<p>ಆನೇಕಲ್: ತಾಲ್ಲೂಕಿನ ಬಿದರಗೆರೆ ಓಣಿ ಹಾಗೂ ಮುತ್ತುಗಟ್ಟಿ ರಸ್ತೆಯಲ್ಲಿರುವ ಕುರುಬರಹಟ್ಟಿ ಮುನೇಶ್ವರಸ್ವಾಮಿ ದೇವಾಲಯದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನೆರವೇರಿತು.</p>.<p>ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 2ರ ಸುಮಾರಿಗೆ ಅಲಂಕೃತ ರಥದಲ್ಲಿ ಮುನೇಶ್ವರ ಸ್ವಾಮಿಯನ್ನು ಕುಳ್ಳರಿಸಿ ದೇವಾಲಯದ ಸುತ್ತಲೂ ಭಕ್ತರು ರಥ ಎಳೆದರು.</p>.<p>ಜಾತ್ರೆ ಮಹೋತ್ಸವ ಪ್ರಯುಕ್ತ ಮುನೇಶ್ವರಸ್ವಾಮಿ, ತಿಮ್ಮರಾಯಸ್ವಾಮಿ, ಆಂಜನೇಯಸ್ವಾಮಿ, ಯಲ್ಲಮ್ಮ ದೇವಿ, ಮಾರಮ್ಮ ದೇವಿ ಸೇರಿದಂತೆ ವಿವಿಧ ದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಜಾತ್ರೆಯಲ್ಲಿ ರಾಧಾಕೃಷ್ಣ ಕೋಲಾಟ ಮಂಡಳಿ, ಜೈ ಮಾರುತಿ ಕೋಲಾಟ ಮಂಡಳಿ ಹಾಗೂ ಮದ್ದುರಮ್ಮ ಕೋಲಾಟ ಮಂಡಳಿಗಳಿಂದ ಮಹಿಳೆಯರು ಆಕರ್ಷಕ ಕೋಲಾಟ ಪ್ರದರ್ಶನ ನೀಡಿದರು. ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು.</p>.<p>ಮುಖಂಡರಾದ ಟಿ.ವಿ ಬಾಬು, ಸಿ.ಮುನಿರಾಜು, ಗೆರಟಿಗನ ಬೆಲೆ ರಾಮಕೃಷ್ಣ, ಎಚ್.ಎಂ.ತಿಮ್ಮರಾಜು, ದೇವಸ್ಥಾನದ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾದ ಎಂ.ಎಲ್.ನಾರಾಯಣ, ಅಧ್ಯಕ್ಷರಾದ ಟಿ.ನಂಜಪ್ಪ, ಖಜಾಂಚಿ ವಾಸ್ತು ಶ್ರೀಧರ್, ಕಾರ್ಯದರ್ಶಿ ಸಿ.ಚಿನ್ನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-15-1134859987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್: ತಾಲ್ಲೂಕಿನ ಬಿದರಗೆರೆ ಓಣಿ ಹಾಗೂ ಮುತ್ತುಗಟ್ಟಿ ರಸ್ತೆಯಲ್ಲಿರುವ ಕುರುಬರಹಟ್ಟಿ ಮುನೇಶ್ವರಸ್ವಾಮಿ ದೇವಾಲಯದ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವವು ಸಂಭ್ರಮದಿಂದ ನೆರವೇರಿತು.</p>.<p>ಜಾತ್ರೆ ಪ್ರಯುಕ್ತ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಿದವು. ಮಧ್ಯಾಹ್ನ 2ರ ಸುಮಾರಿಗೆ ಅಲಂಕೃತ ರಥದಲ್ಲಿ ಮುನೇಶ್ವರ ಸ್ವಾಮಿಯನ್ನು ಕುಳ್ಳರಿಸಿ ದೇವಾಲಯದ ಸುತ್ತಲೂ ಭಕ್ತರು ರಥ ಎಳೆದರು.</p>.<p>ಜಾತ್ರೆ ಮಹೋತ್ಸವ ಪ್ರಯುಕ್ತ ಮುನೇಶ್ವರಸ್ವಾಮಿ, ತಿಮ್ಮರಾಯಸ್ವಾಮಿ, ಆಂಜನೇಯಸ್ವಾಮಿ, ಯಲ್ಲಮ್ಮ ದೇವಿ, ಮಾರಮ್ಮ ದೇವಿ ಸೇರಿದಂತೆ ವಿವಿಧ ದೇವತೆಗಳ ಪಲ್ಲಕ್ಕಿ ಉತ್ಸವ ನಡೆಯಿತು.</p>.<p>ಜಾತ್ರೆಯಲ್ಲಿ ರಾಧಾಕೃಷ್ಣ ಕೋಲಾಟ ಮಂಡಳಿ, ಜೈ ಮಾರುತಿ ಕೋಲಾಟ ಮಂಡಳಿ ಹಾಗೂ ಮದ್ದುರಮ್ಮ ಕೋಲಾಟ ಮಂಡಳಿಗಳಿಂದ ಮಹಿಳೆಯರು ಆಕರ್ಷಕ ಕೋಲಾಟ ಪ್ರದರ್ಶನ ನೀಡಿದರು. ತಮಟೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು.</p>.<p>ಮುಖಂಡರಾದ ಟಿ.ವಿ ಬಾಬು, ಸಿ.ಮುನಿರಾಜು, ಗೆರಟಿಗನ ಬೆಲೆ ರಾಮಕೃಷ್ಣ, ಎಚ್.ಎಂ.ತಿಮ್ಮರಾಜು, ದೇವಸ್ಥಾನದ ಕಾರ್ಯಕಾರಿ ಸಮಿತಿಯ ಗೌರವಾಧ್ಯಕ್ಷರಾದ ಎಂ.ಎಲ್.ನಾರಾಯಣ, ಅಧ್ಯಕ್ಷರಾದ ಟಿ.ನಂಜಪ್ಪ, ಖಜಾಂಚಿ ವಾಸ್ತು ಶ್ರೀಧರ್, ಕಾರ್ಯದರ್ಶಿ ಸಿ.ಚಿನ್ನಪ್ಪ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-15-1134859987</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>