<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಕಳೆದ 200ಕ್ಕೂ ಹೆಚ್ಚು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರೈತರು ಮನವಿ ಸಲ್ಲಿಸಿದರು.</p>.<p>ಖಾಸಗಿ ಕಾರ್ಯಕ್ರಮದ ನಿಮಿತ್ತ ತಾಲ್ಲೂಕಿನ ಅತ್ತಿಬೆಲೆಗೆ ಭೇಟಿ ನೀಡಿದ್ದ ಅವರನ್ನು ರೈತರು ಭೇಟಿ ಮಾಡಿ ಹೋರಾಟದ ಬಗ್ಗೆ ವಿವವರಿಸಿದರು.</p>.<p>ಸರ್ಕಾರ ರೈತರು ಭೂಮಿ ಕಿತ್ತುಕೊಳ್ಳಲು ಕೆಐಎಡಿಬಿಯನ್ನು ಬಳಸುತ್ತಿದೆ. ರೈತರು ಸಂಘಟಿತರಾಗಿದ್ದು, ಪ್ರಾಣ ಕೊಡುತ್ತಾರೆ ಹೊರತು ಒಂದಿಂಚು ಭೂಮಿ ಕೊಡುವುದಿಲ್ಲ. ಫಲವತ್ತಾದ ಭೂಮಿಯನ್ನು ಅಧಿಕಾರಿಗಳು ಬಂಜರು ಭೂಮಿ ಎಂದು ವರದಿ ನೀಡಿದ್ದಾರೆ. ಹಾಗಾಗಿ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು ಎಂದು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಗೌರವ ಅಧ್ಯಕ್ಷ ಜಯಪ್ರಕಾಶ್ ಆಗ್ರಹಿಸಿದರು.</p>.<p>ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹೋರಾಟವನ್ನು ಮುಂದುವರೆಸಲಾಗುವುದು. ಹಾಗಾಗಿ ಆರ್.ಅಶೋಕ್ ಅವರು ಒಮ್ಮೆ ರೈತರ ಹೋರಾಟ ಸ್ಥಳಕ್ಕೆ ಭೇಟಿ ನೀಡಬೇಕು. ರೈತರ ಕೃಷಿ ಭೂಮಿಯ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮುಖಂಡರಾದ ಎಸ್.ಆರ್.ಟಿ.ಅಶೋಕ್ ರೆಡ್ಡಿ, ದೊಡ್ಡಹಾಗಡೆ ಶಂಕರ್, ಸಂಪಂಗಿರಾಮಯ್ಯ, ಮುನಿರಾಜು ಗೌಡ, ಉಮಾ ಪರಶುರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಕಳೆದ 200ಕ್ಕೂ ಹೆಚ್ಚು ದಿನಗಳಿಂದ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ನೀಡುವಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ರೈತರು ಮನವಿ ಸಲ್ಲಿಸಿದರು.</p>.<p>ಖಾಸಗಿ ಕಾರ್ಯಕ್ರಮದ ನಿಮಿತ್ತ ತಾಲ್ಲೂಕಿನ ಅತ್ತಿಬೆಲೆಗೆ ಭೇಟಿ ನೀಡಿದ್ದ ಅವರನ್ನು ರೈತರು ಭೇಟಿ ಮಾಡಿ ಹೋರಾಟದ ಬಗ್ಗೆ ವಿವವರಿಸಿದರು.</p>.<p>ಸರ್ಕಾರ ರೈತರು ಭೂಮಿ ಕಿತ್ತುಕೊಳ್ಳಲು ಕೆಐಎಡಿಬಿಯನ್ನು ಬಳಸುತ್ತಿದೆ. ರೈತರು ಸಂಘಟಿತರಾಗಿದ್ದು, ಪ್ರಾಣ ಕೊಡುತ್ತಾರೆ ಹೊರತು ಒಂದಿಂಚು ಭೂಮಿ ಕೊಡುವುದಿಲ್ಲ. ಫಲವತ್ತಾದ ಭೂಮಿಯನ್ನು ಅಧಿಕಾರಿಗಳು ಬಂಜರು ಭೂಮಿ ಎಂದು ವರದಿ ನೀಡಿದ್ದಾರೆ. ಹಾಗಾಗಿ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕು ಎಂದು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಗೌರವ ಅಧ್ಯಕ್ಷ ಜಯಪ್ರಕಾಶ್ ಆಗ್ರಹಿಸಿದರು.</p>.<p>ಭೂ ಸ್ವಾಧೀನ ಪ್ರಕ್ರಿಯೆ ಕೈಬಿಡುವವರೆಗೂ ಹೋರಾಟವನ್ನು ಮುಂದುವರೆಸಲಾಗುವುದು. ಹಾಗಾಗಿ ಆರ್.ಅಶೋಕ್ ಅವರು ಒಮ್ಮೆ ರೈತರ ಹೋರಾಟ ಸ್ಥಳಕ್ಕೆ ಭೇಟಿ ನೀಡಬೇಕು. ರೈತರ ಕೃಷಿ ಭೂಮಿಯ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆಯಬೇಕು ಎಂದು ಒತ್ತಾಯಿಸಿದರು.</p>.<p>ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಮುಖಂಡರಾದ ಎಸ್.ಆರ್.ಟಿ.ಅಶೋಕ್ ರೆಡ್ಡಿ, ದೊಡ್ಡಹಾಗಡೆ ಶಂಕರ್, ಸಂಪಂಗಿರಾಮಯ್ಯ, ಮುನಿರಾಜು ಗೌಡ, ಉಮಾ ಪರಶುರಾಮ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>