<p><strong>ಆನೇಕಲ್:</strong> ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆಯ ಸಲುವಾಗಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಶಿಬಿರ ಶನಿವಾರ ಪಟ್ಟಣಕ್ಕೆ ಸಮೀಪದ ಅಲಯನ್ಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.</p>.<p>ಶಿಬಿರ ಉದ್ಘಾಟಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಮೇ 5ರಿಂದ 17ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ನಲ್ಲಿಯೇ ಮಾಹಿತಿ ಸಂಗ್ರಹಿಸಬೇಕು. ಗಣತಿದಾರರು ನಿಖರ ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಇದರಿಂದ ಕುಟುಂಬಗಳ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಅನುಕೂಲ ಆಗಲಿದೆ. ಈ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಹಾಗಾಗಿ ಎಲ್ಲಾ ಮಾಹಿತಿಗಳನ್ನು ಗಣತಿದಾರರು ಪಡೆಯಬೇಕು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರ ನೀಡಬೇಕು. ತಮ್ಮ ಮಾಹಿತಿಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಸರ್ಕಾರದ ಉದ್ದೇಶಕ್ಕೆ ಬಲ ನೀಡಬೇಕು ಎಂದರು.</p>.<p>ಮೇ 5 ರಿಂದ 17ರವರೆಗೆ ಮನೆ ಮನೆ ಭೇಟಿ 19 ರಿಂದ 21ರವರೆಗೆ ಗ್ರಾಮದ ಮುಖ್ಯ ಸ್ಥಳದಲ್ಲಿ ಗಣತಿದಾರರು ಹಾಜರಿರಬೇಕು. ಯಾವುದೇ ಕುಟುಂಬದ ಮಾಹಿತಿ ಬಿಟ್ಟುಹೋಗಿದ್ದಲ್ಲಿ ಈ ಸಂದರ್ಭದಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. 19-23ರವರೆಗೆ ಸಾರ್ವಜನಿಕರು ಆನ್ಲೈನ್ನಲ್ಲಿ ಸಹ ಮಾಹಿತಿ ನೀಡಬಹುದಾಗಿದೆ ಎಂದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ಆನೇಕಲ್ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜಿಗಣಿ ಹೋಬಳಿ ಸೇರಿದಂತೆ 494 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗಳಿಗೆ ಒಬ್ಬರು ಗಣತಿದಾರರನ್ನು ನೇಮಕ ಮಾಡಲಾಗಿದೆ. 10-12 ಮಂದಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆಯ ಸಲುವಾಗಿ ಗಣತಿದಾರರಿಗೆ ಮತ್ತು ಮೇಲ್ವಿಚಾರಕರಿಗೆ ತರಬೇತಿ ಶಿಬಿರ ಶನಿವಾರ ಪಟ್ಟಣಕ್ಕೆ ಸಮೀಪದ ಅಲಯನ್ಸ್ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಿತು.</p>.<p>ಶಿಬಿರ ಉದ್ಘಾಟಿಸಿದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ನಿವೃತ್ತ ನ್ಯಾಯಮೂರ್ತಿ ಡಾ.ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣ ಮತ್ತು ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>ಮೇ 5ರಿಂದ 17ರವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮೊಬೈಲ್ ಆಪ್ನಲ್ಲಿಯೇ ಮಾಹಿತಿ ಸಂಗ್ರಹಿಸಬೇಕು. ಗಣತಿದಾರರು ನಿಖರ ಮಾಹಿತಿಯನ್ನು ಸಂಗ್ರಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕು. ಇದರಿಂದ ಕುಟುಂಬಗಳ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯನ್ನು ತಿಳಿದುಕೊಳ್ಳಲು ಅನುಕೂಲ ಆಗಲಿದೆ. ಈ ಮೂಲಕ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಹಾಗಾಗಿ ಎಲ್ಲಾ ಮಾಹಿತಿಗಳನ್ನು ಗಣತಿದಾರರು ಪಡೆಯಬೇಕು. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರ ನೀಡಬೇಕು. ತಮ್ಮ ಮಾಹಿತಿಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಸರ್ಕಾರದ ಉದ್ದೇಶಕ್ಕೆ ಬಲ ನೀಡಬೇಕು ಎಂದರು.</p>.<p>ಮೇ 5 ರಿಂದ 17ರವರೆಗೆ ಮನೆ ಮನೆ ಭೇಟಿ 19 ರಿಂದ 21ರವರೆಗೆ ಗ್ರಾಮದ ಮುಖ್ಯ ಸ್ಥಳದಲ್ಲಿ ಗಣತಿದಾರರು ಹಾಜರಿರಬೇಕು. ಯಾವುದೇ ಕುಟುಂಬದ ಮಾಹಿತಿ ಬಿಟ್ಟುಹೋಗಿದ್ದಲ್ಲಿ ಈ ಸಂದರ್ಭದಲ್ಲಿ ಸೇರಿಸಲು ಅವಕಾಶ ಕಲ್ಪಿಸಲಾಗಿದೆ. 19-23ರವರೆಗೆ ಸಾರ್ವಜನಿಕರು ಆನ್ಲೈನ್ನಲ್ಲಿ ಸಹ ಮಾಹಿತಿ ನೀಡಬಹುದಾಗಿದೆ ಎಂದರು.</p>.<p>ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಂಜುನಾಥ್, ಆನೇಕಲ್ ವಿಧಾನಸಭಾ ಕ್ಷೇತ್ರ ಮತ್ತು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಜಿಗಣಿ ಹೋಬಳಿ ಸೇರಿದಂತೆ 494 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗಳಿಗೆ ಒಬ್ಬರು ಗಣತಿದಾರರನ್ನು ನೇಮಕ ಮಾಡಲಾಗಿದೆ. 10-12 ಮಂದಿಗೆ ಒಬ್ಬರು ಮೇಲ್ವಿಚಾರಕರನ್ನು ನೇಮಕ ಮಾಡಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>