<p><strong>ಆನೇಕಲ್:</strong> ಪಟ್ಟಣದ ಪುರಸಭೆಯಿಂದ ರಸ್ತೆಗಳ ಸ್ವಚ್ಛತೆಗಾಗಿ ಯಂತ್ರಗಳ ಮೂಲಕ ರಸ್ತೆ ಸ್ವಚ್ಛತೆ ಕಾರ್ಯಕ್ಕೆ ಪುರಸಭೆ ಅಧ್ಯಕ್ಷೆ ಸುಧಾನಿರಂಜನ್ ಮತ್ತು ಉಪಾಧ್ಯಕ್ಷೆ ಭುವನಾ ದಿನೇಶ್ ಚಾಲನೆ ನೀಡಿದರು.</p>.<p>ಪುರಸಭೆ ಅಧ್ಯಕ್ಷೆ ಸುಧಾ ನಿರಂಜನ್ ಮಾತನಾಡಿ, ಆನೇಕಲ್ ಪಟ್ಟಣದಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಸವಾಲಾಗಿದೆ. ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ. ಮುಖ್ಯ ರಸ್ತೆಗಳನ್ನು ದೂಳು ಮುಕ್ತ ರಸ್ತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಯಂತ್ರಗಳಿಗೆ ಚಾಲನೆ ನೀಡಲಾಗಿದೆ ಎಂದರು.</p>.<p>ರಸ್ತೆ ಸ್ವಚ್ಛತೆಗಾಗಿ ಪುರಸಭೆಯ ಪೌರಕಾರ್ಮಿಕರು ಪ್ರತಿದಿನ ಬೆಳಗ್ಗೆ ಶ್ರಮವಹಿಸುತ್ತಿದ್ದರು. ಸ್ವಚ್ಛತಾ ಯಂತ್ರದಿಂದಾಗಿ ಪೌರಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚರಿಸುವುದು ಕಷ್ಟವಾಗಿತ್ತು. ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿತ್ತು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ವಚ್ಛತಾ ಪರಿಕರಗಳನ್ನು ಖರೀದಿಸಲಾಗಿದೆ ಎಂದರು.</p>.<p>ದೂಳು ಮುಕ್ತ ಪುರಸಭೆಯನ್ನಾಗಿ ಮಾಡಲು ಹೆಚ್ಚಿನ ಗಮನ ವಹಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳ ಕಸವನ್ನು ಹಸಿ ಮತ್ತು ಒಣ ಕಸಗಳಾಗಿ ವಿಂಗಡಿಸಿ ಪುರಸಭೆ ವಾಹನಕ್ಕೆ ನೀಡಬೇಕು. ಪೌರಕಾರ್ಮಿಕರು ಪ್ರತಿದಿನ ಮುಖ್ಯ ರಸ್ತೆಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಶ್ರಮ ಶ್ಲಾಘನೀಯ ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ಭುವನಾ ದಿನೇಶ್ ಮಾತನಾಡಿ, ಆನೇಕಲ್ ದಸರಾ ನಮ್ಮೆಲ್ಲರ ಹೆಮ್ಮೆಯಾಗಿದೆ. ಪಟ್ಟಣದಲ್ಲಿ ನಡೆಯುವ ವೈಭವದ ದಸರಾ ಹಬ್ಬದಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರಿಗೆ ದೂಳಿನ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗಿದೆ ಎಂದರು.</p>.<p>ಪುರಸಭೆ ಸದಸ್ಯ ಸುರೇಶ್ ಬಾಬು, ಮುಖ್ಯಾಧಿಕಾರಿ ಅಮರನಾಥ್, ಆರೋಗ್ಯ ನಿರೀಕ್ಷಕ ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಪಟ್ಟಣದ ಪುರಸಭೆಯಿಂದ ರಸ್ತೆಗಳ ಸ್ವಚ್ಛತೆಗಾಗಿ ಯಂತ್ರಗಳ ಮೂಲಕ ರಸ್ತೆ ಸ್ವಚ್ಛತೆ ಕಾರ್ಯಕ್ಕೆ ಪುರಸಭೆ ಅಧ್ಯಕ್ಷೆ ಸುಧಾನಿರಂಜನ್ ಮತ್ತು ಉಪಾಧ್ಯಕ್ಷೆ ಭುವನಾ ದಿನೇಶ್ ಚಾಲನೆ ನೀಡಿದರು.</p>.<p>ಪುರಸಭೆ ಅಧ್ಯಕ್ಷೆ ಸುಧಾ ನಿರಂಜನ್ ಮಾತನಾಡಿ, ಆನೇಕಲ್ ಪಟ್ಟಣದಲ್ಲಿ ಸ್ವಚ್ಛತೆಯನ್ನು ಕಾಪಾಡುವುದು ಸವಾಲಾಗಿದೆ. ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅತ್ಯಂತ ಮುಖ್ಯವಾಗಿದೆ. ಮುಖ್ಯ ರಸ್ತೆಗಳನ್ನು ದೂಳು ಮುಕ್ತ ರಸ್ತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಸ್ವಚ್ಛತಾ ಯಂತ್ರಗಳಿಗೆ ಚಾಲನೆ ನೀಡಲಾಗಿದೆ ಎಂದರು.</p>.<p>ರಸ್ತೆ ಸ್ವಚ್ಛತೆಗಾಗಿ ಪುರಸಭೆಯ ಪೌರಕಾರ್ಮಿಕರು ಪ್ರತಿದಿನ ಬೆಳಗ್ಗೆ ಶ್ರಮವಹಿಸುತ್ತಿದ್ದರು. ಸ್ವಚ್ಛತಾ ಯಂತ್ರದಿಂದಾಗಿ ಪೌರಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಿದೆ. ರಸ್ತೆಗಳಲ್ಲಿ ಧೂಳಿನಿಂದಾಗಿ ಸಂಚರಿಸುವುದು ಕಷ್ಟವಾಗಿತ್ತು. ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿತ್ತು. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸ್ವಚ್ಛತಾ ಪರಿಕರಗಳನ್ನು ಖರೀದಿಸಲಾಗಿದೆ ಎಂದರು.</p>.<p>ದೂಳು ಮುಕ್ತ ಪುರಸಭೆಯನ್ನಾಗಿ ಮಾಡಲು ಹೆಚ್ಚಿನ ಗಮನ ವಹಿಸಲಾಗಿದೆ. ಸಾರ್ವಜನಿಕರು ತಮ್ಮ ಮನೆಗಳ ಕಸವನ್ನು ಹಸಿ ಮತ್ತು ಒಣ ಕಸಗಳಾಗಿ ವಿಂಗಡಿಸಿ ಪುರಸಭೆ ವಾಹನಕ್ಕೆ ನೀಡಬೇಕು. ಪೌರಕಾರ್ಮಿಕರು ಪ್ರತಿದಿನ ಮುಖ್ಯ ರಸ್ತೆಗಳನ್ನು ಸ್ವಚ್ಛಗೊಳಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರ ಶ್ರಮ ಶ್ಲಾಘನೀಯ ಎಂದರು.</p>.<p>ಪುರಸಭೆ ಉಪಾಧ್ಯಕ್ಷೆ ಭುವನಾ ದಿನೇಶ್ ಮಾತನಾಡಿ, ಆನೇಕಲ್ ದಸರಾ ನಮ್ಮೆಲ್ಲರ ಹೆಮ್ಮೆಯಾಗಿದೆ. ಪಟ್ಟಣದಲ್ಲಿ ನಡೆಯುವ ವೈಭವದ ದಸರಾ ಹಬ್ಬದಲ್ಲಿ ಸಾವಿರಾರು ಮಂದಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರಿಗೆ ದೂಳಿನ ಸಮಸ್ಯೆ ಪರಿಹರಿಸಲು ಕ್ರಮ ವಹಿಸಲಾಗಿದೆ ಎಂದರು.</p>.<p>ಪುರಸಭೆ ಸದಸ್ಯ ಸುರೇಶ್ ಬಾಬು, ಮುಖ್ಯಾಧಿಕಾರಿ ಅಮರನಾಥ್, ಆರೋಗ್ಯ ನಿರೀಕ್ಷಕ ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>