<p><strong>ಆನೇಕಲ್: </strong>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಳ್ಳಪ್ಪಸ್ವಾಮಿ, ಮಠದ ಆವರಣದಲ್ಲಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ 15ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಮತ್ತು ಅಂಗವಿಕಲರ ವಿಶೇಷ ಗ್ರಾಮಸಭೆ ನಡೆಯಿತು. ಗ್ರಾಮ ಸಭೆಯಲ್ಲಿ 70 ಮಂದಿ ಅಂಗವಿಕಲರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.</p>.<p>ಅಂಗವಿಲರಿಗೆ ಅನುಕಂಪಕ್ಕೆ ಬದಲಾಗಿ ಅವಕಾಶ ನೀಡಬೇಕು. ಇದರಿಂದ ಅವರು ಸಾಧನೆ ಮಾಡಬಹುದು. ಅಂಗವಿಕಲರು ಕೀಳರಿಮೆ ಇಲ್ಲದೆ ಎಲ್ಲ ರಂಗಗಳಲ್ಲಿಯೂ ಮುಕ್ತವಾಗಿ ಪಾಲ್ಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಮಾಯಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ನಾರಾಯಣಪ್ಪ ಹೇಳಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಅಂಗವಿಕಲರಿಗೆ ಪ್ರತ್ಯೇಕ ಅನುದಾನ ಮತ್ತು ಪ್ರತ್ಯೇಕ ಕಾರ್ಯಕ್ರಮ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.</p>.<p>‘ವಿಕಲಚೇತನನಾಗಿದ್ದರೂ ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಇರಾದೆಯೊಂದಿಗೆ ರಾಜಕೀಯ ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿದ್ದೇನೆ. ಸ್ವಾವಲಂಭಿ ಜೀವನ ನಡೆಸಬೇಕು. ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಮಾದರಿಯಾಗಬೇಕು ಎಂಬುದು ನನ್ನ ಗುರಿ’ ಎಂದು ಗ್ರಾ.ಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.</p>.<p>ಸಿಡಿಪಿಒ ಮಹೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಂಚನಹಳ್ಳಿ ಸುಬ್ರಮಣಿ, ಶ್ರೀನಿವಾಸ್, ಹರೀಶ್, ಸರಸ್ವತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಿಳ್ಳಪ್ಪಸ್ವಾಮಿ, ಮಠದ ಆವರಣದಲ್ಲಿ ಗ್ರಾಮ ಪಂಚಾಯಿತಿಯ 2025-26ನೇ ಸಾಲಿನ 15ನೇ ಹಣಕಾಸು ಆಯೋಗದ ಸಾಮಾಜಿಕ ಪರಿಶೋಧನಾ ಗ್ರಾಮ ಸಭೆ ಮತ್ತು ಅಂಗವಿಕಲರ ವಿಶೇಷ ಗ್ರಾಮಸಭೆ ನಡೆಯಿತು. ಗ್ರಾಮ ಸಭೆಯಲ್ಲಿ 70 ಮಂದಿ ಅಂಗವಿಕಲರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.</p>.<p>ಅಂಗವಿಲರಿಗೆ ಅನುಕಂಪಕ್ಕೆ ಬದಲಾಗಿ ಅವಕಾಶ ನೀಡಬೇಕು. ಇದರಿಂದ ಅವರು ಸಾಧನೆ ಮಾಡಬಹುದು. ಅಂಗವಿಕಲರು ಕೀಳರಿಮೆ ಇಲ್ಲದೆ ಎಲ್ಲ ರಂಗಗಳಲ್ಲಿಯೂ ಮುಕ್ತವಾಗಿ ಪಾಲ್ಗೊಳ್ಳುವ ಮೂಲಕ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಬೇಕು ಎಂದು ಮಾಯಸಂದ್ರ ಗ್ರಾಮ ಪಂಚಾಯತಿ ಅಧ್ಯಕ್ಷ ನಾರಾಯಣಪ್ಪ ಹೇಳಿದರು.</p>.<p>ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಅಂಗವಿಕಲರಿಗೆ ಪ್ರತ್ಯೇಕ ಅನುದಾನ ಮತ್ತು ಪ್ರತ್ಯೇಕ ಕಾರ್ಯಕ್ರಮ ರೂಪಿಸಲು ಕ್ರಮ ವಹಿಸಲಾಗುವುದು ಎಂದರು.</p>.<p>‘ವಿಕಲಚೇತನನಾಗಿದ್ದರೂ ಸಮಾಜಕ್ಕೆ ಕೊಡುಗೆ ನೀಡಬೇಕೆಂಬ ಇರಾದೆಯೊಂದಿಗೆ ರಾಜಕೀಯ ಮತ್ತು ಕೃಷಿ ಕ್ಷೇತ್ರದಲ್ಲಿ ತೊಡಗಿದ್ದೇನೆ. ಸ್ವಾವಲಂಭಿ ಜೀವನ ನಡೆಸಬೇಕು. ಸಮಾಜಕ್ಕೆ ಕೊಡುಗೆ ನೀಡುವ ನಿಟ್ಟಿನಲ್ಲಿ ಮಾದರಿಯಾಗಬೇಕು ಎಂಬುದು ನನ್ನ ಗುರಿ’ ಎಂದು ಗ್ರಾ.ಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.</p>.<p>ಸಿಡಿಪಿಒ ಮಹೇಶ್, ಗ್ರಾಮ ಪಂಚಾಯತಿ ಸದಸ್ಯರಾದ ಮಂಚನಹಳ್ಳಿ ಸುಬ್ರಮಣಿ, ಶ್ರೀನಿವಾಸ್, ಹರೀಶ್, ಸರಸ್ವತಿ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>