<p>ಆನೇಕಲ್: ಪಟ್ಟಣದ ತಿಗಳರ ಬೀದಿಯ ಪಾರ್ಥಸಾರಥಿ ಭಜನೆ ಮನೆಯ ದ್ರೌಪತಮ್ಮ ಹಸಿ ಕರಗ ಮಹೋತ್ಸವ ಗುರುವಾರ ರಾತ್ರಿ ನಡೆಯಲಿದೆ.</p>.<p>ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೀಪೋತ್ಸವ ಮತ್ತು ಧರ್ಮರಾಯ ದ್ರೌಪತಮ್ಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯಿತು. ನೂರಾರು ಮಹಿಳೆಯರು ಅಲಂಕೃತ ದೀಪ ಹೊತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.</p>.<p>ಮಂಗಳವಾರ ರಾತ್ರಿ 10.30ಕ್ಕೆ ತಿಗಳರ ಬೀದಿಯ ಭಜನೆಯ ಮನೆಯಿಂದ ಹೊರಟ ದೀಪೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಪ್ರಮುಖ ವೃತ್ತಗಳಲ್ಲಿ ಮಹಿಳೆಯರು ತಮಟೆಯ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.</p>.<p>ಕರಗ ಶಕ್ತ್ಯೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕರಗ ಹೊರುವ ಚಂದ್ರಪ್ಪ ಪೂಜೆ ಸಲ್ಲಿಸಿದರು. ಉಮೇಶ್ ಶಾಸ್ತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಭಜನೆ ಮನೆಯಲ್ಲಿನ ದ್ರೌಪದಮ್ಮ ಉತ್ಸವ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು.</p>.<p>ಏ.22ರಂದು ಧ್ವಜಾರೋಹಣದೊಂದಿಗೆ ಪ್ರಾರಂಭವಾಗಿರುವ ಕರಗ ಮಹೋತ್ಸವದ ಅಂಗವಾಗಿ ಪ್ರತಿ ದಿನ ವಿವಿಧ ಕಾರ್ಯಕ್ರಮ ನಡೆಯುತ್ತಿವೆ. ದ್ರೌಪದಿ, ಧರ್ಮರಾಯ, ಕೃಷ್ಣ, ಭೀಮ, ಅರ್ಜುನ, ನಕುಲ, ಸಹದೇವರ ಉತ್ಸವ ಮೂರ್ತಿಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-15-1031217021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ಪಟ್ಟಣದ ತಿಗಳರ ಬೀದಿಯ ಪಾರ್ಥಸಾರಥಿ ಭಜನೆ ಮನೆಯ ದ್ರೌಪತಮ್ಮ ಹಸಿ ಕರಗ ಮಹೋತ್ಸವ ಗುರುವಾರ ರಾತ್ರಿ ನಡೆಯಲಿದೆ.</p>.<p>ಕರಗ ಶಕ್ತ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ದೀಪೋತ್ಸವ ಮತ್ತು ಧರ್ಮರಾಯ ದ್ರೌಪತಮ್ಮ ಕಲ್ಯಾಣೋತ್ಸವ ವಿಜೃಂಭಣೆಯಿಂದ ನಡೆಯಿತು. ನೂರಾರು ಮಹಿಳೆಯರು ಅಲಂಕೃತ ದೀಪ ಹೊತ್ತು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.</p>.<p>ಮಂಗಳವಾರ ರಾತ್ರಿ 10.30ಕ್ಕೆ ತಿಗಳರ ಬೀದಿಯ ಭಜನೆಯ ಮನೆಯಿಂದ ಹೊರಟ ದೀಪೋತ್ಸವ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾಗಿತು. ಪ್ರಮುಖ ವೃತ್ತಗಳಲ್ಲಿ ಮಹಿಳೆಯರು ತಮಟೆಯ ಸದ್ದಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.</p>.<p>ಕರಗ ಶಕ್ತ್ಯೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ. ಕರಗ ಹೊರುವ ಚಂದ್ರಪ್ಪ ಪೂಜೆ ಸಲ್ಲಿಸಿದರು. ಉಮೇಶ್ ಶಾಸ್ತ್ರಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆದವು. ಭಜನೆ ಮನೆಯಲ್ಲಿನ ದ್ರೌಪದಮ್ಮ ಉತ್ಸವ ಮೂರ್ತಿಗೆ ಅಲಂಕಾರ ಮಾಡಲಾಗಿತ್ತು.</p>.<p>ಏ.22ರಂದು ಧ್ವಜಾರೋಹಣದೊಂದಿಗೆ ಪ್ರಾರಂಭವಾಗಿರುವ ಕರಗ ಮಹೋತ್ಸವದ ಅಂಗವಾಗಿ ಪ್ರತಿ ದಿನ ವಿವಿಧ ಕಾರ್ಯಕ್ರಮ ನಡೆಯುತ್ತಿವೆ. ದ್ರೌಪದಿ, ಧರ್ಮರಾಯ, ಕೃಷ್ಣ, ಭೀಮ, ಅರ್ಜುನ, ನಕುಲ, ಸಹದೇವರ ಉತ್ಸವ ಮೂರ್ತಿಗಳನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-15-1031217021</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>