<p><strong>ಆನೇಕಲ್: </strong>ತಾಲ್ಲೂಕಿನ ಮಂಚನಹಳ್ಳಿ ಸಮೀಪದ ಉಪಕಾರ್ ಗ್ರೀನ್ ಬಡಾವಣೆಯ ರಸ್ತೆಗಳಿಗೆ ಸಮೀಪದ ಕೆರೆ ಕೋಡಿ ನೀರು ಹರಿಯುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಬಡಾವಣೆಯ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಮಂಚನಹಳ್ಳಿಯ ಕಾಡಿ ಕೆರೆಯ ರಾಜಕಾಲುವೆಗಳು ಸ್ವಚ್ಛತೆಯಿಂದ ಕೂಡಿಲ್. ಒತ್ತುವರಿಯಾಗಿರುವುದರಿಂದ ರಾಜಕಾಲುವೆಯಲ್ಲಿ ಹರಿಯಬೇಕಾದ ನೀರು ಉಪಕಾರ್ ಬಡಾವಣೆಯ ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ಮನೆಗಳಿಗೆ ನೀರು ನುಗ್ಗುತ್ತಿವೆ. ಈ ಬಗ್ಗೆ ಹಲವಾರು ಬಾರಿ ಮಾಯಸಂದ್ರ ಗ್ರಾಮ ಪಂಚಾಯಿತಿ ಮತ್ತು ಉಪಕಾರ್ ಬಡಾವಣೆಯ ಸಿಬ್ಬಂದಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>₹40-50ಲಕ್ಷ ಹಣ ನೀಡಿ ನಿವೇಶನ ಖರೀದಿಸಿ, ಮನೆ ನಿರ್ಮಿಸಿಕೊಂಡಿದ್ದೇವೆ. ಆದರೆ ರಸ್ತೆಗೆ ಕೆರೆ ನೀರು ಹರಿಯುತ್ತಿರುವುದರಿಂದ ಪರದಾಡುವಂತಾಗಿದೆ. ಕೆರೆಯ ರಾಜಕಾಲುವೆಯ ಒತ್ತುವರಿ ತೆರವುಗೊಳಿಸಬೇಕು ಎಂದು ಉಪಕಾರ್ ಬಡಾವಣೆಯ ನಿವಾಸಿಗಳು ಒತ್ತಾಯಿಸಿದರು.</p>.<p>ಕಾರಿ ಕೆರೆಯ ಕೋಡಿ ನೀರು ಸಂಪೂರ್ಣವಾಗಿ ಉಪಕಾರ್ ಬಡಾವಣೆಗೆ ಹರಿಯುತ್ತಿದೆ. ಕೆರೆಯ ನೀರು ಮನೆಗಳಿಗೆ ಹರಿಯುತ್ತಿರುವುದರಿಂದ ಮನೆಗಳಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಸ್ಥಳೀಯ ಆನಂದ್ ತಿಳಿಸಿದರು.</p>.<p>ಮಳೆ ಬಂದರೆ ಪ್ರತಿಯೊಬ್ಬರಿಗೂ ಖುಷಿ. ಆದರೆ ಉಪಕಾರ್ ನಿವಾಸಿಗಳಿಗೆ ಮಳೆ ಬಂದರೆ ಕಷ್ಟ. ಮಳೆ ನೀರಿನೊಂದಿಗೆ ಕೊಳಚೆಯೂ ಹರಿಯುತ್ತಿದೆ. ಮನೆಗಳಲ್ಲಿ ಮಕ್ಕಳಿಗೆ ಜ್ವರ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಹಿಳೆಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮಂಚನಹಳ್ಳಿ ಸಮೀಪದ ಉಪಕಾರ್ ಗ್ರೀನ್ ಬಡಾವಣೆಯ ರಸ್ತೆಗಳಿಗೆ ಸಮೀಪದ ಕೆರೆ ಕೋಡಿ ನೀರು ಹರಿಯುತ್ತಿದ್ದು, ಇದನ್ನು ಸರಿಪಡಿಸಬೇಕೆಂದು ಆಗ್ರಹಿಸಿ ಬಡಾವಣೆಯ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.</p>.<p>ಮಂಚನಹಳ್ಳಿಯ ಕಾಡಿ ಕೆರೆಯ ರಾಜಕಾಲುವೆಗಳು ಸ್ವಚ್ಛತೆಯಿಂದ ಕೂಡಿಲ್. ಒತ್ತುವರಿಯಾಗಿರುವುದರಿಂದ ರಾಜಕಾಲುವೆಯಲ್ಲಿ ಹರಿಯಬೇಕಾದ ನೀರು ಉಪಕಾರ್ ಬಡಾವಣೆಯ ರಸ್ತೆಯಲ್ಲಿ ಹರಿಯುತ್ತಿದೆ. ಇದರಿಂದ ಮನೆಗಳಿಗೆ ನೀರು ನುಗ್ಗುತ್ತಿವೆ. ಈ ಬಗ್ಗೆ ಹಲವಾರು ಬಾರಿ ಮಾಯಸಂದ್ರ ಗ್ರಾಮ ಪಂಚಾಯಿತಿ ಮತ್ತು ಉಪಕಾರ್ ಬಡಾವಣೆಯ ಸಿಬ್ಬಂದಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>₹40-50ಲಕ್ಷ ಹಣ ನೀಡಿ ನಿವೇಶನ ಖರೀದಿಸಿ, ಮನೆ ನಿರ್ಮಿಸಿಕೊಂಡಿದ್ದೇವೆ. ಆದರೆ ರಸ್ತೆಗೆ ಕೆರೆ ನೀರು ಹರಿಯುತ್ತಿರುವುದರಿಂದ ಪರದಾಡುವಂತಾಗಿದೆ. ಕೆರೆಯ ರಾಜಕಾಲುವೆಯ ಒತ್ತುವರಿ ತೆರವುಗೊಳಿಸಬೇಕು ಎಂದು ಉಪಕಾರ್ ಬಡಾವಣೆಯ ನಿವಾಸಿಗಳು ಒತ್ತಾಯಿಸಿದರು.</p>.<p>ಕಾರಿ ಕೆರೆಯ ಕೋಡಿ ನೀರು ಸಂಪೂರ್ಣವಾಗಿ ಉಪಕಾರ್ ಬಡಾವಣೆಗೆ ಹರಿಯುತ್ತಿದೆ. ಕೆರೆಯ ನೀರು ಮನೆಗಳಿಗೆ ಹರಿಯುತ್ತಿರುವುದರಿಂದ ಮನೆಗಳಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ಸ್ಥಳೀಯ ಆನಂದ್ ತಿಳಿಸಿದರು.</p>.<p>ಮಳೆ ಬಂದರೆ ಪ್ರತಿಯೊಬ್ಬರಿಗೂ ಖುಷಿ. ಆದರೆ ಉಪಕಾರ್ ನಿವಾಸಿಗಳಿಗೆ ಮಳೆ ಬಂದರೆ ಕಷ್ಟ. ಮಳೆ ನೀರಿನೊಂದಿಗೆ ಕೊಳಚೆಯೂ ಹರಿಯುತ್ತಿದೆ. ಮನೆಗಳಲ್ಲಿ ಮಕ್ಕಳಿಗೆ ಜ್ವರ ಬರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಹಿಳೆಯೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>