<p><strong>ಆನೇಕಲ್ : </strong>ತಾಲ್ಲೂಕಿನ ಬಸವನಪುರದ ರಾಕ್ವುಡ್ ಗ್ರೀನ್ ಪಬ್ಲಿಕ್ ಶಾಲೆಯಲ್ಲಿ ಆಕಾಶವಾಣಿ ಬೆಂಗಳೂರು ಮತ್ತು ಮೀಡಿಯಾ ಅಲುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ ಹಾಗೂ ಶಾರದ ವಿಕಾಸ ಟ್ರಸ್ಟ್ ಸಹಯೋಗದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಆಧುನಿಕ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರಿಮಿನಲ್ಗಳು ಮೋಸದಿಂದ ನಿಮ್ಮ ಬ್ಯಾಂಕ್ ಖಾತೆ, ವೈಯಕ್ತಿಕ ವಿವರಗಳಿಗೆ ಕನ್ನ ಹಾಕಿ ನಿಮ್ಮನ್ನು ಸಂಕಷ್ಟಕ್ಕೆ ತಳ್ಳುತ್ತಾರೆ. ಈ ಬಗ್ಗೆ ಜನರು ಎಚ್ಚರವಹಿಸಬೇಕೆಂದು ಹೇಳಿದರು.</p>.<p>ಡಿಜಿಟಲ್ ಬಂಧನ, ಆನ್ಲೈನ್ ಟ್ರೇಡಿಂಗ್ ವಂಚನೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವಂಚನೆ, ಹಣದ ಬ್ಲಾಕ್ ಮೇಲ್ ಮುಂತಾದ ಸೈಬರ್ ವಂಚನೆಯಿಂದ ದೂರವಿರಲು ಬಹಳ ಎಚ್ಚರಿಕೆ ಅವಶ್ಯಕ ಎಂದರು.</p>.<p>ಆಕಾಶವಾಣಿಯ ಸಹಾಯಕ ನಿರ್ದೇಶಕ ಡಾ.ಎ.ಎಸ್.ಶಂಕರನಾರಾಯಣ ಮಾತನಾಡಿದರು. ವಿಜಿಎಸ್ಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ವೆಂಕಟಾಚಲಪತಿ, ಮಾಧ್ಯಮ ಹಳೆಯ ವಿದ್ಯಾರ್ಥಿಗಳ ಸಂಘ ಮಂಗಳಗಂಗೋತ್ರಿ ಅಧ್ಯಕ್ಷ ನವೀನ್ ಅಮ್ಮೆಂಬಳ, ಡೇಟಾ ಭದ್ರತೆ ಕೌನ್ಸಿಲ್ ಆಫ್ ಇಂಡಿಯಾ ಹಿರಿಯ ನಿರ್ದೇಶಕ ಕೆ.ವೆಂಕಟೇಶ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ : </strong>ತಾಲ್ಲೂಕಿನ ಬಸವನಪುರದ ರಾಕ್ವುಡ್ ಗ್ರೀನ್ ಪಬ್ಲಿಕ್ ಶಾಲೆಯಲ್ಲಿ ಆಕಾಶವಾಣಿ ಬೆಂಗಳೂರು ಮತ್ತು ಮೀಡಿಯಾ ಅಲುಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ ಹಾಗೂ ಶಾರದ ವಿಕಾಸ ಟ್ರಸ್ಟ್ ಸಹಯೋಗದಲ್ಲಿ ಸೈಬರ್ ಜಾಗೃತಿ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಆಧುನಿಕ ಯುಗದಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಸೈಬರ್ ಕ್ರಿಮಿನಲ್ಗಳು ಮೋಸದಿಂದ ನಿಮ್ಮ ಬ್ಯಾಂಕ್ ಖಾತೆ, ವೈಯಕ್ತಿಕ ವಿವರಗಳಿಗೆ ಕನ್ನ ಹಾಕಿ ನಿಮ್ಮನ್ನು ಸಂಕಷ್ಟಕ್ಕೆ ತಳ್ಳುತ್ತಾರೆ. ಈ ಬಗ್ಗೆ ಜನರು ಎಚ್ಚರವಹಿಸಬೇಕೆಂದು ಹೇಳಿದರು.</p>.<p>ಡಿಜಿಟಲ್ ಬಂಧನ, ಆನ್ಲೈನ್ ಟ್ರೇಡಿಂಗ್ ವಂಚನೆ, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಿನಲ್ಲಿ ವಂಚನೆ, ಹಣದ ಬ್ಲಾಕ್ ಮೇಲ್ ಮುಂತಾದ ಸೈಬರ್ ವಂಚನೆಯಿಂದ ದೂರವಿರಲು ಬಹಳ ಎಚ್ಚರಿಕೆ ಅವಶ್ಯಕ ಎಂದರು.</p>.<p>ಆಕಾಶವಾಣಿಯ ಸಹಾಯಕ ನಿರ್ದೇಶಕ ಡಾ.ಎ.ಎಸ್.ಶಂಕರನಾರಾಯಣ ಮಾತನಾಡಿದರು. ವಿಜಿಎಸ್ಎಲ್ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಿ.ವಿ.ವೆಂಕಟಾಚಲಪತಿ, ಮಾಧ್ಯಮ ಹಳೆಯ ವಿದ್ಯಾರ್ಥಿಗಳ ಸಂಘ ಮಂಗಳಗಂಗೋತ್ರಿ ಅಧ್ಯಕ್ಷ ನವೀನ್ ಅಮ್ಮೆಂಬಳ, ಡೇಟಾ ಭದ್ರತೆ ಕೌನ್ಸಿಲ್ ಆಫ್ ಇಂಡಿಯಾ ಹಿರಿಯ ನಿರ್ದೇಶಕ ಕೆ.ವೆಂಕಟೇಶ ಮೂರ್ತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>