<p><strong>ಜಿಗಣಿ(ಆನೇಕಲ್): </strong>ಜಿಗಣಿ ಸಮೀಪದ ಹಾರಗದ್ದೆಯ ರಾಜರಾಜೇಶ್ವರಿ ದೇವಾಲಯದ 12ನೇ ವಾರ್ಷಿಕೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು. ಶುಕ್ರವಾರ ಸಂಜೆ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ಹಾರಗದ್ದೆಯ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.</p>.<p>ವಾರ್ಷಿಕೋತ್ಸವದ ಪ್ರಯಕ್ತ ಗುರುವಾರದಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹಾರಗದ್ದೆ ಗ್ರಾಮದ ಸುತ್ತಮುತ್ತಲಿನ ನೂರಾರು ಮಂದಿ ಮಹಿಳೆಯರು ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು. ಮಹಿಳೆಯರು ಬೆಲ್ಲಾದರತಿ ಮತ್ತು ಮಡಿಲಕ್ಕಿ ಸಲ್ಲಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಹಾರಗದ್ದೆ ಗ್ರಾಮವು ದೇವಾಲಯಗಳ ಗ್ರಾಮವಾಗಿದೆ. ಒಂದೇ ಗ್ರಾಮದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ. ರಾಜರಾಜೇಶ್ವರಿ ದೇವಾಲಯದಲ್ಲಿ 25 ಚಂಡಿಕಾ ಹೋಮಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ ಎಂದು ದೇವಾಲಯದ ಧರ್ಮದರ್ಶಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ಹಾರಗದ್ದೆಯ ಎಲ್ಲಾ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಒಗ್ಗಟ್ಟು ಮೂಡಿಸುತ್ತಿದೆ ಎಂದು ನಾಗಸಂದ್ರ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಿಗಣಿ(ಆನೇಕಲ್): </strong>ಜಿಗಣಿ ಸಮೀಪದ ಹಾರಗದ್ದೆಯ ರಾಜರಾಜೇಶ್ವರಿ ದೇವಾಲಯದ 12ನೇ ವಾರ್ಷಿಕೋತ್ಸವ ಶ್ರದ್ಧಾ, ಭಕ್ತಿಯಿಂದ ನಡೆಯಿತು. ಶುಕ್ರವಾರ ಸಂಜೆ ದೇವಿಯ ಉತ್ಸವ ಮೂರ್ತಿ ಮೆರವಣಿಗೆ ಹಾರಗದ್ದೆಯ ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು.</p>.<p>ವಾರ್ಷಿಕೋತ್ಸವದ ಪ್ರಯಕ್ತ ಗುರುವಾರದಿಂದಲೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಹಾರಗದ್ದೆ ಗ್ರಾಮದ ಸುತ್ತಮುತ್ತಲಿನ ನೂರಾರು ಮಂದಿ ಮಹಿಳೆಯರು ವಾರ್ಷಿಕೋತ್ಸವದಲ್ಲಿ ಭಾಗವಹಿಸಿದ್ದರು. ಮಹಿಳೆಯರು ಬೆಲ್ಲಾದರತಿ ಮತ್ತು ಮಡಿಲಕ್ಕಿ ಸಲ್ಲಿಸಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಹಾರಗದ್ದೆ ಗ್ರಾಮವು ದೇವಾಲಯಗಳ ಗ್ರಾಮವಾಗಿದೆ. ಒಂದೇ ಗ್ರಾಮದಲ್ಲಿ 20ಕ್ಕೂ ಹೆಚ್ಚು ದೇವಾಲಯಗಳಿವೆ. ಧಾರ್ಮಿಕ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯುವುದರಿಂದ ಗ್ರಾಮದಲ್ಲಿ ಒಗ್ಗಟ್ಟು ಮೂಡುತ್ತದೆ. ರಾಜರಾಜೇಶ್ವರಿ ದೇವಾಲಯದಲ್ಲಿ 25 ಚಂಡಿಕಾ ಹೋಮಗಳನ್ನು ಆಯೋಜಿಸಿರುವುದು ವಿಶೇಷವಾಗಿದೆ ಎಂದು ದೇವಾಲಯದ ಧರ್ಮದರ್ಶಿ ಶಿವಕುಮಾರ ಸ್ವಾಮೀಜಿ ತಿಳಿಸಿದರು.</p>.<p>ಹಾರಗದ್ದೆಯ ಎಲ್ಲಾ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಒಗ್ಗಟ್ಟು ಮೂಡಿಸುತ್ತಿದೆ ಎಂದು ನಾಗಸಂದ್ರ ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>