<p><strong>ಆನೇಕಲ್:</strong> ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮುಖ್ಯ ರಸ್ತೆಗಳಲ್ಲಿಯೇ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ತುಂಬಿದ್ದು ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ. </p><p>ಅತ್ತಿಬೆಲೆ ರಸ್ತೆಯಲ್ಲಿ ಗುಂಡಿಗಳೇ ಸ್ವಾಗತ ನೀಡುತ್ತಿವೆ. ಟಿವಿಎಸ್ ಕ್ರಾಸ್ನಿಂದ ಅತ್ತಿಬೆಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು ಸಾರ್ವಜನಿಕರು ಓಡಾಡಲು ಸಾಧ್ಯವಾಗುತ್ತಿಲ್ಲ. ಕಾರು, ಲಾರಿಗಳು ಹಳ್ಳದಲ್ಲಿ ಬಿದ್ದು ಎದ್ದಂತೆ ಭಾಸವಾಗುತ್ತಿದೆ ಎಂದು ಕಾರು ಚಾಲಕರೊಬ್ಬರು ಪ್ರಜಾವಾಣಿಗೆ ತಿಳಿಸಿದರು.</p><p>ಅತ್ತಿಬೆಲೆಯ ಮುಖ್ಯರಸ್ತೆಯಲ್ಲಿ ಎರಡು ಕಿ.ಮೀ ಗೂ ಹೆಚ್ಚು ದೂರ ಗುಂಡಿಗಳು ತುಂಬಿವೆ. ಅತ್ತಿಬೆಲೆಗೆ ಬರುವಷ್ಟರಲ್ಲಿ ದ್ವಿಚಕ್ರ ವಾಹನ ಸವಾರರು ತಂತಿಯ ಮೇಲಿನ ನಡಿಗೆಯಂತೆ ಓಡಾಡಬೇಕಿದೆ. ಅತ್ತಿಬೆಲೆಯ ಮುಖ್ಯ ರಸ್ತೆಯಲ್ಲಿಯೇ ಗುಂಡಿಗಳು ಬಿದ್ದಿರುವುದರಿಂದ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ರಸ್ತೆ ಗುಂಡಿ ಮುಚ್ಚಿಸಬೇಕು ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಸ್ಥಳೀಯ ನಿವಾಸಿ ಸುನೀಲ್ ಒತ್ತಾಯಿಸಿದರು.</p><p>ಅತ್ತಿಬೆಲೆಯಿಂದ ಆನೇಕಲ್, ಬಳ್ಳೂರು ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು ಸಾರ್ವಜನಿಕರ ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ರಸ್ತೆ ದಟ್ಟಣೆ ಮತ್ತು ಅಪಘಾತ ಹೆಚ್ಚಾಗಿದೆ. ಹಾಗಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ಸ್ಥಳೀಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ತಾಲ್ಲೂಕಿನ ಅತ್ತಿಬೆಲೆಯಲ್ಲಿ ಮುಖ್ಯ ರಸ್ತೆಗಳಲ್ಲಿಯೇ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿಗಳಲ್ಲಿ ನೀರು ತುಂಬಿದ್ದು ದ್ವಿಚಕ್ರ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುವಂತಾಗಿದೆ. </p><p>ಅತ್ತಿಬೆಲೆ ರಸ್ತೆಯಲ್ಲಿ ಗುಂಡಿಗಳೇ ಸ್ವಾಗತ ನೀಡುತ್ತಿವೆ. ಟಿವಿಎಸ್ ಕ್ರಾಸ್ನಿಂದ ಅತ್ತಿಬೆಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದು ಸಾರ್ವಜನಿಕರು ಓಡಾಡಲು ಸಾಧ್ಯವಾಗುತ್ತಿಲ್ಲ. ಕಾರು, ಲಾರಿಗಳು ಹಳ್ಳದಲ್ಲಿ ಬಿದ್ದು ಎದ್ದಂತೆ ಭಾಸವಾಗುತ್ತಿದೆ ಎಂದು ಕಾರು ಚಾಲಕರೊಬ್ಬರು ಪ್ರಜಾವಾಣಿಗೆ ತಿಳಿಸಿದರು.</p><p>ಅತ್ತಿಬೆಲೆಯ ಮುಖ್ಯರಸ್ತೆಯಲ್ಲಿ ಎರಡು ಕಿ.ಮೀ ಗೂ ಹೆಚ್ಚು ದೂರ ಗುಂಡಿಗಳು ತುಂಬಿವೆ. ಅತ್ತಿಬೆಲೆಗೆ ಬರುವಷ್ಟರಲ್ಲಿ ದ್ವಿಚಕ್ರ ವಾಹನ ಸವಾರರು ತಂತಿಯ ಮೇಲಿನ ನಡಿಗೆಯಂತೆ ಓಡಾಡಬೇಕಿದೆ. ಅತ್ತಿಬೆಲೆಯ ಮುಖ್ಯ ರಸ್ತೆಯಲ್ಲಿಯೇ ಗುಂಡಿಗಳು ಬಿದ್ದಿರುವುದರಿಂದ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಕ್ರಮ ವಹಿಸಿ ರಸ್ತೆ ಗುಂಡಿ ಮುಚ್ಚಿಸಬೇಕು ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ನೀಡಬೇಕು ಎಂದು ಸ್ಥಳೀಯ ನಿವಾಸಿ ಸುನೀಲ್ ಒತ್ತಾಯಿಸಿದರು.</p><p>ಅತ್ತಿಬೆಲೆಯಿಂದ ಆನೇಕಲ್, ಬಳ್ಳೂರು ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಹದಗೆಟ್ಟಿದ್ದು ಸಾರ್ವಜನಿಕರ ಓಡಾಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ರಸ್ತೆ ದಟ್ಟಣೆ ಮತ್ತು ಅಪಘಾತ ಹೆಚ್ಚಾಗಿದೆ. ಹಾಗಾಗಿ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕು ಎಂಬುದು ಸ್ಥಳೀಯರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>