<p><strong>ಆನೇಕಲ್: </strong>ತಾಲ್ಲೂಕಿನ ವಿವಿಧೆಡೆ ನಿರ್ಮಿಸಿರುವ ಅಕ್ರಮ ಬಡಾವಣೆಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಗಣಿ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಮಾತನಾಡಿ, ಹುಲಿಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೆಡೆ ಸರ್ಕಾರಿ ಜಾಗಗಳಲ್ಲಿ ನಿರ್ಮಿಸುವ ಅಕ್ರಮ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಆರೋಪಿಸಿದರು.</p>.<p>ಸರ್ಕಾರಿ ಜಾಗಗಳಲ್ಲಿರುವ ಅಕ್ರಮ ಕಟ್ಟಡ ಮತ್ತು ಬಡಾವಣೆ ತೆರವುಗೊಳಿಸಬೇಕು ಎಂಬ ನಿಟ್ಟಿನಲ್ಲಿ ಸಂಘಟನೆಯು ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದೆ. ಆದರೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಏಕಾಏಕಿ ವಿದ್ಯುತ್ ಸಂಪರ್ಕ ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮವಹಿಸಬೇಕು ಎಂದರು.</p>.<p>ಪರವಾನಗಿ ಇಲ್ಲದೇ ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವ ಬಲಾಢ್ಯರ ವಿರುದ್ಧ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಗೋಮಾಳ ಸೇರಿದಂತೆ ಸರ್ಕಾರಿ ಜಾಗಗಳನ್ನು ಬಡವರು, ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಿಡಬೇಕು. ಆದರೆ ಹಣವಂತರು, ಬಲಾಢ್ಯರು ಪ್ರಭಾವ ಬಳಸಿಕೊಂಡು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡುತ್ತಿದ್ದಾರೆ. ಒತ್ತುವರಿ ಜಮೀನುಗಳಲ್ಲಿರುವ ಬಡಾವಣೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದರಿಂದ ಒತ್ತುವರಿ ಕಡಿಮೆಯಾಗುತ್ತದೆ ಎಂದರು.</p>.<p>ಪ್ರಜಾ ವಿಮೋಚನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಆನೇಕಲ್ ತಾಲೂಕು ಘಟಕದ ಉಪಾಧ್ಯಕ್ಷ ರಾಗಿಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಸಬ್ಮಂಗಲ ರವಿ, ವೆಂಕಟೇಶ್, ಲವ, ಪರಶುರಾಮ್, ಜಗದೀಶ್, ಚಂದ್ರಶೇಖರ್, ಅಂಬರೀಶ್, ಬಾಬು, ಅಂಜಿ, ರವಿ, ಮೋಹನ್, ಮುನಿರತ್ನ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ವಿವಿಧೆಡೆ ನಿರ್ಮಿಸಿರುವ ಅಕ್ರಮ ಬಡಾವಣೆಗಳಿಗೆ ನೀಡಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ಪ್ರಜಾ ವಿಮೋಚನಾ ಚಳವಳಿ ಸಂಘಟನೆಯ ಪದಾಧಿಕಾರಿಗಳು ಜಿಗಣಿ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಆನೇಕಲ್ ಕೃಷ್ಣಪ್ಪ ಮಾತನಾಡಿ, ಹುಲಿಮಂಗಲ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೆಡೆ ಸರ್ಕಾರಿ ಜಾಗಗಳಲ್ಲಿ ನಿರ್ಮಿಸುವ ಅಕ್ರಮ ಬಡಾವಣೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದು ಆರೋಪಿಸಿದರು.</p>.<p>ಸರ್ಕಾರಿ ಜಾಗಗಳಲ್ಲಿರುವ ಅಕ್ರಮ ಕಟ್ಟಡ ಮತ್ತು ಬಡಾವಣೆ ತೆರವುಗೊಳಿಸಬೇಕು ಎಂಬ ನಿಟ್ಟಿನಲ್ಲಿ ಸಂಘಟನೆಯು ಹಲವು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದೆ. ಆದರೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಏಕಾಏಕಿ ವಿದ್ಯುತ್ ಸಂಪರ್ಕ ನೀಡಿದ್ದಾರೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮವಹಿಸಬೇಕು ಎಂದರು.</p>.<p>ಪರವಾನಗಿ ಇಲ್ಲದೇ ಅಕ್ರಮವಾಗಿ ಮನೆಗಳನ್ನು ಕಟ್ಟಿಕೊಂಡಿದ್ದಾರೆ. ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಬೇಕು. ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡಿರುವ ಬಲಾಢ್ಯರ ವಿರುದ್ಧ ಮುಂದಿನ ದಿನಗಳಲ್ಲಿ ತಾಲ್ಲೂಕು ಕಚೇರಿಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.</p>.<p>ಗೋಮಾಳ ಸೇರಿದಂತೆ ಸರ್ಕಾರಿ ಜಾಗಗಳನ್ನು ಬಡವರು, ದಲಿತರು ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಿಡಬೇಕು. ಆದರೆ ಹಣವಂತರು, ಬಲಾಢ್ಯರು ಪ್ರಭಾವ ಬಳಸಿಕೊಂಡು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡುತ್ತಿದ್ದಾರೆ. ಒತ್ತುವರಿ ಜಮೀನುಗಳಲ್ಲಿರುವ ಬಡಾವಣೆಗಳಿಗೆ ನೀರು ಮತ್ತು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದರಿಂದ ಒತ್ತುವರಿ ಕಡಿಮೆಯಾಗುತ್ತದೆ ಎಂದರು.</p>.<p>ಪ್ರಜಾ ವಿಮೋಚನಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಆನೇಕಲ್ ತಾಲೂಕು ಘಟಕದ ಉಪಾಧ್ಯಕ್ಷ ರಾಗಿಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಸಬ್ಮಂಗಲ ರವಿ, ವೆಂಕಟೇಶ್, ಲವ, ಪರಶುರಾಮ್, ಜಗದೀಶ್, ಚಂದ್ರಶೇಖರ್, ಅಂಬರೀಶ್, ಬಾಬು, ಅಂಜಿ, ರವಿ, ಮೋಹನ್, ಮುನಿರತ್ನ, ರವಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>