<p><strong>ಆನೇಕಲ್:</strong> ತಾಲ್ಲೂಕಿನ ಇಂಡ್ಲವಾಡಿಯ ಸೂರ್ಯಸಿಟಿ 4ನೇ ಹಂತದಲ್ಲಿ 75 ಎಕರೆಯಲ್ಲಿ ಸುಸಜ್ಜಿತ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.</p>.<p>ಉದ್ದೇಶಿತ ಕ್ರೀಡಾಂಗಣ ನಿರ್ಮಾಣ ಜಾಗಕ್ಕೆ ಗುರುವಾರ ಭೇಟಿ ನೀಡಿಮಾತನಾಡಿದ ಅವರು, ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣ ನಿರ್ಮಾಣಕ್ಕೆ ಮೇ 23ರಂದು ಭೂಮಿ ಪೂಜೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಸೇರಿದಂತೆ ಸರ್ಕಾರದ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<p>ಅಂತರರಾಷ್ಟ್ರೀಯ ಕ್ರೀಡಾಂಗಣವು ಕರ್ನಾಟಕದ ಹೆಮ್ಮೆ. ಸಮಗ್ರ ಅಭಿವೃದ್ಧಿಗೆ ಕ್ರೀಡಾಂಗಣ ಪೂರಕವಾಗಲಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.</p>.<p>ಅಂತರರಾಷ್ಟ್ರೀಯ ಕ್ರೀಡಾಂಗಣ ಕಾಮಗಾರಿ ನಡೆಯುವುದಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದವು. ಈ ಎಲ್ಲರಿಗೂ ಸಚಿವ ಸಂಪುಟ ಸಭೆಯ ಅನುಮತಿ ಮತ್ತು ಭೂಮಿ ಪೂಜೆಯ ಮೂಲಕ ಸರ್ಕಾರ ದಿಟ್ಟ ಉತ್ತರ ನೀಡಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.</p>.<p>ಉದ್ಘಾಟನಾ ಕಾರ್ಯಕ್ರಮಕ್ಕೆ ವಾಹನ ನಿಲುಗಡೆ, ಪೊಲೀಸ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಇಂಡ್ಲವಾಡಿ ನಾಲ್ಕನೇ ಹಂತದಲ್ಲಿ ನಾಲ್ಕು ಸಾವಿರ ನಿವೇಶನಗಳನ್ನು ಮುಖ್ಯಮಂತ್ರಿಗಳು ಲಾಟ್ರಿ ಮೂಲಕ ಹಂಚಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಕರ್ನಾಟಕ ಗೃಹ ಮಂಡಳಿಯು ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವುದರಿಂದ ಸುಸಜ್ಜಿತ ಆಸ್ಪತ್ರೆ, ಸಹಕಾರ ಸಂಘಗಳ ಕಟ್ಟಡ ಕಟ್ಟಲು ಎರಡು ಎಕರೆ ಜಾಗ ಮೀಸಲಿಡಬೇಕು. ಇದನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಇದರಿಂದ ಈ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದಂತಾಗುತ್ತದೆ ಎಂದು ಮುಖಂಡರಾದ ಐ.ಸಿ.ಎಂ.ಕೃಷ್ಣಮೂರ್ತಿ ಮತ್ತು ಇಂಡ್ಲವಾಡಿ ನಾಗರಾಜು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ಗೃಹ ಮಂಡಳಿಯ ಆಯುಕ್ತ ಕೆ.ಎ.ದಯಾನಂದ್, ಎನ್.ಬಿ.ಐ.ನಾಗರಾಜು, ದೊಡ್ಡಹಾಗಡೆ ಹರೀಶ್, ಅಚ್ಯುತರಾಜು, ಅರೇಹಳ್ಳಿ ಮಧು, ಮಹದೇವ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-1591301891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ಇಂಡ್ಲವಾಡಿಯ ಸೂರ್ಯಸಿಟಿ 4ನೇ ಹಂತದಲ್ಲಿ 75 ಎಕರೆಯಲ್ಲಿ ಸುಸಜ್ಜಿತ ಅಂತರರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಮುಂದಿನ ಮೂರು ವರ್ಷಗಳಲ್ಲಿ ಪೂರ್ಣಗೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.</p>.<p>ಉದ್ದೇಶಿತ ಕ್ರೀಡಾಂಗಣ ನಿರ್ಮಾಣ ಜಾಗಕ್ಕೆ ಗುರುವಾರ ಭೇಟಿ ನೀಡಿಮಾತನಾಡಿದ ಅವರು, ದೇಶದ ಎರಡನೇ ಅತಿ ದೊಡ್ಡ ಕ್ರೀಡಾಂಗಣ ನಿರ್ಮಾಣಕ್ಕೆ ಮೇ 23ರಂದು ಭೂಮಿ ಪೂಜೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ.ಶಿವಕುಮಾರ್ ಸೇರಿದಂತೆ ಸರ್ಕಾರದ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.</p>.<p>ಅಂತರರಾಷ್ಟ್ರೀಯ ಕ್ರೀಡಾಂಗಣವು ಕರ್ನಾಟಕದ ಹೆಮ್ಮೆ. ಸಮಗ್ರ ಅಭಿವೃದ್ಧಿಗೆ ಕ್ರೀಡಾಂಗಣ ಪೂರಕವಾಗಲಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ಸಂಕೀರ್ಣ ನಿರ್ಮಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.</p>.<p>ಅಂತರರಾಷ್ಟ್ರೀಯ ಕ್ರೀಡಾಂಗಣ ಕಾಮಗಾರಿ ನಡೆಯುವುದಿಲ್ಲ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದವು. ಈ ಎಲ್ಲರಿಗೂ ಸಚಿವ ಸಂಪುಟ ಸಭೆಯ ಅನುಮತಿ ಮತ್ತು ಭೂಮಿ ಪೂಜೆಯ ಮೂಲಕ ಸರ್ಕಾರ ದಿಟ್ಟ ಉತ್ತರ ನೀಡಿದೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.</p>.<p>ಉದ್ಘಾಟನಾ ಕಾರ್ಯಕ್ರಮಕ್ಕೆ ವಾಹನ ನಿಲುಗಡೆ, ಪೊಲೀಸ್ ಭದ್ರತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದಲ್ಲಿ ಇಂಡ್ಲವಾಡಿ ನಾಲ್ಕನೇ ಹಂತದಲ್ಲಿ ನಾಲ್ಕು ಸಾವಿರ ನಿವೇಶನಗಳನ್ನು ಮುಖ್ಯಮಂತ್ರಿಗಳು ಲಾಟ್ರಿ ಮೂಲಕ ಹಂಚಿಕೆ ಮಾಡಲಿದ್ದಾರೆ ಎಂದು ತಿಳಿಸಿದರು.</p>.<p>ಕರ್ನಾಟಕ ಗೃಹ ಮಂಡಳಿಯು ಇಂಡ್ಲವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವುದರಿಂದ ಸುಸಜ್ಜಿತ ಆಸ್ಪತ್ರೆ, ಸಹಕಾರ ಸಂಘಗಳ ಕಟ್ಟಡ ಕಟ್ಟಲು ಎರಡು ಎಕರೆ ಜಾಗ ಮೀಸಲಿಡಬೇಕು. ಇದನ್ನು ಸರ್ಕಾರಕ್ಕೆ ಹಸ್ತಾಂತರಿಸಬೇಕು. ಇದರಿಂದ ಈ ಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡಿದಂತಾಗುತ್ತದೆ ಎಂದು ಮುಖಂಡರಾದ ಐ.ಸಿ.ಎಂ.ಕೃಷ್ಣಮೂರ್ತಿ ಮತ್ತು ಇಂಡ್ಲವಾಡಿ ನಾಗರಾಜು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.</p>.<p>ಕರ್ನಾಟಕ ಗೃಹ ಮಂಡಳಿಯ ಆಯುಕ್ತ ಕೆ.ಎ.ದಯಾನಂದ್, ಎನ್.ಬಿ.ಐ.ನಾಗರಾಜು, ದೊಡ್ಡಹಾಗಡೆ ಹರೀಶ್, ಅಚ್ಯುತರಾಜು, ಅರೇಹಳ್ಳಿ ಮಧು, ಮಹದೇವ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-15-1591301891</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>