<p><strong>ಆನೇಕಲ್: </strong>ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ಅವಶ್ಯಕತೆಯಿದೆ. ಐಟಿ ಕಂಪನಿಗಳ ಉದ್ಯೋಗಿಗಳು ತಮ್ಮ ರಜೆ ದಿನಗಳಲ್ಲಿ ಬಿಜೆಪಿ ಹಾಗೂ ದೇಶಕ್ಕಾಗಿ ದುಡಿಯಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯವು ಸದೃಢ ದೇಶಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜಕೀಯ ಕ್ಷೇತ್ರದಲ್ಲಿ ಸೇವೆ ವಿಸ್ತರಿಸುವ ಅಭಿಲಾಷೆಯಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ. ಸರ್ಕಾರಿ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಮಾಡಿದ ಅನುಭವವಿದೆ. ಈ ಅನುಭವ ಮತ್ತು ಜ್ಞಾನವನ್ನು ಬಳಸಿ ದೇಶದಲ್ಲಿ ಉತ್ತಮ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವ ಮೂಲಕ ಜನಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಮೂಲಸೌಲಭ್ಯ, ಕೈಗಾರಿಕೆಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಲಾಗಿದ್ದು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.</p>.<p>ನಮೋ ಬ್ರಿಗೇಡ್ನ ಸೂಲಿಬೆಲೆ ಚಕ್ರವರ್ತಿ ಮಾತನಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಮುಖಂಡರಾದ ಟಿ.ವಿ.ಬಾಬು, ಹುಲ್ಲಹಳ್ಳಿ ಶ್ರೀನಿವಾಸ್, ರಾಧಾಕೃಷ್ಣ, ಕೆ.ವಿ.ಶಿವಪ್ಪ, ನಿತಿನ್ ಜಯಣ್ಣ, ಲಕ್ಷ್ಮೀನಾರಾಯಣ್, ರಾಜಶೇಖರರೆಡ್ಡಿ, ಭರತ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಿಜೆಪಿ ಅವಶ್ಯಕತೆಯಿದೆ. ಐಟಿ ಕಂಪನಿಗಳ ಉದ್ಯೋಗಿಗಳು ತಮ್ಮ ರಜೆ ದಿನಗಳಲ್ಲಿ ಬಿಜೆಪಿ ಹಾಗೂ ದೇಶಕ್ಕಾಗಿ ದುಡಿಯಬೇಕು. ಈ ನಿಟ್ಟಿನಲ್ಲಿ ಯುವ ಸಮುದಾಯವು ಸದೃಢ ದೇಶಕ್ಕಾಗಿ ಬಿಜೆಪಿ ಬೆಂಬಲಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ತಿಳಿಸಿದರು.</p>.<p>ತಾಲ್ಲೂಕಿನ ಚಂಬೇನಹಳ್ಳಿಯಲ್ಲಿ ಸರ್ಜಾಪುರ ಸಿಟಿಜನ್ ಫೋರಂ ವತಿಯಿಂದ ಆಯೋಜಿಸಿದ್ದ ಸಂವಾದ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ರಾಜಕೀಯ ಕ್ಷೇತ್ರದಲ್ಲಿ ಸೇವೆ ವಿಸ್ತರಿಸುವ ಅಭಿಲಾಷೆಯಿಂದ ರಾಜಕೀಯ ಪ್ರವೇಶ ಮಾಡಿದ್ದೇನೆ. ಸರ್ಕಾರಿ ಆಸ್ಪತ್ರೆಯನ್ನು ಹೈಟೆಕ್ ಆಸ್ಪತ್ರೆಯನ್ನಾಗಿ ಮಾಡಿದ ಅನುಭವವಿದೆ. ಈ ಅನುಭವ ಮತ್ತು ಜ್ಞಾನವನ್ನು ಬಳಸಿ ದೇಶದಲ್ಲಿ ಉತ್ತಮ ಆರೋಗ್ಯ ಸೌಲಭ್ಯವನ್ನು ಕಲ್ಪಿಸುವ ಮೂಲಕ ಜನಸೇವೆ ಮಾಡಬೇಕು’ ಎಂದು ಹೇಳಿದರು.</p>.<p>ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಆರೋಗ್ಯ, ಶಿಕ್ಷಣ, ಮೂಲಸೌಲಭ್ಯ, ಕೈಗಾರಿಕೆಗಳ ಅಭಿವೃದ್ಧಿಯ ದೃಷ್ಠಿಕೋನ ಹೊಂದಲಾಗಿದ್ದು ಅಭಿವೃದ್ಧಿಗಾಗಿ ಬಿಜೆಪಿಯನ್ನು ಬೆಂಬಲಿಸಬೇಕು. ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂಬುದು ನಮ್ಮ ಉದ್ದೇಶವಾಗಿದೆ ಎಂದರು.</p>.<p>ನಮೋ ಬ್ರಿಗೇಡ್ನ ಸೂಲಿಬೆಲೆ ಚಕ್ರವರ್ತಿ ಮಾತನಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ, ಮುಖಂಡರಾದ ಟಿ.ವಿ.ಬಾಬು, ಹುಲ್ಲಹಳ್ಳಿ ಶ್ರೀನಿವಾಸ್, ರಾಧಾಕೃಷ್ಣ, ಕೆ.ವಿ.ಶಿವಪ್ಪ, ನಿತಿನ್ ಜಯಣ್ಣ, ಲಕ್ಷ್ಮೀನಾರಾಯಣ್, ರಾಜಶೇಖರರೆಡ್ಡಿ, ಭರತ್ ಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>