<p><strong>ಆನೇಕಲ್ : </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯ ಕಾಡ ಅಗ್ರಹಾರದ ಕೋದಂಡರಾಮಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ರಥೋತ್ಸವದ ಪ್ರಯುಕ್ತ ಕೋದಂಡರಾಮಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12ರ ಸುಮಾರಿಗೆ ಅಲಂಕೃತ ರಥದಲ್ಲಿ ಕೋದಂಡರಾಮಸ್ವಾಮಿ ಉತ್ಸವ ಮೂರ್ತಿಯನ್ನು ಕುಳ್ಳರಿಸಲಾಯಿತು. ಸಾಂಪ್ರದಾಯಿಕ ಪೂಜೆ ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮಹಿಳೆಯರು ಸೇರಿದಂತೆ ನೂರಾರು ಮಂದಿ ಭಕ್ತರು ತೇರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ತಮಟೆ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಯುವಕರು ಪರಸ್ಪರ ಬಣ್ಣಗಳನ್ನು ಎರಚುತ್ತಾ ತಮಟೆ ವಾದನಕ್ಕೆ ನೃತ್ಯ ಮಾಡಿ ಸಂಭ್ರಮಿಸಿದರು.</p>.<p>ರಥೋತ್ಸವದ ಪ್ರಯುಕ್ತ ಭಾನುವಾರ ಸಂಜೆ ಆಸ್ಥಾನ ಸೇವೆ, ಕಾಶಿ ಯಾತ್ರೆ, ಸೀತಾರಾಮ ಕಲ್ಯಾಣೋತ್ಸವ ನಡೆಯಿತು. ಗ್ರಾಮದ 15ಕ್ಕೂ ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್ : </strong>ತಾಲ್ಲೂಕಿನ ಸರ್ಜಾಪುರ ಹೋಬಳಿಯ ಕಾಡ ಅಗ್ರಹಾರದ ಕೋದಂಡರಾಮಸ್ವಾಮಿ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು. ಸುತ್ತಮುತ್ತಲ ಗ್ರಾಮಗಳ ನೂರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡರು.</p>.<p>ರಥೋತ್ಸವದ ಪ್ರಯುಕ್ತ ಕೋದಂಡರಾಮಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ ಏರ್ಪಡಿಸಲಾಗಿತ್ತು. ಮಧ್ಯಾಹ್ನ 12ರ ಸುಮಾರಿಗೆ ಅಲಂಕೃತ ರಥದಲ್ಲಿ ಕೋದಂಡರಾಮಸ್ವಾಮಿ ಉತ್ಸವ ಮೂರ್ತಿಯನ್ನು ಕುಳ್ಳರಿಸಲಾಯಿತು. ಸಾಂಪ್ರದಾಯಿಕ ಪೂಜೆ ನೆರವೇರಿಸಿದ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.</p>.<p>ಮಹಿಳೆಯರು ಸೇರಿದಂತೆ ನೂರಾರು ಮಂದಿ ಭಕ್ತರು ತೇರನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ತಮಟೆ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ನೀಡಿದವು. ಯುವಕರು ಪರಸ್ಪರ ಬಣ್ಣಗಳನ್ನು ಎರಚುತ್ತಾ ತಮಟೆ ವಾದನಕ್ಕೆ ನೃತ್ಯ ಮಾಡಿ ಸಂಭ್ರಮಿಸಿದರು.</p>.<p>ರಥೋತ್ಸವದ ಪ್ರಯುಕ್ತ ಭಾನುವಾರ ಸಂಜೆ ಆಸ್ಥಾನ ಸೇವೆ, ಕಾಶಿ ಯಾತ್ರೆ, ಸೀತಾರಾಮ ಕಲ್ಯಾಣೋತ್ಸವ ನಡೆಯಿತು. ಗ್ರಾಮದ 15ಕ್ಕೂ ಗ್ರಾಮದೇವತೆಗಳ ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>