<p><strong>ಆನೇಕಲ್: </strong>ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಹೊಸಹಳ್ಳಿಯಲ್ಲಿ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಥಾಟ್ಸ್ ವತಿಯಿಂದ ‘ಸಾಮಾಜಿಕ ಪರಿವರ್ತನೆಗೆ ಹಳ್ಳಿಗೆ ಪಯಣ, ಮಾತು–ಚರ್ಚೆ ಮತ್ತು ಹಾಡು, ಸಂವಾದ’ ಕಾರ್ಯಕ್ರಮ ನಡೆಯಿತು.</p>.<p>ಸಂವಾದದಲ್ಲಿ ಮಹಿಳಾ ಸಬಲೀಕರಣ, ಜಾತಿ, ಅಜ್ಞಾನ, ದ್ವೇಷ ಕೋಪದಿಂದಾಗುವ ದುಷ್ಪರಿಣಾಮಗಳು ಮತ್ತು ಇದರಿಂದ ಉಂಟಾಗುವ ಸಾಮಾಜಿಕ ಅಪಾಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮಹಿಳೆಯರ ಮನಸ್ಸುಗಳನ್ನು ವೈಜ್ಞಾನಿಕ ಚಿಂತನೆಗಳತ್ತ ತರಬೇಕೆಂಬುದು ಸಂವಾದದ ಉದ್ದೇಶವಾಗಿದೆ ಎಂದು ವಕೀಲ ಆನಂದ ಚಕ್ರವರ್ತಿ ತಿಳಿಸಿದರು.</p>.<p>ಚಿಂತಕ ಯೋಗೇಶ್ ಮಾಸ್ಟರ್ ಮಾತನಾಡಿ ಮಹಿಳಾ ಸಬಲೀಕರಣ ಇತ್ತೀಚಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಥಾಟ್ಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಸಂವಾದ ಕಾರ್ಯಕ್ರಮದ ಮೂಲಕ ಮಹಿಳಾ ಸಬಲೀಕರಣ ನಡೆಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಮಹಿಳಾ ಸಬಲೀಕರಣದ ಮೂಲ ಅರ್ಥ ಸ್ವಯಂಪ್ರಜ್ಞೆ, ಸ್ವಯಂ ಜಾಗೃತಿ ಮತ್ತು ಸ್ವಾವಲಂಬನೆ ಸಾಧಿಸುವುದಾಗಿದೆ. ಹಾಗಾಗಿ ಮಹಿಳೆಯರು ಕೌಶಲ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ರಾವಣ, ಸುರೇಶ್, ಭೂತ ನಂದಕುಮಾರ್, ರಾಜೇಶ್ ಮಂಜು, ಶರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಹೆನ್ನಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಚ್.ಹೊಸಹಳ್ಳಿಯಲ್ಲಿ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಥಾಟ್ಸ್ ವತಿಯಿಂದ ‘ಸಾಮಾಜಿಕ ಪರಿವರ್ತನೆಗೆ ಹಳ್ಳಿಗೆ ಪಯಣ, ಮಾತು–ಚರ್ಚೆ ಮತ್ತು ಹಾಡು, ಸಂವಾದ’ ಕಾರ್ಯಕ್ರಮ ನಡೆಯಿತು.</p>.<p>ಸಂವಾದದಲ್ಲಿ ಮಹಿಳಾ ಸಬಲೀಕರಣ, ಜಾತಿ, ಅಜ್ಞಾನ, ದ್ವೇಷ ಕೋಪದಿಂದಾಗುವ ದುಷ್ಪರಿಣಾಮಗಳು ಮತ್ತು ಇದರಿಂದ ಉಂಟಾಗುವ ಸಾಮಾಜಿಕ ಅಪಾಯಗಳ ಬಗ್ಗೆ ಚರ್ಚೆ ನಡೆಸಲಾಯಿತು. ಮಹಿಳೆಯರ ಮನಸ್ಸುಗಳನ್ನು ವೈಜ್ಞಾನಿಕ ಚಿಂತನೆಗಳತ್ತ ತರಬೇಕೆಂಬುದು ಸಂವಾದದ ಉದ್ದೇಶವಾಗಿದೆ ಎಂದು ವಕೀಲ ಆನಂದ ಚಕ್ರವರ್ತಿ ತಿಳಿಸಿದರು.</p>.<p>ಚಿಂತಕ ಯೋಗೇಶ್ ಮಾಸ್ಟರ್ ಮಾತನಾಡಿ ಮಹಿಳಾ ಸಬಲೀಕರಣ ಇತ್ತೀಚಿನ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ಸ್ಕೂಲ್ ಆಫ್ ಥಾಟ್ಸ್ ವತಿಯಿಂದ ಗ್ರಾಮ ಗ್ರಾಮಗಳಲ್ಲಿ ಸಂವಾದ ಕಾರ್ಯಕ್ರಮದ ಮೂಲಕ ಮಹಿಳಾ ಸಬಲೀಕರಣ ನಡೆಸುತ್ತಿರುವುದು ಶ್ಲಾಘನೀಯ ಎಂದರು.</p>.<p>ಮಹಿಳಾ ಸಬಲೀಕರಣದ ಮೂಲ ಅರ್ಥ ಸ್ವಯಂಪ್ರಜ್ಞೆ, ಸ್ವಯಂ ಜಾಗೃತಿ ಮತ್ತು ಸ್ವಾವಲಂಬನೆ ಸಾಧಿಸುವುದಾಗಿದೆ. ಹಾಗಾಗಿ ಮಹಿಳೆಯರು ಕೌಶಲ ಅಳವಡಿಸಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.</p>.<p>ರಾವಣ, ಸುರೇಶ್, ಭೂತ ನಂದಕುಮಾರ್, ರಾಜೇಶ್ ಮಂಜು, ಶರತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>