<p><strong>ಆನೇಕಲ್: </strong>ಪಟ್ಟಣದಲ್ಲಿ ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟ ಸಂಘದಿಂದ ರಾಜ್ಯೋತ್ಸವದ ಪ್ರಯುಕ್ತ ಕನ್ನಡಿಗರ ಹಬ್ಬ ಸಂಭ್ರಮ ನಡೆಯಿತು. </p>.<p>ಹಬ್ಬದ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವೀರಗಾಸೆ, ತಮಟೆ, ಗಾರುಡಿ ಗೊಂಬೆ, ಡೊಳ್ಳುಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿತು.</p>.<p>ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕನ್ನಡಾಂಬೆ ಮಂಜು ಮಾತನಾಡಿ, ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿವೆ. ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ. ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಕನ್ನಡ ಕೇಂದ್ರ ಅಗತ್ಯವಿದೆ. ಈ ಭಾಗದಲ್ಲಿ ಬ್ಯಾಂಕ್ಗಳಲ್ಲಿಯೂ ಅನ್ಯಭಾಷಿಕರೇ ಹೆಚ್ಚಾಗಿದ್ದಾರೆ. ಇದರಿಂದಾಗಿ ಕನ್ನಡಿಗರಿಗೆ ಸುಗಮವಾಗಿ ವ್ಯವಹಾರ ಮಾಡಲಾಗುತ್ತಿಲ್ಲ. ಹಾಗಾಗಿ ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಸರ್ಕಾರ ಕೈಗಾರಿಕ ಪ್ರದೇಶಗಳಲ್ಲಿ ಕನ್ನಡ ಕಲಿಕ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿದರು.</p>.<p>ಕನ್ನಡಿಗರ ಹಬ್ಬ ಕಾರ್ಯಕ್ರಮದ ಪ್ರಯುಕ್ತ ಸರ್ಕಾರಿ ಶಾಲೆಯ 50 ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರ, ಆಶಾ ಕಾರ್ಯಕರ್ತರಿಗೆ ಉಪಯುಕ್ತವಾಗುವಂತೆ ಬ್ಯಾಗ್, ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್, ಶೂ, ಅಂಗವಿಕಲರಿಗೆ ಪರಿಕರಗಳು ಮತ್ತು ವೃದ್ಧರಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ಆಚರಿಸಲಾಗಿದೆ ಎಂದರು.</p>.<p>ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿದರು. ಮುಖಂಡರಾದ ಬಾಬು, ಕೃಷ್ಣಪ್ಪ, ರೇಣುಕಾ, ಸಂಘಟನೆಯ ನಾರಾಯಣ ಕುಮಾರ್, ಯಲ್ಲಪ್ಪ, ಶ್ರೀನಿವಾಸ್, ನಾರಾಯಣ್, ರಾಧ.ಆರ್.ಬೈಲಪ್ಪ, ಕೀರ್ತನಾ ಮಂಜು, ಸುನೀತಾ ಬಾಯಿ, ಭರತ್ ಕುಮಾರ್, ರವಿಚಂದ್ರ, ಪಿ.ಎನ್. ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಪಟ್ಟಣದಲ್ಲಿ ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟ ಸಂಘದಿಂದ ರಾಜ್ಯೋತ್ಸವದ ಪ್ರಯುಕ್ತ ಕನ್ನಡಿಗರ ಹಬ್ಬ ಸಂಭ್ರಮ ನಡೆಯಿತು. </p>.<p>ಹಬ್ಬದ ಪ್ರಯುಕ್ತ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಯಿ ಭುವನೇಶ್ವರಿ ದೇವಿಯ ಪಲ್ಲಕ್ಕಿ ಮೆರವಣಿಗೆ ನಡೆಯಿತು. ವೀರಗಾಸೆ, ತಮಟೆ, ಗಾರುಡಿ ಗೊಂಬೆ, ಡೊಳ್ಳುಕುಣಿತ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿತು.</p>.<p>ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕನ್ನಡಾಂಬೆ ಮಂಜು ಮಾತನಾಡಿ, ಆನೇಕಲ್ ತಾಲ್ಲೂಕಿನಲ್ಲಿ ಐದು ಕೈಗಾರಿಕಾ ಪ್ರದೇಶಗಳಿವೆ. ಲಕ್ಷಾಂತರ ಮಂದಿ ಕಾರ್ಮಿಕರಿದ್ದಾರೆ. ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಕನ್ನಡ ಕೇಂದ್ರ ಅಗತ್ಯವಿದೆ. ಈ ಭಾಗದಲ್ಲಿ ಬ್ಯಾಂಕ್ಗಳಲ್ಲಿಯೂ ಅನ್ಯಭಾಷಿಕರೇ ಹೆಚ್ಚಾಗಿದ್ದಾರೆ. ಇದರಿಂದಾಗಿ ಕನ್ನಡಿಗರಿಗೆ ಸುಗಮವಾಗಿ ವ್ಯವಹಾರ ಮಾಡಲಾಗುತ್ತಿಲ್ಲ. ಹಾಗಾಗಿ ಅನ್ಯಭಾಷಿಕರಿಗೆ ಕನ್ನಡ ಕಲಿಸಲು ಸರ್ಕಾರ ಕೈಗಾರಿಕ ಪ್ರದೇಶಗಳಲ್ಲಿ ಕನ್ನಡ ಕಲಿಕ ಕೇಂದ್ರ ಸ್ಥಾಪಿಸಬೇಕೆಂದು ಒತ್ತಾಯಿಸಿದರು.</p>.<p>ಕನ್ನಡಿಗರ ಹಬ್ಬ ಕಾರ್ಯಕ್ರಮದ ಪ್ರಯುಕ್ತ ಸರ್ಕಾರಿ ಶಾಲೆಯ 50 ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರ, ಆಶಾ ಕಾರ್ಯಕರ್ತರಿಗೆ ಉಪಯುಕ್ತವಾಗುವಂತೆ ಬ್ಯಾಗ್, ಪೌರಕಾರ್ಮಿಕರಿಗೆ ಸುರಕ್ಷತಾ ಕಿಟ್, ಶೂ, ಅಂಗವಿಕಲರಿಗೆ ಪರಿಕರಗಳು ಮತ್ತು ವೃದ್ಧರಿಗೆ ಕಂಬಳಿಗಳನ್ನು ವಿತರಿಸುವ ಮೂಲಕ ಆಚರಿಸಲಾಗಿದೆ ಎಂದರು.</p>.<p>ಕನ್ನಡ ಸಂಘಟನೆಗಳ ಕಾರ್ಮಿಕರ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ ಮಾತನಾಡಿದರು. ಮುಖಂಡರಾದ ಬಾಬು, ಕೃಷ್ಣಪ್ಪ, ರೇಣುಕಾ, ಸಂಘಟನೆಯ ನಾರಾಯಣ ಕುಮಾರ್, ಯಲ್ಲಪ್ಪ, ಶ್ರೀನಿವಾಸ್, ನಾರಾಯಣ್, ರಾಧ.ಆರ್.ಬೈಲಪ್ಪ, ಕೀರ್ತನಾ ಮಂಜು, ಸುನೀತಾ ಬಾಯಿ, ಭರತ್ ಕುಮಾರ್, ರವಿಚಂದ್ರ, ಪಿ.ಎನ್. ಆನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>