<p><strong>ಆನೇಕಲ್: </strong>ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಪಟ್ಟಣದ ಬನ್ನೇರುಘಟ್ಟ ರಸ್ತೆಯ ಚಿನ್ನಪ್ಪ ಸ್ವಾಮಿ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ನಡೆಯಿತು. ಆದರೆ ಪ್ರತಿ ವರ್ಷಕ್ಕೆ ಹೋಲಿಸಿಕೊಂಡರೆ ಈ ವರ್ಷ ಕಡಲೆಕಾಯಿ ಅಂಗಡಿಗಳು ಸಂಖ್ಯೆ ಇಳಿಮುಖವಾಗಿತ್ತು.</p>.<p>ಪ್ರತಿ ವರ್ಷ 15 ಕ್ಕೂ ಹೆಚ್ಚು ಕಡಲೆಕಾಯಿ ಅಂಗಡಿಗಳು ಪರಿಷೆಯಲ್ಲಿರುತ್ತಿದ್ದವು. ಆದರೆ ಈ ವರ್ಷ ಐದಾರು ಅಂಗಡಿಗಳೂ ಮಾತ್ರ ಕಂಡು ಬಂದವು. ಬಹುತೇಕ ಅಂಗಡಿಗಳು ಬಸವನಗುಡಿಯ ಜಾತ್ರೆಗೆ ತೆರಳಿದ್ದರಿಂದ ಅಂಗಡಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಕಡಲೆಕಾಯಿ ಅಂಗಡಿಯ ಶ್ರೀನಿವಾಸ್ ತಿಳಿಸಿದರು.</p>.<p>ಚಿನ್ನಪ್ಪಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ಸಂಜೆಯ ವೇಳೆಗೆ ಜಾತ್ರೆಯಲ್ಲಿ ಜನಜಂಗುಳಿ ಜಮಾಯಿಸಿತ್ತು. </p>.<p>ಜಾತ್ರೆಯ ಪ್ರಯುಕ್ತ ಚಿನ್ನಪ್ಪಸ್ವಾಮಿ ಕಡಲೆಕಾಯಿಯಲ್ಲಿ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಭಕ್ತರು ಕಡಲೆಕಾಯಿ ಕೊಂಡು ಚಿನ್ನಪ್ಪ ದೇವಾಲಯದ ಮೇಲೆ ಎಸೆದು ಭಕ್ತಿಯನ್ನು ಸಮರ್ಪಿಸಿದರು. ಭಕ್ತರು ಪ್ರಸಾದವೆಂಬಂತೆ ಕಡಲೆಕಾಯಿಗಳನ್ನು ಆಯ್ದು ತಿನ್ನುತ್ತಿದ್ದರು. ಪುಟಾಣಿ ಮಕ್ಕಳು ಕಡಲೆ ಕಾಯಿಯನ್ನು ಆಯ್ದುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p><strong>ಕಡಲೆಕಾಯಿ ಪರಿಷೆಯ ಪ್ರಯುಕ್ತ ದೇವಾಲಯಕ್ಕೆ ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು. ಸಂಜೆ ವಿದ್ಯುತ್ ದೀಪಗಳಿಂದ ದೇವಾಲಯ ಕಂಗೊಳಿಸುತ್ತಿತ್ತು.</strong></p>.<p><strong>ಕಡಲೆಕಾಯಿ ಪ್ರಿಯ ಚಿನ್ನಪಸ್ವಾಮಿ:</strong> ಅವಧೂತರಾಗಿದ್ದ ಚಿನ್ನಪ್ಪ ಸ್ವಾಮಿ ಅವರು ಕಡಲೆಕಾಯಿ ಪ್ರಿಯರಾಗಿದ್ದರು. ಹಾಗಾಗಿ ಕಡೆ ಕಾರ್ತೀಕ ಸೋಮವಾರದಂದು ಇಲ್ಲಿ ಕಡಲೆಕಾಯಿ ಪರಿಷೆ ನಡೆಸಲಾಗುತ್ತಿದೆ. ಭಕ್ತರು ಕಡಲೆಕಾಯಿ ಕೊಂಡು ಚಿನ್ನಪ್ಪಸ್ವಾಮಿ ಅರ್ಪಿಸುವುದು ಇಲ್ಲಿಯ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಪಟ್ಟಣದ ಬನ್ನೇರುಘಟ್ಟ ರಸ್ತೆಯ ಚಿನ್ನಪ್ಪ ಸ್ವಾಮಿ ದೇವಾಲಯದಲ್ಲಿ ಕಡಲೆಕಾಯಿ ಪರಿಷೆ ನಡೆಯಿತು. ಆದರೆ ಪ್ರತಿ ವರ್ಷಕ್ಕೆ ಹೋಲಿಸಿಕೊಂಡರೆ ಈ ವರ್ಷ ಕಡಲೆಕಾಯಿ ಅಂಗಡಿಗಳು ಸಂಖ್ಯೆ ಇಳಿಮುಖವಾಗಿತ್ತು.</p>.<p>ಪ್ರತಿ ವರ್ಷ 15 ಕ್ಕೂ ಹೆಚ್ಚು ಕಡಲೆಕಾಯಿ ಅಂಗಡಿಗಳು ಪರಿಷೆಯಲ್ಲಿರುತ್ತಿದ್ದವು. ಆದರೆ ಈ ವರ್ಷ ಐದಾರು ಅಂಗಡಿಗಳೂ ಮಾತ್ರ ಕಂಡು ಬಂದವು. ಬಹುತೇಕ ಅಂಗಡಿಗಳು ಬಸವನಗುಡಿಯ ಜಾತ್ರೆಗೆ ತೆರಳಿದ್ದರಿಂದ ಅಂಗಡಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಕಡಲೆಕಾಯಿ ಅಂಗಡಿಯ ಶ್ರೀನಿವಾಸ್ ತಿಳಿಸಿದರು.</p>.<p>ಚಿನ್ನಪ್ಪಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬೆಳಗಿನಿಂದಲೂ ನೂರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು. ಸಂಜೆಯ ವೇಳೆಗೆ ಜಾತ್ರೆಯಲ್ಲಿ ಜನಜಂಗುಳಿ ಜಮಾಯಿಸಿತ್ತು. </p>.<p>ಜಾತ್ರೆಯ ಪ್ರಯುಕ್ತ ಚಿನ್ನಪ್ಪಸ್ವಾಮಿ ಕಡಲೆಕಾಯಿಯಲ್ಲಿ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ಭಕ್ತರು ಕಡಲೆಕಾಯಿ ಕೊಂಡು ಚಿನ್ನಪ್ಪ ದೇವಾಲಯದ ಮೇಲೆ ಎಸೆದು ಭಕ್ತಿಯನ್ನು ಸಮರ್ಪಿಸಿದರು. ಭಕ್ತರು ಪ್ರಸಾದವೆಂಬಂತೆ ಕಡಲೆಕಾಯಿಗಳನ್ನು ಆಯ್ದು ತಿನ್ನುತ್ತಿದ್ದರು. ಪುಟಾಣಿ ಮಕ್ಕಳು ಕಡಲೆ ಕಾಯಿಯನ್ನು ಆಯ್ದುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.</p>.<p><strong>ಕಡಲೆಕಾಯಿ ಪರಿಷೆಯ ಪ್ರಯುಕ್ತ ದೇವಾಲಯಕ್ಕೆ ವಿಶೇಷ ಹೂವುಗಳಿಂದ ಅಲಂಕರಿಸಲಾಗಿತ್ತು. ಸಂಜೆ ವಿದ್ಯುತ್ ದೀಪಗಳಿಂದ ದೇವಾಲಯ ಕಂಗೊಳಿಸುತ್ತಿತ್ತು.</strong></p>.<p><strong>ಕಡಲೆಕಾಯಿ ಪ್ರಿಯ ಚಿನ್ನಪಸ್ವಾಮಿ:</strong> ಅವಧೂತರಾಗಿದ್ದ ಚಿನ್ನಪ್ಪ ಸ್ವಾಮಿ ಅವರು ಕಡಲೆಕಾಯಿ ಪ್ರಿಯರಾಗಿದ್ದರು. ಹಾಗಾಗಿ ಕಡೆ ಕಾರ್ತೀಕ ಸೋಮವಾರದಂದು ಇಲ್ಲಿ ಕಡಲೆಕಾಯಿ ಪರಿಷೆ ನಡೆಸಲಾಗುತ್ತಿದೆ. ಭಕ್ತರು ಕಡಲೆಕಾಯಿ ಕೊಂಡು ಚಿನ್ನಪ್ಪಸ್ವಾಮಿ ಅರ್ಪಿಸುವುದು ಇಲ್ಲಿಯ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>