರಿಗೆ ನೇತ್ರ ತಪಾಸಣೆ ನಡೆಸಿ ಅಗತ್ಯವಿರುವ 1.5 ಲಕ್ಷ ಜನರಿಗೆ ರೋಟರಿ ಸಂಸ್ಥೆ, ರಾಷ್ಟ್ರೀಯ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನೆರವೇರಿಸಲಾಗಿದೆ ಎಂದರು.</p>.<p>ಆಸ್ಪತ್ರೆಯು ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ನೇತ್ರ ತಪಾಸಣಾ ಶಿಬಿರ ಆಯೋಜಿಸುವುದರೊಂದಿಗೆ ಸಾರ್ವಜನಿಕರಿಗೆ ನೇತ್ರ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯದಲ್ಲಿ ನಿರತವಾಗಿದೆ ಎಂದು ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಕ್ಯಾನ್ ಫಿನ್ ಹೋಮ್ಸ್ನ ಪ್ರಶಾಂತ ಜೋಷಿ, ಜಿಇಎಫ್ ಕಣ್ಣಿನ ಆಸ್ಪತ್ರೆ ಕಾರ್ಯದರ್ಶಿ ಎಂ.ಕೆ. ರಂಜನ್ ಭಂಡಾರಿ, ವ್ಯವಸ್ಥಾಪಕ ಬಾಲಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>