<p><strong>ಆನೇಕಲ್: </strong>ಇತ್ತೀಚಿಗೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೊ ಚಾಲಕ ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸ್ನೇಹಿತ ಜಯಸೂರ್ಯ ಅಲಿಯಾಸ್ ಕೆಂಚನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಗಿರೀಶ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.</p>.<p>ಜುಲೈ 14ರಂದು ಆಟೊ ಚಾಲಕ ದರ್ಶನ್ ಕೊಲೆಯಾಗಿತ್ತು. ಆಟೊ ನಿಲ್ದಾಣದಲ್ಲಿ ದರ್ಶನ್ಗೆ ಜಯಸೂರ್ಯ ಮತ್ತು ಗಿರೀಶ್ ಪರಿಚಯವಾಗಿತ್ತು. ತಮಾಷೆಗಾಗಿ ಜಯಸೂರ್ಯ ಅಲಿಯಾಸ್ ಕೆಂಚ ಮತ್ತು ಗಿರೀಶ್ ಅಲಿಯಾಸ್ ಕರಿಯ ದರ್ಶನ್ನ ತಲೆಗೆ ಹೊಡೆದರು. ಈ ಸಂದರ್ಭದಲ್ಲಿ ದರ್ಶನ್ ಜಯಸೂರ್ಯನ ಕಪಾಳಕ್ಕೆ ಹೊಡೆದಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ, ಮಾತು ವಿಕೋಪಕ್ಕೆ ತಿರುಗಿ ದರ್ಶನ್ ಕೊಲೆಯಲ್ಲಿ ಜಗಳ ಅಂತ್ಯವಾಗಿತು. </p>.<p>ಬಂಧಿತರನ್ನು ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಘಟನಾ ಸ್ಥಳದಲ್ಲಿ ಮಹಜರು ಮಾಡಿ ಬಂಧಿತರಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಇತ್ತೀಚಿಗೆ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಟೊ ಚಾಲಕ ದರ್ಶನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸ್ನೇಹಿತ ಜಯಸೂರ್ಯ ಅಲಿಯಾಸ್ ಕೆಂಚನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಗಿರೀಶ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.</p>.<p>ಜುಲೈ 14ರಂದು ಆಟೊ ಚಾಲಕ ದರ್ಶನ್ ಕೊಲೆಯಾಗಿತ್ತು. ಆಟೊ ನಿಲ್ದಾಣದಲ್ಲಿ ದರ್ಶನ್ಗೆ ಜಯಸೂರ್ಯ ಮತ್ತು ಗಿರೀಶ್ ಪರಿಚಯವಾಗಿತ್ತು. ತಮಾಷೆಗಾಗಿ ಜಯಸೂರ್ಯ ಅಲಿಯಾಸ್ ಕೆಂಚ ಮತ್ತು ಗಿರೀಶ್ ಅಲಿಯಾಸ್ ಕರಿಯ ದರ್ಶನ್ನ ತಲೆಗೆ ಹೊಡೆದರು. ಈ ಸಂದರ್ಭದಲ್ಲಿ ದರ್ಶನ್ ಜಯಸೂರ್ಯನ ಕಪಾಳಕ್ಕೆ ಹೊಡೆದಿದ್ದಾರೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳ ಶುರುವಾಗಿದೆ. ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ, ಮಾತು ವಿಕೋಪಕ್ಕೆ ತಿರುಗಿ ದರ್ಶನ್ ಕೊಲೆಯಲ್ಲಿ ಜಗಳ ಅಂತ್ಯವಾಗಿತು. </p>.<p>ಬಂಧಿತರನ್ನು ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಘಟನಾ ಸ್ಥಳದಲ್ಲಿ ಮಹಜರು ಮಾಡಿ ಬಂಧಿತರಿಂದ ಮಾಹಿತಿ ಪಡೆದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>