<p><strong>ಆನೇಕಲ್:</strong> ತಾಲ್ಲೂಕಿನ ಚಿಕ್ಕನಾಗಮಂಗಲ ಗ್ರಾಮದ ಬಳಿ ಇರುವ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕವನ್ನು ಬೇರಡೆಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಮತ್ತು ಅಪಾರ್ಟ್ಮೆಂಟ್ ನಿವಾಸಿಗಳು ಘಟಕದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಚಿಕ್ಕನಾಗಮಂಗಲದ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಸುತ್ತಲಿನ ಪರಿಸರ ಕಲುಷಿತಗೊಳ್ಳುತ್ತಿದೆ. ಸ್ಥಳೀಯರು ಆರೋಗ್ಯ ಸಮಸ್ಯೆಯಿಂದ ಪರದಾಡುವ ಉಂಟಾಗಿದೆ. ಸಂಸ್ಕರಣ ಘಟಕದಿಂದ ಹೊರಬರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದಾಗಿ ಗ್ರಾಮಸ್ಥರು ಪರದಾಡುವಂತಾಗಿದೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜೇಶ್ ರೆಡ್ಡಿ ತಿಳಿಸಿದರು.</p>.<p>ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಇಲ್ಲದಂತಾಗಿದೆ ಹಾಗಾಗಿ ಸರ್ಕಾರ ದೊಡ್ಡ ನಾಗಮಂಗಲ ಗ್ರಾಮಕ್ಕೆ ಕಾವೇರಿ ನೀರು ಪೂರೈಸಬೇಕು. ಘಟಕದಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸಂಬಂಧಪಟ್ಟ ಅಧಿಕಾರಿಗಳು ಪ್ರತಿದಿನ ಔಷಧಿಯನ್ನು ಸಿಂಪಡಿಸಬೇಕು. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ದೊಡ್ಡನಾಗಮಂಗಲ ಆಂಜಿ, ಸುರೇಶ್, ಮೋಹನ್, ರಾಜು, ಕೇಬಲ್ ರಾಜು, ದಿನೇಶ್, ಪ್ರಣಯ್, ಅಮರ್, ರವಿತೇಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ಚಿಕ್ಕನಾಗಮಂಗಲ ಗ್ರಾಮದ ಬಳಿ ಇರುವ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕವನ್ನು ಬೇರಡೆಗೆ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸ್ಥಳೀಯರು ಮತ್ತು ಅಪಾರ್ಟ್ಮೆಂಟ್ ನಿವಾಸಿಗಳು ಘಟಕದ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಚಿಕ್ಕನಾಗಮಂಗಲದ ಬಿಬಿಎಂಪಿ ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಸುತ್ತಲಿನ ಪರಿಸರ ಕಲುಷಿತಗೊಳ್ಳುತ್ತಿದೆ. ಸ್ಥಳೀಯರು ಆರೋಗ್ಯ ಸಮಸ್ಯೆಯಿಂದ ಪರದಾಡುವ ಉಂಟಾಗಿದೆ. ಸಂಸ್ಕರಣ ಘಟಕದಿಂದ ಹೊರಬರುವ ಕಲುಷಿತ ನೀರು ಮತ್ತು ಕಲುಷಿತ ಗಾಳಿಯಿಂದಾಗಿ ಗ್ರಾಮಸ್ಥರು ಪರದಾಡುವಂತಾಗಿದೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ರಾಜೇಶ್ ರೆಡ್ಡಿ ತಿಳಿಸಿದರು.</p>.<p>ಘನತ್ಯಾಜ್ಯ ಸಂಸ್ಕರಣ ಘಟಕದಿಂದಾಗಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರು ಇಲ್ಲದಂತಾಗಿದೆ ಹಾಗಾಗಿ ಸರ್ಕಾರ ದೊಡ್ಡ ನಾಗಮಂಗಲ ಗ್ರಾಮಕ್ಕೆ ಕಾವೇರಿ ನೀರು ಪೂರೈಸಬೇಕು. ಘಟಕದಿಂದಾಗಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಅಳಲು ತೋಡಿಕೊಂಡರು.</p>.<p>ಸಂಬಂಧಪಟ್ಟ ಅಧಿಕಾರಿಗಳು ಪ್ರತಿದಿನ ಔಷಧಿಯನ್ನು ಸಿಂಪಡಿಸಬೇಕು. ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಸಂಬಂಧಿಸಿದಂತೆ ಸರ್ಕಾರವು ಸಮಿತಿಯನ್ನು ರಚಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ದೊಡ್ಡನಾಗಮಂಗಲ ಆಂಜಿ, ಸುರೇಶ್, ಮೋಹನ್, ರಾಜು, ಕೇಬಲ್ ರಾಜು, ದಿನೇಶ್, ಪ್ರಣಯ್, ಅಮರ್, ರವಿತೇಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>