<p><strong>ಆನೇಕಲ್: </strong>ಪಟ್ಟಣದಲ್ಲಿ ಬಿಎಸ್ಪಿ ಆನೇಕಲ್ ವಿಧಾನಸಭಾ ಕ್ಷೇತ್ರ ಘಟಕದಿಂದ ‘ಒಂದು ವೋಟು ಕೊಡಿ ಒಂದು ನೋಟು ಕೊಡಿ’ ಅಭಿಯಾನದ ಮೂಲಕ ಪಕ್ಷದ ಸಂಘಟನೆಗೆ ಚಾಲನೆ ನೀಡಲಾಯಿತು.</p>.<p>ಬಿಎಸ್ಪಿ ಆನೇಕಲ್ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೆ.ಯಲ್ಲಪ್ಪ ಮಾತನಾಡಿ, ‘ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜನತಾದಳ ಮೂರು ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿ ಬಿಎಸ್ಪಿಗೆ ಉತ್ತಮ ವಾತಾವರಣವಿದ್ದು ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲು ಒಂದು ವೋಟು ಕೊಡಿ ಒಂದು ನೋಟು ಕೊಡಿ ಅಭಿಯಾನ ಆಯೋಜಿಸಲಾಗಿದೆ’ ಎಂದರು.</p>.<p>ಪಕ್ಷ ಸಂಘಟಿಸಲು ಆರ್ಥಿಕ ಸಂಪನ್ಮೂಲದ ಅವಶ್ಯಕತೆ ಹೆಚ್ಚಿದೆ. ಬಡವರ ಪಕ್ಷವಾಗಿದ್ದು ಜನರಿಂದ ಒಂದು ವೋಟು ಮತ್ತು ಒಂದು ನೋಟು ಪಡೆದು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲಾಗುವುದು. ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಸಭೆ ಸೇರಿದಂತೆ ವಿವಿಧ ಸಂಘಟನಾತ್ಮಕ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪಟ್ಟಣದಲ್ಲಿ ಬಿಎಸ್ಪಿ ಆನೇಕಲ್ ವಿಧಾನಸಭಾ ಕ್ಷೇತ್ರ ಘಟಕದಿಂದ ‘ಒಂದು ವೋಟು ಕೊಡಿ ಒಂದು ನೋಟು ಕೊಡಿ’ ಅಭಿಯಾನದ ಮೂಲಕ ಪಕ್ಷದ ಸಂಘಟನೆಗೆ ಚಾಲನೆ ನೀಡಲಾಯಿತು.</p>.<p>ಬಿಎಸ್ಪಿ ಆನೇಕಲ್ ವಿಧಾನಸಭಾ ಕ್ಷೇತ್ರ ಅಧ್ಯಕ್ಷ ಕೆ.ಯಲ್ಲಪ್ಪ ಮಾತನಾಡಿ, ‘ರಾಜ್ಯದ ಜನತೆ ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜನತಾದಳ ಮೂರು ಪಕ್ಷಗಳ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಹಾಗಾಗಿ ಈ ಬಾರಿ ಬಿಎಸ್ಪಿಗೆ ಉತ್ತಮ ವಾತಾವರಣವಿದ್ದು ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಲು ಒಂದು ವೋಟು ಕೊಡಿ ಒಂದು ನೋಟು ಕೊಡಿ ಅಭಿಯಾನ ಆಯೋಜಿಸಲಾಗಿದೆ’ ಎಂದರು.</p>.<p>ಪಕ್ಷ ಸಂಘಟಿಸಲು ಆರ್ಥಿಕ ಸಂಪನ್ಮೂಲದ ಅವಶ್ಯಕತೆ ಹೆಚ್ಚಿದೆ. ಬಡವರ ಪಕ್ಷವಾಗಿದ್ದು ಜನರಿಂದ ಒಂದು ವೋಟು ಮತ್ತು ಒಂದು ನೋಟು ಪಡೆದು ಪಕ್ಷವನ್ನು ಬೂತ್ ಮಟ್ಟದಿಂದ ಸಂಘಟಿಸಲಾಗುವುದು. ಮುಂದಿನ ದಿನಗಳಲ್ಲಿ ಕಾರ್ಯಕರ್ತರು ಸಭೆ ಸೇರಿದಂತೆ ವಿವಿಧ ಸಂಘಟನಾತ್ಮಕ ಕಾರ್ಯಕ್ರಮ ರೂಪಿಸಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>