<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಚನಾಯಕನಹಳ್ಳಿಯಲ್ಲಿ ಮಂಗಳವಾರ ಹಗಲಿನಲ್ಲಿಯೇ ಕಿರಾಣಿ ಅಂಗಡಿ<strong> </strong>ಮಾಲೀಕನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.</p>.<p>ಮಾದೇಶ್ ಪ್ರಾವಿಜನ್ ಸ್ಟೋರ್ ಮಾಲೀಕ ಮಾದೇಶ್ (40) ಮನೆಗೆ ಏಕಾಏಕಿ ಏರ್ಗನ್, ಚಾಕು ಹಾಗೂ ಮಾರಕಾಸ್ತ್ರಗಳೊಂದಿಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ ಎಂದು ಗೊತ್ತಾಗಿದೆ.</p>.<p>ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಬಾರಂದೂರು ನಿವಾಸಿಯಾಗಿದ್ದ ಮಾದೇಶ ಪತ್ನಿ, ಮಗ ಮತ್ತು ಭಾಮೈದನೊಂದಿಗೆ ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಕಾಲಿಗೆ ಗಾಯವಾದ ಕಾರಣ ಮನೆಯಲ್ಲಿದ್ದರು. ಮನೆಯಲ್ಲಿ ₹2 ಲಕ್ಷ ನಗದು ಇತ್ತು ಎಂದು ತಿಳಿದು ಬಂದಿದೆ.</p>.<p>ಕೊಲೆಗಾರರನ್ನು ತಡೆಯಲು ಸ್ಥಳೀಯರು ಮುಂದಾದಾಗ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಬ್ಯಾಗ್, ಹೆಲ್ಮೆಟ್ ಸಿಕ್ಕಿದ್ದು ಏರ್ ಪಿಸ್ತೂಲ್, ಮೆಟಲ್ ಡಿಟೆಕ್ಟರ್, ಟಾರ್ಚ್ ಪತ್ತೆಯಾಗಿವೆ. </p>.<p>ಸ್ಥಳಕ್ಕೆ ಎಲೆಕ್ಟ್ರಾನಿಕ್ಸಿಟಿ ಡಿಸಿಪಿ ನಾರಾಯಣ್, ಎಸಿಪಿ ಸತೀಶ್ ಮತ್ತು ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿದ್ದರು. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಚನಾಯಕನಹಳ್ಳಿಯಲ್ಲಿ ಮಂಗಳವಾರ ಹಗಲಿನಲ್ಲಿಯೇ ಕಿರಾಣಿ ಅಂಗಡಿ<strong> </strong>ಮಾಲೀಕನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.</p>.<p>ಮಾದೇಶ್ ಪ್ರಾವಿಜನ್ ಸ್ಟೋರ್ ಮಾಲೀಕ ಮಾದೇಶ್ (40) ಮನೆಗೆ ಏಕಾಏಕಿ ಏರ್ಗನ್, ಚಾಕು ಹಾಗೂ ಮಾರಕಾಸ್ತ್ರಗಳೊಂದಿಗೆ ನುಗ್ಗಿದ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಹೆಲ್ಮೆಟ್ ಧರಿಸಿದ್ದರು. ಈ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇರಲಿಲ್ಲ ಎಂದು ಗೊತ್ತಾಗಿದೆ.</p>.<p>ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಬಾರಂದೂರು ನಿವಾಸಿಯಾಗಿದ್ದ ಮಾದೇಶ ಪತ್ನಿ, ಮಗ ಮತ್ತು ಭಾಮೈದನೊಂದಿಗೆ ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಕಾಲಿಗೆ ಗಾಯವಾದ ಕಾರಣ ಮನೆಯಲ್ಲಿದ್ದರು. ಮನೆಯಲ್ಲಿ ₹2 ಲಕ್ಷ ನಗದು ಇತ್ತು ಎಂದು ತಿಳಿದು ಬಂದಿದೆ.</p>.<p>ಕೊಲೆಗಾರರನ್ನು ತಡೆಯಲು ಸ್ಥಳೀಯರು ಮುಂದಾದಾಗ ಅವರ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಬ್ಯಾಗ್, ಹೆಲ್ಮೆಟ್ ಸಿಕ್ಕಿದ್ದು ಏರ್ ಪಿಸ್ತೂಲ್, ಮೆಟಲ್ ಡಿಟೆಕ್ಟರ್, ಟಾರ್ಚ್ ಪತ್ತೆಯಾಗಿವೆ. </p>.<p>ಸ್ಥಳಕ್ಕೆ ಎಲೆಕ್ಟ್ರಾನಿಕ್ಸಿಟಿ ಡಿಸಿಪಿ ನಾರಾಯಣ್, ಎಸಿಪಿ ಸತೀಶ್ ಮತ್ತು ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್ ಭೇಟಿ ನೀಡಿದ್ದರು. ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>