<p><strong>ಆನೇಕಲ್: </strong>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಓಂ ಶಕ್ತಿ ದೇವಾಲಯದಲ್ಲಿ ಮಂಡಲ ಪೂಜೆ ಶ್ರದ್ಧಾ,ಭಕ್ತಿಯಿಂದ ಶುಕ್ರವಾರ ನೆರವೇರಿತು. ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಮಂಡಲ ಪೂಜೆ ಪ್ರಯುಕ್ತ ದೇವಾಲಯದಲ್ಲಿ ಶಾಂತಿ ಹೋಮ ಆಯೋಜಿಸಲಾಗಿತ್ತು. ದೇವಿಗೆ ಅಭಿಷೇಕ ಕಲಶ ಅಭಿಷೇಕ ವಿಶೇಷ ಅಲಂಕಾರ ಮಾಡಲಾಗಿತ್ತು. ಸುತ್ತಮುತ್ತಲ ಗ್ರಾಮಗಳ ಮಹಿಳೆಯರು ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಮಾಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಧಾರ್ಮಿಕ ಕಾರ್ಯಕ್ರಮಗಳಿಂದ ಗ್ರಾಮಗಳಲ್ಲಿ ಒಗ್ಗಟ್ಟು ಮೂಡುತ್ತದೆ. ಗ್ರಾಮದ ಮಹಿಳೆಯರು ಸಾಮರಸ್ಯದಿಂದ ಜೀವನ ನಡೆಸಲು ಧಾರ್ಮಿಕ ಕಾರ್ಯಕ್ರಮಗಳು ಉಪಯುಕ್ತವಾಗಿದೆ. ಮಹಿಳೆಯರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ದೇವಾಲಯದ ರಾಧಾ ನಾಗರಾಜ ರೆಡ್ಡಿ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಜಾತ, ದೇವಾಲಯದ ಚಿನ್ನಪ್ಪ, ನಾಗರತ್ನಮ್ಮ, ಕಾಂತರಾಜು, ರೇಣುಕಾ, ಶಿವರಾಂ, ಅಣ್ಣಯ್ಯ, ಯಲ್ಲಮ್ಮ, ತಬಲಾ ಶ್ರೀನಿವಾಸ್, ಬಸಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಮುತ್ತಾನಲ್ಲೂರು ಗ್ರಾಮದಲ್ಲಿ ಓಂ ಶಕ್ತಿ ದೇವಾಲಯದಲ್ಲಿ ಮಂಡಲ ಪೂಜೆ ಶ್ರದ್ಧಾ,ಭಕ್ತಿಯಿಂದ ಶುಕ್ರವಾರ ನೆರವೇರಿತು. ಮುತ್ತಾನಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಮಂಡಲ ಪೂಜೆ ಪ್ರಯುಕ್ತ ದೇವಾಲಯದಲ್ಲಿ ಶಾಂತಿ ಹೋಮ ಆಯೋಜಿಸಲಾಗಿತ್ತು. ದೇವಿಗೆ ಅಭಿಷೇಕ ಕಲಶ ಅಭಿಷೇಕ ವಿಶೇಷ ಅಲಂಕಾರ ಮಾಡಲಾಗಿತ್ತು. ಸುತ್ತಮುತ್ತಲ ಗ್ರಾಮಗಳ ಮಹಿಳೆಯರು ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ ಮಾಡುವ ಮೂಲಕ ತಮ್ಮ ಭಕ್ತಿಯನ್ನು ಸಮರ್ಪಿಸಿದರು.</p>.<p>ಧಾರ್ಮಿಕ ಕಾರ್ಯಕ್ರಮಗಳಿಂದ ಗ್ರಾಮಗಳಲ್ಲಿ ಒಗ್ಗಟ್ಟು ಮೂಡುತ್ತದೆ. ಗ್ರಾಮದ ಮಹಿಳೆಯರು ಸಾಮರಸ್ಯದಿಂದ ಜೀವನ ನಡೆಸಲು ಧಾರ್ಮಿಕ ಕಾರ್ಯಕ್ರಮಗಳು ಉಪಯುಕ್ತವಾಗಿದೆ. ಮಹಿಳೆಯರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದರಿಂದ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ದೇವಾಲಯದ ರಾಧಾ ನಾಗರಾಜ ರೆಡ್ಡಿ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಜಾತ, ದೇವಾಲಯದ ಚಿನ್ನಪ್ಪ, ನಾಗರತ್ನಮ್ಮ, ಕಾಂತರಾಜು, ರೇಣುಕಾ, ಶಿವರಾಂ, ಅಣ್ಣಯ್ಯ, ಯಲ್ಲಮ್ಮ, ತಬಲಾ ಶ್ರೀನಿವಾಸ್, ಬಸಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>