<p><strong>ಆನೇಕಲ್:</strong> ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಸೋಮವಾರ ಕ್ರಿಕೆಟ್ ಪಂದ್ಯದಲ್ಲಿ ಸೋತ ಮತ್ತು ಗೆದ್ದ ತಂಡಗಳ ನಡುವಿನ ಜಗಳ ಆಟಗಾರನ ದಾರುಣ ಸಾವಿನಲ್ಲಿ ಅಂತ್ಯವಾಗಿದೆ. </p>.<p>ಮೃತ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ರೋಷನ್ ಎಂದು ಗುರುತಿಸಲಾಗಿದೆ.</p>.<p>ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೋತು ಸೋಲಿನ ಬೇಸರದಲ್ಲಿದ್ದ ತಂಡದ ಪ್ರಶಾಂತ್ ಪಂದ್ಯಾವಳಿ ನಡೆದ ಜಾಗದಲ್ಲಿಯೇ ಮದ್ಯ ಕುಡಿಯುತ್ತಿದ್ದ. ಸಮೀಪದಲ್ಲಿಯೇ ಗೆಲುವಿನ ಸಂಭ್ರಮದಲ್ಲಿದ್ದ ಮತ್ತೊಂದು ತಂಡದ ಸದಸ್ಯರು ಪಾರ್ಟಿ ಮಾಡುತ್ತಿದ್ದರು. </p>.<p>ಪಾರ್ಟಿಯಲ್ಲಿದ್ದ ರೋಷನ್ ಬಿಯರ್ ಬಾಟಲಿಯನ್ನು ಪ್ರಶಾಂತ್ ಮೇಲೆ ಎಸೆದ. ಇದರಿಂದ ಕೋಪಗೊಂಡ ಪ್ರಶಾಂತ್ ರೋಷನ್ ಜಗಳ ತೆಗೆದ. ಆಗ ರೋಷನ್ ಭಯದಿಂದ ಕಾರು ಏರಿದ್ದಾನೆ. ಪ್ರಶಾಂತ್ ಕೂಡ ಅದೇ ಕಾರೊಳಗೆ ತೂರಿ ರೋಷನ್ ಹಿಡಿಯಲು ಮುಂದಾದ.</p>.<p>ಕಾರು ಚಲಾಯಿಸುತ್ತಿದ್ದ ರೋಷನ್ ಅಡ್ಡಾದಿಡ್ಡಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಈ ಘಟನೆಯನ್ನು ಅಪಘಾತ ಎಂದು ಬಿಂಬಿಸಲಾಗಿತ್ತು ಪೊಲೀಸರು ತನಿಖೆ ನಂತರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಶಂಕೆ ಬಂದಿದೆ. ತನಿಖೆ ನಡೆಸಿದಾಗ ಮಾಹಿತಿ ದೊರೆತಿದೆ.</p>.<p>ಆರೋಪಿ ರೋಷನ್ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ಸೋಮವಾರ ಕ್ರಿಕೆಟ್ ಪಂದ್ಯದಲ್ಲಿ ಸೋತ ಮತ್ತು ಗೆದ್ದ ತಂಡಗಳ ನಡುವಿನ ಜಗಳ ಆಟಗಾರನ ದಾರುಣ ಸಾವಿನಲ್ಲಿ ಅಂತ್ಯವಾಗಿದೆ. </p>.<p>ಮೃತ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ರೋಷನ್ ಎಂದು ಗುರುತಿಸಲಾಗಿದೆ.</p>.<p>ಕ್ರಿಕೆಟ್ ಪಂದ್ಯಾವಳಿಯಲ್ಲಿ ಸೋತು ಸೋಲಿನ ಬೇಸರದಲ್ಲಿದ್ದ ತಂಡದ ಪ್ರಶಾಂತ್ ಪಂದ್ಯಾವಳಿ ನಡೆದ ಜಾಗದಲ್ಲಿಯೇ ಮದ್ಯ ಕುಡಿಯುತ್ತಿದ್ದ. ಸಮೀಪದಲ್ಲಿಯೇ ಗೆಲುವಿನ ಸಂಭ್ರಮದಲ್ಲಿದ್ದ ಮತ್ತೊಂದು ತಂಡದ ಸದಸ್ಯರು ಪಾರ್ಟಿ ಮಾಡುತ್ತಿದ್ದರು. </p>.<p>ಪಾರ್ಟಿಯಲ್ಲಿದ್ದ ರೋಷನ್ ಬಿಯರ್ ಬಾಟಲಿಯನ್ನು ಪ್ರಶಾಂತ್ ಮೇಲೆ ಎಸೆದ. ಇದರಿಂದ ಕೋಪಗೊಂಡ ಪ್ರಶಾಂತ್ ರೋಷನ್ ಜಗಳ ತೆಗೆದ. ಆಗ ರೋಷನ್ ಭಯದಿಂದ ಕಾರು ಏರಿದ್ದಾನೆ. ಪ್ರಶಾಂತ್ ಕೂಡ ಅದೇ ಕಾರೊಳಗೆ ತೂರಿ ರೋಷನ್ ಹಿಡಿಯಲು ಮುಂದಾದ.</p>.<p>ಕಾರು ಚಲಾಯಿಸುತ್ತಿದ್ದ ರೋಷನ್ ಅಡ್ಡಾದಿಡ್ಡಿ ಕಾರು ಚಲಾಯಿಸಿ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಪ್ರಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.</p>.<p>ಈ ಘಟನೆಯನ್ನು ಅಪಘಾತ ಎಂದು ಬಿಂಬಿಸಲಾಗಿತ್ತು ಪೊಲೀಸರು ತನಿಖೆ ನಂತರ ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಶಂಕೆ ಬಂದಿದೆ. ತನಿಖೆ ನಡೆಸಿದಾಗ ಮಾಹಿತಿ ದೊರೆತಿದೆ.</p>.<p>ಆರೋಪಿ ರೋಷನ್ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>