<p><strong>ಆನೇಕಲ್</strong>: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದಲ್ಲಿ ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರ ಲಾಂಡ್ರಿ ಅಂಗಡಿಯಲ್ಲಿ ಸಂಜೆ 7:30ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಅಂಗಡಿಯಲ್ಲಿದ್ದ ಗ್ಯಾಸ್ ಸಿಲೆಂಡರ್ಗೆ ಬೆಂಕಿ ತಗಲಿ ಸ್ಫೋಟಗೊಂಡಿದೆ. ಇದರಿಂದಾಗಿ ಅಂಗಡಿಯ ಗೋಡೆಗಳು ಬಿರುಕು ಬಿಟ್ಟಿವೆ. ಸ್ಫೋಟದ ಶಬ್ದಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅಂಗಡಿಯಲ್ಲಿದ್ದ ವಸ್ತುಗಳು ಜಿಲ್ಲಾ ಪಿಲ್ಲಿಯಾಗಿ ಬಿದ್ದಿವೆ.</p>.<p>ಮೊದಲನೇ ಮಹಡಿಯಲ್ಲಿದ್ಡ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಂಗಡಿಯಲ್ಲಿದ್ದವರು ಹೊರ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ರಭಸಕ್ಕೆ ವಸ್ತುಗಳು ರಸ್ತೆಗೆ ಸಿಡಿದಿದ್ದರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಸಿಲಿಂಡರ್ ಫೋಟೋಗೊಂದು ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 2 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಪರಪ್ಪನ ಅಗ್ರಹಾರದ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್</strong>: ತಾಲ್ಲೂಕಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರದಲ್ಲಿ ಲಾಂಡ್ರಿ ಅಂಗಡಿಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.</p>.<p>ಎಲೆಕ್ಟ್ರಾನಿಕ್ ಸಿಟಿ ಸಮೀಪದ ಶಾಂತಿಪುರ ಲಾಂಡ್ರಿ ಅಂಗಡಿಯಲ್ಲಿ ಸಂಜೆ 7:30ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತುಕೊಂಡಿದೆ. ಅಂಗಡಿಯಲ್ಲಿದ್ದ ಗ್ಯಾಸ್ ಸಿಲೆಂಡರ್ಗೆ ಬೆಂಕಿ ತಗಲಿ ಸ್ಫೋಟಗೊಂಡಿದೆ. ಇದರಿಂದಾಗಿ ಅಂಗಡಿಯ ಗೋಡೆಗಳು ಬಿರುಕು ಬಿಟ್ಟಿವೆ. ಸ್ಫೋಟದ ಶಬ್ದಕ್ಕೆ ಸ್ಥಳೀಯ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ಅಂಗಡಿಯಲ್ಲಿದ್ದ ವಸ್ತುಗಳು ಜಿಲ್ಲಾ ಪಿಲ್ಲಿಯಾಗಿ ಬಿದ್ದಿವೆ.</p>.<p>ಮೊದಲನೇ ಮಹಡಿಯಲ್ಲಿದ್ಡ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಂಗಡಿಯಲ್ಲಿದ್ದವರು ಹೊರ ಬಂದಿದ್ದರಿಂದ ಪ್ರಾಣಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ರಭಸಕ್ಕೆ ವಸ್ತುಗಳು ರಸ್ತೆಗೆ ಸಿಡಿದಿದ್ದರಿಂದ ರಸ್ತೆಯಲ್ಲಿ ಓಡಾಡುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.</p>.<p>ಸಿಲಿಂಡರ್ ಫೋಟೋಗೊಂದು ಬೆಂಕಿ ಕಾಣಿಸಿಕೊಂಡಿದ್ದರಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ 2 ಗಂಟೆಗಳಿಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಪರಪ್ಪನ ಅಗ್ರಹಾರದ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>