<p><strong>ಆನೇಕಲ್:</strong> ಸೂರ್ಯಸಿಟಿ ಸಮೀಪದ ಹಳೆ ಚಂದಾಪುರ ಬಳಿ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p> ಲಕ್ಷ್ಮಿದೇವಿ(41) ಎಂಬ ಮಹಿಳೆಯನ್ನು ಆಕೆಯ ಮಗ ರಮೇಶ್ (21) ಮೊಬೈಲ್ ಚಾರ್ಜಿಂಗ್ ವೈರ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಚಿಕ್ಕಹಳ್ಳಿಯ ಈ ಕುಟುಂಬ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದಿತ್ತು. </p><p>ಬೆಂಗಳೂರು ಹೊರವಲಯ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ವಾಸವಿದ್ದರು. ಕೂಲಿ ಮಾಡಿಕೊಂಡು ಕುಟುಂಬ ಜೀವನ ಸಾಗಿಸುತ್ತಿತು. </p><p>ತಾಯಿ ಕೂಲಿ ಕೆಲಸ ಮಾಡುತ್ತಿದ್ದರು. ಯುವಕನ ತಂದೆ ಮತ್ತು ಸಹೋದರ ಜೊತೆಯಲ್ಲಿದ್ದರು. ಯುವಕನ ತಂದೆ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು.</p><p>ಮಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಶನಿವಾರ ರಾತ್ರಿಯೂ ಕುಡಿದು ಬಂದು ತಾಯಿ ಲಕ್ಷ್ಮಿದೇವಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ತಾಯಿ, ಮಗನ ಸಾವಿನಲ್ಲಿ ಅಂತ್ಯಗೊಂಡಿದೆ.</p><p>ಸ್ಥಳಕ್ಕೆ ಸೂರ್ಯನಗರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹಗಳನ್ನ ಅತ್ತಿಬೆಲೆ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಸೂರ್ಯಸಿಟಿ ಸಮೀಪದ ಹಳೆ ಚಂದಾಪುರ ಬಳಿ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.</p><p> ಲಕ್ಷ್ಮಿದೇವಿ(41) ಎಂಬ ಮಹಿಳೆಯನ್ನು ಆಕೆಯ ಮಗ ರಮೇಶ್ (21) ಮೊಬೈಲ್ ಚಾರ್ಜಿಂಗ್ ವೈರ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಿದ್ದಾನೆ. ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ಚಿಕ್ಕಹಳ್ಳಿಯ ಈ ಕುಟುಂಬ ಕೆಲ ವರ್ಷಗಳ ಹಿಂದೆ ಕೆಲಸ ಅರಸಿಕೊಂಡು ಬೆಂಗಳೂರಿಗೆ ಬಂದಿತ್ತು. </p><p>ಬೆಂಗಳೂರು ಹೊರವಲಯ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ವಾಸವಿದ್ದರು. ಕೂಲಿ ಮಾಡಿಕೊಂಡು ಕುಟುಂಬ ಜೀವನ ಸಾಗಿಸುತ್ತಿತು. </p><p>ತಾಯಿ ಕೂಲಿ ಕೆಲಸ ಮಾಡುತ್ತಿದ್ದರು. ಯುವಕನ ತಂದೆ ಮತ್ತು ಸಹೋದರ ಜೊತೆಯಲ್ಲಿದ್ದರು. ಯುವಕನ ತಂದೆ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು.</p><p>ಮಗ ಕುಡಿದು ಬಂದು ಗಲಾಟೆ ಮಾಡುತ್ತಿದ್ದ. ಶನಿವಾರ ರಾತ್ರಿಯೂ ಕುಡಿದು ಬಂದು ತಾಯಿ ಲಕ್ಷ್ಮಿದೇವಿ ಜೊತೆ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ತಾಯಿ, ಮಗನ ಸಾವಿನಲ್ಲಿ ಅಂತ್ಯಗೊಂಡಿದೆ.</p><p>ಸ್ಥಳಕ್ಕೆ ಸೂರ್ಯನಗರ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದರು. ಮೃತ ದೇಹಗಳನ್ನ ಅತ್ತಿಬೆಲೆ ಆಕ್ಸ್ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>