<p>ಆನೇಕಲ್<strong>: </strong>ಟಿಐಇಐ ಕಂಪನಿ ಮತ್ತು ಕೇರಿಂಗ್ ವಿತ್ ಕಲರ್ಸ್ ಸ್ವಯಂಸೇವಾ ಸಂಸ್ಥೆಯಿಂದ ತಾಲ್ಲೂಕಿನ 14 ಸರ್ಕಾರಿ ಶಾಲೆಗಳಿಗೆ ಕಲಿಕಾ ಉಪಕರಣ ವಿತರಿಸಲಾಯಿತು.</p>.<p>ತಾಲ್ಲೂಕಿನ ಜಿಗಣಿ ಸಮೀಪದ ಕೋನಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.</p>.<p>ಟಿಐಇಐ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಯಶು ಶಿಶುನೋ, ಸುಸ್ಥಿರ ಅಭಿವೃದ್ಧಿಗಾಗಿ ಸರ್ಕಾರಿ ಶಾಲೆಗಳ ಬಲವರ್ಧನೆ ಮುಖ್ಯವಾದುದು. ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ದೊರೆಯುವಂತಾಗಬೇಕು. ಇದರಿಂದ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಸಂಸ್ಥೆಯಿಂದ ಉಜ್ವಲ ಭವಿಷ್ಯಕ್ಕೆ ಕಲಿಕಾ ವರ್ಧನ ಕಾರ್ಯಕ್ರಮದಡಿಯಲ್ಲಿ ಕಲಿಕಾ ಪರಿಕರ ವಿತರಿಸಲಾಗಿದೆ. ಅಭ್ಯಾಸ, ಕಥಾ ಪುಸ್ತಕ ಸೇರಿದಂತೆ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳನ್ನು ವಿತರಿಸಲಾಗಿದೆ. ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪುಸ್ತಕಗಳ ಓದುವ ಅಭ್ಯಾಸ ಮಾಡಿಸಬೇಕು ಎಂದರು.</p>.<p>ಕೇರಿಂಗ್ ವಿಥ್ ಕಲರ್ಸ್ ಸಂಸ್ಥೆಯ ಟ್ರಸ್ಟಿ ರಾಜೀವ್ ಅನ್ನಲ್ಲೂರು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ತಾಲೂಕಿನ 14 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕಲಿಕಾ ಪರಿಕರ ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಡಯಟ್ ಉಪನ್ಯಾಸಕ ಗಂಗಪ್ಪ ಗೌಡ, ಟಯೋಟ ಕಂಪನಿಯ ಸಿಎಸ್ಆರ್ ಮುಖ್ಯಸ್ಥ ರಾಘವೇಂದ್ರ, ಶಿಕ್ಷಣ ಸಂಯೋಜಕ ಶಿವಣ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ಪರಿಮಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆನೇಕಲ್<strong>: </strong>ಟಿಐಇಐ ಕಂಪನಿ ಮತ್ತು ಕೇರಿಂಗ್ ವಿತ್ ಕಲರ್ಸ್ ಸ್ವಯಂಸೇವಾ ಸಂಸ್ಥೆಯಿಂದ ತಾಲ್ಲೂಕಿನ 14 ಸರ್ಕಾರಿ ಶಾಲೆಗಳಿಗೆ ಕಲಿಕಾ ಉಪಕರಣ ವಿತರಿಸಲಾಯಿತು.</p>.<p>ತಾಲ್ಲೂಕಿನ ಜಿಗಣಿ ಸಮೀಪದ ಕೋನಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಯಿತು.</p>.<p>ಟಿಐಇಐ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಯಶು ಶಿಶುನೋ, ಸುಸ್ಥಿರ ಅಭಿವೃದ್ಧಿಗಾಗಿ ಸರ್ಕಾರಿ ಶಾಲೆಗಳ ಬಲವರ್ಧನೆ ಮುಖ್ಯವಾದುದು. ಖಾಸಗಿ ಶಾಲೆಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ಸರ್ಕಾರಿ ಶಾಲೆಗಳಲ್ಲಿ ದೊರೆಯುವಂತಾಗಬೇಕು. ಇದರಿಂದ ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಹೇಳಿದರು.</p>.<p>ಸಂಸ್ಥೆಯಿಂದ ಉಜ್ವಲ ಭವಿಷ್ಯಕ್ಕೆ ಕಲಿಕಾ ವರ್ಧನ ಕಾರ್ಯಕ್ರಮದಡಿಯಲ್ಲಿ ಕಲಿಕಾ ಪರಿಕರ ವಿತರಿಸಲಾಗಿದೆ. ಅಭ್ಯಾಸ, ಕಥಾ ಪುಸ್ತಕ ಸೇರಿದಂತೆ ಮಕ್ಕಳಿಗೆ ಅಗತ್ಯವಿರುವ ಪುಸ್ತಕಗಳನ್ನು ವಿತರಿಸಲಾಗಿದೆ. ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಪುಸ್ತಕಗಳ ಓದುವ ಅಭ್ಯಾಸ ಮಾಡಿಸಬೇಕು ಎಂದರು.</p>.<p>ಕೇರಿಂಗ್ ವಿಥ್ ಕಲರ್ಸ್ ಸಂಸ್ಥೆಯ ಟ್ರಸ್ಟಿ ರಾಜೀವ್ ಅನ್ನಲ್ಲೂರು, ಸರ್ಕಾರಿ ಶಾಲೆಗಳ ಬಲವರ್ಧನೆಗಾಗಿ ತಾಲೂಕಿನ 14 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಕಲಿಕಾ ಪರಿಕರ ವಿತರಿಸಲಾಗಿದೆ ಎಂದು ತಿಳಿಸಿದರು.</p>.<p>ಬೆಂಗಳೂರು ಡಯಟ್ ಉಪನ್ಯಾಸಕ ಗಂಗಪ್ಪ ಗೌಡ, ಟಯೋಟ ಕಂಪನಿಯ ಸಿಎಸ್ಆರ್ ಮುಖ್ಯಸ್ಥ ರಾಘವೇಂದ್ರ, ಶಿಕ್ಷಣ ಸಂಯೋಜಕ ಶಿವಣ್ಣ, ಸಮೂಹ ಸಂಪನ್ಮೂಲ ವ್ಯಕ್ತಿ ಪರಿಮಳ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>