<p><strong>ಆನೇಕಲ್: </strong>ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಪಟ್ಟಣವು ಪೇಟ ಮತ್ತು ಬಾವುಟಗಳಿಂದ ಕೇಸರಿಮಯವಾಗಿತ್ತು. ಪೂರ್ಣಕುಂಭ ಕಲಶ ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<p>ವೀರಗಾಸೆ, ಡೊಳ್ಳುಕುಣಿತ, ಚಂಡೆ, ನಾದಸ್ವರ-ಡೋಲು ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಾವಿರಾರು ಮಂದಿ ಹಿಂದೂ ಕಾರ್ಯಕರ್ತರು ಕೇಸರಿ ಶಾಲು ಹೊದ್ದು ಪೇಟ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪುಟಾಣಿ ಮಕ್ಕಳ ಭಾರತ ಮಾತೆಯ ವೇಷ ಧರಿಸಿ ಗಮನ ಸೆಳೆದರು.</p>.<p>ಭಾರತ್ ಮಾತಾ ಕೀ ಜೈ, ಜೈ ಜೈ ಮಾತಾ ಭಾರತ ಮಾತಾ, ಹಿಂದೂ ನಾವೆಲ್ಲಾ ಒಂದು ಘೋಷಣೆಗಳು ಮುಗಿಲು ಮುಟ್ಟಿದ್ದವು. ಪಟ್ಟಣದ ಹಲವೆಡೆ ಪುಷ್ಪವೃಷ್ಠಿ ಮಾಡುವ ಮೂಲಕ ಶೋಭಾ ಯಾತ್ರೆಯನ್ನು ಬರಮಾಡಿಕೊಂಡರು. ರೈತರು ಎತ್ತುಗಳ ಮೆರವಣಿಗೆ ನಡೆಸಿದರು.</p>.<p>ಮೆರವಣಿಗೆಯ ನಂತರ ಎಲ್ಲಾ ಕಾರ್ಯಕರ್ತರು ಪಟ್ಟಣದ ಶ್ರೀರಾಮ ಕುಟೀರದಲ್ಲಿ ಜಮಾವಣೆಗೊಂಡರು. ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವಿದ್ಯುತ್ ದೀಪ ಅಲಂಕಾರ ಕಂಗೊಳಿಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಶನಿವಾರ ವಿಜೃಂಭಣೆಯಿಂದ ನಡೆಯಿತು. ಪಟ್ಟಣವು ಪೇಟ ಮತ್ತು ಬಾವುಟಗಳಿಂದ ಕೇಸರಿಮಯವಾಗಿತ್ತು. ಪೂರ್ಣಕುಂಭ ಕಲಶ ಹೊತ್ತ ಮಹಿಳೆಯರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡಿದ್ದರು.</p>.<p>ವೀರಗಾಸೆ, ಡೊಳ್ಳುಕುಣಿತ, ಚಂಡೆ, ನಾದಸ್ವರ-ಡೋಲು ಸೇರಿದಂತೆ ವಿವಿಧ ಜಾನಪದ ಕಲಾತಂಡಗಳೊಂದಿಗೆ ಸಾವಿರಾರು ಮಂದಿ ಹಿಂದೂ ಕಾರ್ಯಕರ್ತರು ಕೇಸರಿ ಶಾಲು ಹೊದ್ದು ಪೇಟ ಧರಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ಪುಟಾಣಿ ಮಕ್ಕಳ ಭಾರತ ಮಾತೆಯ ವೇಷ ಧರಿಸಿ ಗಮನ ಸೆಳೆದರು.</p>.<p>ಭಾರತ್ ಮಾತಾ ಕೀ ಜೈ, ಜೈ ಜೈ ಮಾತಾ ಭಾರತ ಮಾತಾ, ಹಿಂದೂ ನಾವೆಲ್ಲಾ ಒಂದು ಘೋಷಣೆಗಳು ಮುಗಿಲು ಮುಟ್ಟಿದ್ದವು. ಪಟ್ಟಣದ ಹಲವೆಡೆ ಪುಷ್ಪವೃಷ್ಠಿ ಮಾಡುವ ಮೂಲಕ ಶೋಭಾ ಯಾತ್ರೆಯನ್ನು ಬರಮಾಡಿಕೊಂಡರು. ರೈತರು ಎತ್ತುಗಳ ಮೆರವಣಿಗೆ ನಡೆಸಿದರು.</p>.<p>ಮೆರವಣಿಗೆಯ ನಂತರ ಎಲ್ಲಾ ಕಾರ್ಯಕರ್ತರು ಪಟ್ಟಣದ ಶ್ರೀರಾಮ ಕುಟೀರದಲ್ಲಿ ಜಮಾವಣೆಗೊಂಡರು. ಹಿಂದೂ ಸಮಾಜೋತ್ಸವದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ವಿದ್ಯುತ್ ದೀಪ ಅಲಂಕಾರ ಕಂಗೊಳಿಸುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>