ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಫೋಟ ಸಂಭವಿಸಿ 24 ಗಂಟೆಯಾದರೂ ಸರ್ಕಾರದ ಬಳಿ ಆರೋಪಿಗಳು ಮತ್ತು ಘಟನೆ ಬಗ್ಗೆ ಸಮರ್ಪಕ ಮಾಹಿತಿ ಇಲ್ಲ. ಇಂತಹ ಘಟನೆ ಭಯೋತ್ಪಾದನಾ ಕೃತ್ಯಗಳಿಗೆ ದಾರಿ ಮಾಡಿಕೊಡುತ್ತವೆ. ಇದು ದೇಶದ ಭದ್ರತೆಯ ವಿಚಾರ. ಹಾಗಾಗಿ ಯಾವುದೇ ರಾಜೀ ಮಾಡಿಕೊಳ್ಳಬಾರದು. ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.