<p><strong>ಆನೇಕಲ್:</strong> ಪಟ್ಟಣದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ನಗರ ಘಟಕದ ವತಿಯಿಂದ ಬುಧವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ರಸ್ತೆ ಗುಂಡಿ ಹೆಚ್ಚಾಗುತ್ತಿದೆ. ಆದರೆ, ಸ್ಥಳೀಯ ಶಾಸಕರು ಈ ಬಗ್ಗೆ ಚಿಂತೆ ನಡೆಸದೆ ಸಚಿವ ಸ್ಥಾನ ಪಡೆಯಲು ಹರಸಾಹಸಪಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರದ ಇಲಾಖೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪೋಸ್ಟಿಂಗ್ ಪಡೆಯಲು ₹1-2ಕೋಟಿ ನೀಡಬೇಕಾಗಿದೆ. ಇಂತಹ ಅಧಿಕಾರಿಗಳಿಂದ ಯಾವ ಕೆಲಸ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.</p>.<p>ನೆಲಮಂಗಲದ ಶಾಸಕ ಶ್ರೀನಿವಾಸ್ ಮೊದಲನೇ ದರ್ಜೆ ಗುತ್ತಿಗೆದಾರರಾಗಿದ್ದಾರೆ. ತಾಲ್ಲೂಕಿನ ಲಕ್ಷ್ಮೀಪುರ-ಮುತ್ತೂರು ರಸ್ತೆ ಕಾಮಗಾರಿಯೊಂದರಲ್ಲಿ ಕಾಮಗಾರಿಯನ್ನೇ ನಡೆಸದೆ ಬಿಲ್ ಮಾಡಿಕೊಂಡಿರುವ ಬಗ್ಗೆ ದಾಖಲೆಗಳಿವೆ. ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ತಾಲ್ಲೂಕಿನಲ್ಲಿ ಅಪಘಾತಗಳಿಂದಾಗಿ ಅಮಾಯಕರು ಸಾಯುತ್ತಿದ್ದಾರೆ. ಹಾಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದರು.</p>.<p>ತಾಲ್ಲೂಕಿನ ಬಹುತೇಕ ಎಲ್ಲ ರಸ್ತೆಗಳು ದುರಸ್ತಿಗೊಂಡಿವೆ. 13 ವರ್ಷದಿಂದ ಶಾಸಕರಾಗಿರುವವರು ಯಾವ ಅಭಿವೃದ್ಧಿ ಮಾಡಿದ್ದಾರೆ ಎಂಬುದುನ್ನು ಜನರ ಮುಂದಿಡಬೇಕು. ಕಳಪೆ ಕಾಮಗಾರಿ ವಿರುದ್ಧ ಧ್ವನಿ ಎತ್ತಬೇಕು. ಚುನಾವಣೆಯಲ್ಲಿ ಭರವಸೆ ನೀಡುವುದೇ ರಾಜಕೀಯವಲ್ಲ. ಅಭಿವೃದ್ಧಿ ಮೂಲಕ ಮತದಾರರ ಋಣ ತೀರಿಸಬೇಕು ಎಂದರು.</p>.<p>ಬಿಜೆಪಿ ಕಾರ್ಯದರ್ಶಿ ಪುಣ್ಯಕೋಟಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನ ರಸ್ತೆಗಳು ಹದಗೆಟ್ಟಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಮುಖಂಡರಾದ ಬಿ.ನಾಗರಾಜು, ನರಸಿಂಹರೆಡ್ಡಿ, ತಿಮ್ಮರಾಜು, ಸುರೇಶ್, ಭರತ್, ಮೂರ್ತಿ, ಶ್ರೀನಿವಾಸ್, ಮುರಳಿ, ಮಧು, ಹರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-15-1549473815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್:</strong> ಪಟ್ಟಣದ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು ಮತ್ತು ರಸ್ತೆ ಗುಂಡಿಗಳಿಂದ ಸಾರ್ವಜನಿಕರಿಗೆ ಮುಕ್ತಿ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ನಗರ ಘಟಕದ ವತಿಯಿಂದ ಬುಧವಾರ ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.</p>.<p>ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹುಲ್ಲಹಳ್ಳಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನಲ್ಲಿ ರಸ್ತೆ ಗುಂಡಿ ಹೆಚ್ಚಾಗುತ್ತಿದೆ. ಆದರೆ, ಸ್ಥಳೀಯ ಶಾಸಕರು ಈ ಬಗ್ಗೆ ಚಿಂತೆ ನಡೆಸದೆ ಸಚಿವ ಸ್ಥಾನ ಪಡೆಯಲು ಹರಸಾಹಸಪಡುತ್ತಿದ್ದಾರೆ. ಅಭಿವೃದ್ಧಿ ಬಗ್ಗೆ ಹೆಚ್ಚು ಆದ್ಯತೆ ನೀಡಬೇಕು. ಲೋಕೋಪಯೋಗಿ ಇಲಾಖೆ ಭ್ರಷ್ಟಾಚಾರದ ಇಲಾಖೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆಯಲ್ಲಿ ಪೋಸ್ಟಿಂಗ್ ಪಡೆಯಲು ₹1-2ಕೋಟಿ ನೀಡಬೇಕಾಗಿದೆ. ಇಂತಹ ಅಧಿಕಾರಿಗಳಿಂದ ಯಾವ ಕೆಲಸ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದರು.</p>.<p>ನೆಲಮಂಗಲದ ಶಾಸಕ ಶ್ರೀನಿವಾಸ್ ಮೊದಲನೇ ದರ್ಜೆ ಗುತ್ತಿಗೆದಾರರಾಗಿದ್ದಾರೆ. ತಾಲ್ಲೂಕಿನ ಲಕ್ಷ್ಮೀಪುರ-ಮುತ್ತೂರು ರಸ್ತೆ ಕಾಮಗಾರಿಯೊಂದರಲ್ಲಿ ಕಾಮಗಾರಿಯನ್ನೇ ನಡೆಸದೆ ಬಿಲ್ ಮಾಡಿಕೊಂಡಿರುವ ಬಗ್ಗೆ ದಾಖಲೆಗಳಿವೆ. ಶೀಘ್ರದಲ್ಲಿ ಬಿಡುಗಡೆ ಮಾಡಲಾಗುವುದು. ತಾಲ್ಲೂಕಿನಲ್ಲಿ ಅಪಘಾತಗಳಿಂದಾಗಿ ಅಮಾಯಕರು ಸಾಯುತ್ತಿದ್ದಾರೆ. ಹಾಗಾಗಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಈ ಬಗ್ಗೆ ಕ್ರಮವಹಿಸಬೇಕು ಎಂದರು.</p>.<p>ತಾಲ್ಲೂಕಿನ ಬಹುತೇಕ ಎಲ್ಲ ರಸ್ತೆಗಳು ದುರಸ್ತಿಗೊಂಡಿವೆ. 13 ವರ್ಷದಿಂದ ಶಾಸಕರಾಗಿರುವವರು ಯಾವ ಅಭಿವೃದ್ಧಿ ಮಾಡಿದ್ದಾರೆ ಎಂಬುದುನ್ನು ಜನರ ಮುಂದಿಡಬೇಕು. ಕಳಪೆ ಕಾಮಗಾರಿ ವಿರುದ್ಧ ಧ್ವನಿ ಎತ್ತಬೇಕು. ಚುನಾವಣೆಯಲ್ಲಿ ಭರವಸೆ ನೀಡುವುದೇ ರಾಜಕೀಯವಲ್ಲ. ಅಭಿವೃದ್ಧಿ ಮೂಲಕ ಮತದಾರರ ಋಣ ತೀರಿಸಬೇಕು ಎಂದರು.</p>.<p>ಬಿಜೆಪಿ ಕಾರ್ಯದರ್ಶಿ ಪುಣ್ಯಕೋಟಿ ಶ್ರೀನಿವಾಸ್ ಮಾತನಾಡಿ, ತಾಲ್ಲೂಕಿನ ರಸ್ತೆಗಳು ಹದಗೆಟ್ಟಿವೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಲೆಕೆಡಿಸಿಕೊಳ್ಳದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಮುಖಂಡರಾದ ಬಿ.ನಾಗರಾಜು, ನರಸಿಂಹರೆಡ್ಡಿ, ತಿಮ್ಮರಾಜು, ಸುರೇಶ್, ಭರತ್, ಮೂರ್ತಿ, ಶ್ರೀನಿವಾಸ್, ಮುರಳಿ, ಮಧು, ಹರೀಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260604-15-1549473815</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>