<p><strong>ಆನೇಕಲ್: </strong>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ 24*7 ನೀರು ಸರಬರಾಜುಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿ, ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾಯಸಂದ್ರ ಗ್ರಾಮ ಪಂಚಾಯಿತಿಯ ಮೇಡಹಳ್ಳಿ ಗ್ರಾಮದಲ್ಲಿ 24*7 ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಾಗಿದೆ. ಮುಂದಿನ 15 ದಿನಗಳೊಳಗಾಗಿ ಮಾಯಸಂದ್ರ ಗ್ರಾಮದಲ್ಲಿಯೂ ಸಹ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿಯೂ ನೀರಿನ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಹಿಂದೆ ದಿನದಲ್ಲಿ ಕೆಲವು ಗಂಟೆಗಳು ಮಾತ್ರ ನೀರು ಸೌಲಭ್ಯ ದೊರೆಯುತ್ತಿತ್ತು. ಆದರೆ ಜಲಜೀವನ್ ಮಿಷನ್ ಯೋಜನೆಯಿಂದ ವಾರದ ಏಳು ದಿನಗಳು 24 ಗಂಟೆಯೂ ಸಹ ನೀರಿನ ವ್ಯವಸ್ಥೆ ದೊರೆಯುತ್ತದೆ ಎಂದರು.</p>.<p>ಮಾಯಸಂದ್ರ ಗ್ರಾಮ ಪಂಚಾಯತಿಯು ಅತ್ತಿಬೆಲೆ ಮತ್ತು ಆನೇಕಲ್ ಮಧ್ಯ ಭಾಗದಲ್ಲಿದೆ. ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದು, ಡಿಸೆಂಬರ್ ಮೂರನೇ ವಾರದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಅಭಿಯಂತರ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ನವೀನಾ ಹರೀಶ್, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತಾ, ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ರುಕ್ಕು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮಾಯಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೇಡಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಜಲಜೀವನ್ ಮಿಷನ್ ಅಡಿಯಲ್ಲಿ 24*7 ನೀರು ಸರಬರಾಜುಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣಪ್ಪ ಚಾಲನೆ ನೀಡಿದರು.</p>.<p>ಬಳಿಕ ಮಾತನಾಡಿ, ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಪ್ರತಿ ಮನೆಗಳಿಗೂ ನೀರಿನ ಸಂಪರ್ಕ ಕಲ್ಪಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಮಾಯಸಂದ್ರ ಗ್ರಾಮ ಪಂಚಾಯಿತಿಯ ಮೇಡಹಳ್ಳಿ ಗ್ರಾಮದಲ್ಲಿ 24*7 ನೀರು ಸರಬರಾಜು ಯೋಜನೆಗೆ ಚಾಲನೆ ನೀಡಲಾಗಿದೆ. ಮುಂದಿನ 15 ದಿನಗಳೊಳಗಾಗಿ ಮಾಯಸಂದ್ರ ಗ್ರಾಮದಲ್ಲಿಯೂ ಸಹ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.</p>.<p>ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿಯೂ ನೀರಿನ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳಿಗೆ ವೇಗ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಈ ಹಿಂದೆ ದಿನದಲ್ಲಿ ಕೆಲವು ಗಂಟೆಗಳು ಮಾತ್ರ ನೀರು ಸೌಲಭ್ಯ ದೊರೆಯುತ್ತಿತ್ತು. ಆದರೆ ಜಲಜೀವನ್ ಮಿಷನ್ ಯೋಜನೆಯಿಂದ ವಾರದ ಏಳು ದಿನಗಳು 24 ಗಂಟೆಯೂ ಸಹ ನೀರಿನ ವ್ಯವಸ್ಥೆ ದೊರೆಯುತ್ತದೆ ಎಂದರು.</p>.<p>ಮಾಯಸಂದ್ರ ಗ್ರಾಮ ಪಂಚಾಯತಿಯು ಅತ್ತಿಬೆಲೆ ಮತ್ತು ಆನೇಕಲ್ ಮಧ್ಯ ಭಾಗದಲ್ಲಿದೆ. ಸುಸಜ್ಜಿತ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಆಂಬುಲೆನ್ಸ್ ವ್ಯವಸ್ಥೆ ಮಾಡಲು ಚಿಂತನೆ ನಡೆಸಿದ್ದು, ಡಿಸೆಂಬರ್ ಮೂರನೇ ವಾರದಲ್ಲಿ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಿರಿಯ ಅಭಿಯಂತರ ಮಹದೇವಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ನವೀನಾ ಹರೀಶ್, ಶ್ರೀನಿವಾಸ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿಜೇತಾ, ಕುಡಿಯುವ ನೀರು ಇಲಾಖೆಯ ಸಹಾಯಕ ಕಾರ್ಯ ಪಾಲಕ ಎಂಜಿನಿಯರ್ ರುಕ್ಕು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>