<p><strong>ಆನೇಕಲ್: </strong>ತಾಲ್ಲೂಕಿಗೆ ಯಾವುದೇ ಹೊಸ ಯೋಜನೆ ಘೋಷಣೆ ಆಗದಿದ್ದರೂ ಬನ್ನೇರುಘ್ಟ ಜೈವಿಕ ಉದ್ಯಾನದಲ್ಲಿ ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆ ಹಾಗೂ ₹5ಕೋಟಿ ವೆಚ್ಚ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.</p>.<p>ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಅನುದಾನ ಮೀಸಲಿಟ್ಟಿರುವುದು ಪ್ರಾಣಿಪ್ರಿಯರಿಗೆ ಖುಷಿ ನೀಡಿದೆ. ಇದರಿಂದ ಚಿರತೆಗಳ ಸಂರಕ್ಷಣೆ ಸಾಧ್ಯವಾಗಲಿದೆ. ಜತೆಗೆ ಕಾಡು–ನಾಡಿನ ಗಡಿ ಪ್ರದೇಶದಲ್ಲಿ ಚಿರತೆ ಹಾವಳಿ ತಪ್ಪಿಸಲು ಅನುಕೂಲವಾಗಲಿದ್ದು, ಪ್ರಾಣಿ–ಮಾನವ ಸಂಘರ್ಷ ತಡೆಗೆ ಪೂರಕವಾಗಿದೆ. ಕಾರ್ಯಾಚರಣೆಗಳ ಮೂಲಕ ರಾಜ್ಯದ ವಿವಿಧತೆಯಿಂದ ಚಿರತೆಗಳನ್ನು ಸಂರಕ್ಷಿಸಿ ಬನ್ನೇರುಘಟ್ಟಕ್ಕೆ ತಂದು ಪುನರ್ವಸತಿ ಕಲ್ಪಿಸಲು ಹೆಚ್ಚು ಅನುಕುಲವಾಗುತ್ತದೆ ಎಂದು ವನ್ಯಜೀವಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<p>ಆನೇಕಲ್ ತಾಲ್ಲೂಕು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಪಟ್ಟಣ. ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕ ಪ್ರದೇಶಗಳಿವೆ. ಹೀಗಾಗಿ ಈ ಬಾರಿ ಕರ್ನಾಟಕ ಸರ್ಕಾರದ ಬಜೆಟ್ನಲ್ಲಿ ಅತ್ತಿಬೆಲೆ ವರೆಗೆ ಮೆಟ್ರೊ ರೈಲು ವಿಸ್ತರಣೆ ಮಾಡಬೇಕೆಂದು ಪ್ರಮುಖ ಬೇಡಿಕೆಯಾಗಿತ್ತು. ಐದು ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ನಿರೀಕ್ಷೆ ಮಾಡಲಾಗಿತ್ತು. ಆದರೆ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ.</p>.<p>ಕೈಗಾರಿಕ ಪ್ರದೇಶಗಳಲ್ಲಿನ ಮೂಲಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ದೊರೆತರೆ ಕೈಗಾರಿಕ ಪ್ರದೇಶಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವುದು, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪೊಲೀಸ್ ಚೌಕಿ ಸೇರಿದಂತೆ ಮೂಲಸೌಲಭ್ಯ ದೊರೆಯುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ಕಾರ್ಮಿಕ ಮುಖಂಡ ಡಿ.ಮಹದೇಶ್ ತಿಳಿಸಿದರು.</p>.<p>ಆನೇಕಲ್ ತಾಲ್ಲೂಕಿಗೆ ಸಂಚಾರ ಪೊಲೀಸ್ ಠಾಣೆ ಮಂಜೂರಾಗುತ್ತದೆ ಎಂದು ಬಲವಾದ ನಂಬಿಕೆಯಿತ್ತು. ಬೆಂಗಳೂರು ನಗರ ಜಿಲ್ಲೆಯಲ್ಲಿದ್ದರು ಪೊಲೀಸ್ ವ್ಯಾಪ್ತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದೆ. ಹಾಗಾಗಿ ಕಾನೂನು ಮತ್ತು ಸುವ್ಯವಸ್ಥೆಯ ನಡುವೆ ಸಂಚಾರ ನಿಯಮಗಳನ್ನು ಪಾಲಿಸಲು ಕಷ್ಟವಾಗಿತ್ತು. ಆದರೆ ಸಂಚಾರ ಪೊಲೀಸ್ ಠಾಣೆ ಮಂಜೂರಾಗದೇ ಇರುವುದು ಬೇಸರ ತರಿಸಿದೆ ಎಂದು ಆನೇಕಲ್ನ ಭರತ್ ತಿಳಿಸಿದರು.</p>.<h2>ಜೆನ್ ಜಿಗೆ ಕೊಡುಗೆ ಏನಿಲ್ಲ?</h2>.<p>ಬಜೆಟ್ನಲ್ಲಿ ಕೇವಲ ಒಂದು ವರ್ಗವನ್ನು ಓಲೈಸಲು ಬಜೆಟ್ ಮಂಡಿಸಿದಂತಿದೆ. ತಾಲ್ಲೂಕಿಗೆ ಯಾವುದೇ ವಿಶೇಷ ಅನುದಾನ ಮಂಜೂರಾಗಿಲ್ಲ. ರಾಜ್ಯದಲ್ಲಿ ಶೇ 55 ರಷ್ಟು ಯುವಕರಿದ್ದಾರೆ. ಜೆನ್ಜಿ ಯುವಕರಿದ್ದಾರೆ. ಇವರ ಕೌಶಲ ವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕಾಗಿತ್ತು. </p>.<p><strong>ಭರತ್, ಆನೇಕಲ್ ನಿವಾಸಿ</strong></p>.<h2>ಅಲ್ಪಸಂಖ್ಯಾತರ ಅಭಿವೃದ್ಧಿ </h2>.<p>ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿರುವುದು ಶ್ಲಾಘನೀಯ. ಸಮಾಜದಲ್ಲಿ ಹಿಂದುಳಿದವರನ್ನು ಮುನ್ನೆಲೆಗೆ ತರಲು ಬಜೆಟ್ ಉಪಯುಕ್ತವಾಗಿದೆ. ಅಲ್ಪಸಂಖ್ಯಾತರ ಪ್ರತಿಭಾವಂತ ವಿದ್ಯಾರ್ಥಿಗಳು ಎಂಜಿನಿಯರ್, ವೈದ್ಯರಾಗಲು ಪ್ರೋತ್ಸಾಹ, 20 ವಸತಿ ಶಾಲೆಗಳ ಮಕ್ಕಳಿಗೆ ಕೆ–ಸೆಟ್, ಜೆಇಇ, ನೀಟ್ ಪರೀಕ್ಷೆಗಳಿಗೆ ತರಬೇತಿ ಕಲ್ಪಿಸಿರುವುದು ಶ್ಲಾಘನೀಯ. ಐದು ಸಾವಿರ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಮೌಲಾನ ಅಜಾದ್ ಮಾದರಿ ಶಾಲೆ, ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಮೀಸಲಿಟ್ಟಿರುವುದು ಅಲ್ಪಸಂಖ್ಯಾತರ ಶಿಕ್ಷಣ ಅಭಿವೃದ್ಧಿಗೆ ಪೂರಕವಾಗಿದೆ.</p>.<p><strong>ಆಸಿಫ್, ಆನೇಕಲ್ ನಿವಾಸಿ</strong></p>.<h2>ಮಹಿಳಾ ಸಬಲೀಕರಣ</h2>.<p>ಮಾತೃಪೂರ್ಣ ಯೋಜನೆಯಡಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿಯೇ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಆದ್ಯತೆ ನೀಡಿರುವುದು ಶ್ಲಾಘನೀಯ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ ವಿತರಣೆ, ಮಹಿಳಾ ಉದ್ಯಮಕ್ಕೆ ಪೂರಕ ವಾತಾವರಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿರುವುದು ಮಹಿಳಾ ಸಬಲೀಕರಣಕ್ಕೆ ವರದಾನವಾಗಿದೆ.</p>.<p><strong>ರಾಜೇಶ್ವರಿ ಗೋಪಿನಾಥ್, ತಿಗಳಚೌಡದೇನಹಳ್ಳಿ ನಿವಾಸಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿಗೆ ಯಾವುದೇ ಹೊಸ ಯೋಜನೆ ಘೋಷಣೆ ಆಗದಿದ್ದರೂ ಬನ್ನೇರುಘ್ಟ ಜೈವಿಕ ಉದ್ಯಾನದಲ್ಲಿ ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆ ಹಾಗೂ ₹5ಕೋಟಿ ವೆಚ್ಚ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ.</p>.<p>ಚಿರತೆ ಪುನರ್ವಸತಿ ಕೇಂದ್ರ ಸ್ಥಾಪನೆಗೆ ಅನುದಾನ ಮೀಸಲಿಟ್ಟಿರುವುದು ಪ್ರಾಣಿಪ್ರಿಯರಿಗೆ ಖುಷಿ ನೀಡಿದೆ. ಇದರಿಂದ ಚಿರತೆಗಳ ಸಂರಕ್ಷಣೆ ಸಾಧ್ಯವಾಗಲಿದೆ. ಜತೆಗೆ ಕಾಡು–ನಾಡಿನ ಗಡಿ ಪ್ರದೇಶದಲ್ಲಿ ಚಿರತೆ ಹಾವಳಿ ತಪ್ಪಿಸಲು ಅನುಕೂಲವಾಗಲಿದ್ದು, ಪ್ರಾಣಿ–ಮಾನವ ಸಂಘರ್ಷ ತಡೆಗೆ ಪೂರಕವಾಗಿದೆ. ಕಾರ್ಯಾಚರಣೆಗಳ ಮೂಲಕ ರಾಜ್ಯದ ವಿವಿಧತೆಯಿಂದ ಚಿರತೆಗಳನ್ನು ಸಂರಕ್ಷಿಸಿ ಬನ್ನೇರುಘಟ್ಟಕ್ಕೆ ತಂದು ಪುನರ್ವಸತಿ ಕಲ್ಪಿಸಲು ಹೆಚ್ಚು ಅನುಕುಲವಾಗುತ್ತದೆ ಎಂದು ವನ್ಯಜೀವಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.</p>.<p>ಆನೇಕಲ್ ತಾಲ್ಲೂಕು ಬೆಂಗಳೂರು ನಗರಕ್ಕೆ ಹೊಂದಿಕೊಂಡಿರುವ ಪಟ್ಟಣ. ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕ ಪ್ರದೇಶಗಳಿವೆ. ಹೀಗಾಗಿ ಈ ಬಾರಿ ಕರ್ನಾಟಕ ಸರ್ಕಾರದ ಬಜೆಟ್ನಲ್ಲಿ ಅತ್ತಿಬೆಲೆ ವರೆಗೆ ಮೆಟ್ರೊ ರೈಲು ವಿಸ್ತರಣೆ ಮಾಡಬೇಕೆಂದು ಪ್ರಮುಖ ಬೇಡಿಕೆಯಾಗಿತ್ತು. ಐದು ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಅನುದಾನ ನಿರೀಕ್ಷೆ ಮಾಡಲಾಗಿತ್ತು. ಆದರೆ ನಿರೀಕ್ಷೆ ನಿರೀಕ್ಷೆಯಾಗಿಯೇ ಉಳಿದಿದೆ.</p>.<p>ಕೈಗಾರಿಕ ಪ್ರದೇಶಗಳಲ್ಲಿನ ಮೂಲಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚು ಅನುದಾನ ದೊರೆತರೆ ಕೈಗಾರಿಕ ಪ್ರದೇಶಗಳಲ್ಲಿ ರಸ್ತೆಗುಂಡಿಗಳನ್ನು ಮುಚ್ಚುವುದು, ಸಿಸಿಟಿವಿ ಕ್ಯಾಮೆರಾ ಅಳವಡಿಕೆ, ಪೊಲೀಸ್ ಚೌಕಿ ಸೇರಿದಂತೆ ಮೂಲಸೌಲಭ್ಯ ದೊರೆಯುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ ಎಂದು ಕಾರ್ಮಿಕ ಮುಖಂಡ ಡಿ.ಮಹದೇಶ್ ತಿಳಿಸಿದರು.</p>.<p>ಆನೇಕಲ್ ತಾಲ್ಲೂಕಿಗೆ ಸಂಚಾರ ಪೊಲೀಸ್ ಠಾಣೆ ಮಂಜೂರಾಗುತ್ತದೆ ಎಂದು ಬಲವಾದ ನಂಬಿಕೆಯಿತ್ತು. ಬೆಂಗಳೂರು ನಗರ ಜಿಲ್ಲೆಯಲ್ಲಿದ್ದರು ಪೊಲೀಸ್ ವ್ಯಾಪ್ತಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿದೆ. ಹಾಗಾಗಿ ಕಾನೂನು ಮತ್ತು ಸುವ್ಯವಸ್ಥೆಯ ನಡುವೆ ಸಂಚಾರ ನಿಯಮಗಳನ್ನು ಪಾಲಿಸಲು ಕಷ್ಟವಾಗಿತ್ತು. ಆದರೆ ಸಂಚಾರ ಪೊಲೀಸ್ ಠಾಣೆ ಮಂಜೂರಾಗದೇ ಇರುವುದು ಬೇಸರ ತರಿಸಿದೆ ಎಂದು ಆನೇಕಲ್ನ ಭರತ್ ತಿಳಿಸಿದರು.</p>.<h2>ಜೆನ್ ಜಿಗೆ ಕೊಡುಗೆ ಏನಿಲ್ಲ?</h2>.<p>ಬಜೆಟ್ನಲ್ಲಿ ಕೇವಲ ಒಂದು ವರ್ಗವನ್ನು ಓಲೈಸಲು ಬಜೆಟ್ ಮಂಡಿಸಿದಂತಿದೆ. ತಾಲ್ಲೂಕಿಗೆ ಯಾವುದೇ ವಿಶೇಷ ಅನುದಾನ ಮಂಜೂರಾಗಿಲ್ಲ. ರಾಜ್ಯದಲ್ಲಿ ಶೇ 55 ರಷ್ಟು ಯುವಕರಿದ್ದಾರೆ. ಜೆನ್ಜಿ ಯುವಕರಿದ್ದಾರೆ. ಇವರ ಕೌಶಲ ವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕಾಗಿತ್ತು. </p>.<p><strong>ಭರತ್, ಆನೇಕಲ್ ನಿವಾಸಿ</strong></p>.<h2>ಅಲ್ಪಸಂಖ್ಯಾತರ ಅಭಿವೃದ್ಧಿ </h2>.<p>ಬಜೆಟ್ನಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಿರುವುದು ಶ್ಲಾಘನೀಯ. ಸಮಾಜದಲ್ಲಿ ಹಿಂದುಳಿದವರನ್ನು ಮುನ್ನೆಲೆಗೆ ತರಲು ಬಜೆಟ್ ಉಪಯುಕ್ತವಾಗಿದೆ. ಅಲ್ಪಸಂಖ್ಯಾತರ ಪ್ರತಿಭಾವಂತ ವಿದ್ಯಾರ್ಥಿಗಳು ಎಂಜಿನಿಯರ್, ವೈದ್ಯರಾಗಲು ಪ್ರೋತ್ಸಾಹ, 20 ವಸತಿ ಶಾಲೆಗಳ ಮಕ್ಕಳಿಗೆ ಕೆ–ಸೆಟ್, ಜೆಇಇ, ನೀಟ್ ಪರೀಕ್ಷೆಗಳಿಗೆ ತರಬೇತಿ ಕಲ್ಪಿಸಿರುವುದು ಶ್ಲಾಘನೀಯ. ಐದು ಸಾವಿರ ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆ, ಮೌಲಾನ ಅಜಾದ್ ಮಾದರಿ ಶಾಲೆ, ಉರ್ದು ಶಾಲೆಗಳ ಅಭಿವೃದ್ಧಿಗೆ ₹400 ಕೋಟಿ ಮೀಸಲಿಟ್ಟಿರುವುದು ಅಲ್ಪಸಂಖ್ಯಾತರ ಶಿಕ್ಷಣ ಅಭಿವೃದ್ಧಿಗೆ ಪೂರಕವಾಗಿದೆ.</p>.<p><strong>ಆಸಿಫ್, ಆನೇಕಲ್ ನಿವಾಸಿ</strong></p>.<h2>ಮಹಿಳಾ ಸಬಲೀಕರಣ</h2>.<p>ಮಾತೃಪೂರ್ಣ ಯೋಜನೆಯಡಿಯಲ್ಲಿ ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿಯೇ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಬಜೆಟ್ನಲ್ಲಿ ಆದ್ಯತೆ ನೀಡಿರುವುದು ಶ್ಲಾಘನೀಯ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ಹೆಚ್ಚುವರಿಯಾಗಿ ಒಂದು ಜೊತೆ ಸಮವಸ್ತ್ರ ವಿತರಣೆ, ಮಹಿಳಾ ಉದ್ಯಮಕ್ಕೆ ಪೂರಕ ವಾತಾವರಣ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಿರುವುದು ಮಹಿಳಾ ಸಬಲೀಕರಣಕ್ಕೆ ವರದಾನವಾಗಿದೆ.</p>.<p><strong>ರಾಜೇಶ್ವರಿ ಗೋಪಿನಾಥ್, ತಿಗಳಚೌಡದೇನಹಳ್ಳಿ ನಿವಾಸಿ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>