<p><strong>ಆನೇಕಲ್: </strong>ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲು ತಾಲ್ಲೂಕಿನಲ್ಲಿ ಜನತೆ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಳ್ಳಲು ಬುಧವಾರ ಪಟ್ಟಣದಲ್ಲಿ ಜನರು ಜಮಾಯಿಸಿದ್ದರಿಂದ ರಸ್ತೆ ದಟ್ಟಣೆ ಉಂಟಾಗಿತ್ತು. ತಿಲಕ್ ವತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು.</p>.<p>ಎಲ್ಲಾ ಹಬ್ಬಗಳು ಜನರ ಹಬ್ಬಗಳಾದರೇ ಸಂಕ್ರಾಂತಿ ರಾಸುಗಳ ಹಬ್ಬ. ಹಾಗಾಗಿ ರೈತರು ರಾಸುಗಳನ್ನು ಸಿಂಗರಿಸಲು ಅವಶ್ಯಕ ಸಾಮಗ್ರಿಗಳಾದ ಹೊಸ ಹಗ್ಗ, ಮೂಗುದಾರ, ಕತ್ತಿನ ಕಣ್ಣಿ, ಕಪ್ಪು ದೃಷ್ಠಿದಾರ, ಗೆಜ್ಜೆ , ಗಂಟೆ, ಬಲೂನ್, ಬಣ್ಣಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕೊಳ್ಳುವುದರಲ್ಲಿ ನಿರತರಾಗಿದ್ದರು.</p>.<p>ಗ್ರಾಮೀಣ ಭಾಗದ ರೈತರು ಹಬ್ಬದಲ್ಲಿ ರಾಸುಗಳನ್ನು ಸಿಂಗರಿಸಿ ತಮ್ಮ ಸಂಭ್ರಮವನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಎಳ್ಳು ಬೆಲ್ಲವನ್ನು ಸಿದ್ಧಪಡಿಸುವ ಸಲುವಾಗಿ ಅವಶ್ಯಕ ಸಾಮಗ್ರಿ ಖರೀದಿಗೆ ಜನರು ಮುಗಿಬಿದ್ದಿದ್ದರು.</p>.<p>ಹಬ್ಬದಲ್ಲಿ ಕಡಲೆಕಾಯಿ, ಅವರೇಕಾಯಿ, ಗೆಣಸು ಬೇಯಿಸಿ ತಿನ್ನುವುದು ವಾಡಿಕೆಯಾಗಿದೆ. ಅವರೇಕಾಯಿ ಕೆಜಿಗೆ ₹100–120 ಮಾರಾಟವಾಗುತ್ತಿತ್ತು. ಕಡಲೆಕಾಯಿ ಕೆಜಿಗೆ ₹140–150, ಗೆಣಸು ₹80–100, ಕಬ್ಬು ಒಂದು ಜಲ್ಲೆ ₹80ಕ್ಕೆ ಮಾರಾಟವಾಗುತ್ತಿತ್ತು. ಹೂವುಗಳ ಬೆಲೆಯೂ ಏರಿಕೆಯಾಗಿತ್ತು. </p>.<p>ರಾಸುಗಳ ಹಬ್ಬ ಹಾಗೂ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಬೆಲೆ ಏರಿಕೆಯ ನಡುವೆಯೂ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಮುಖರಾಣಿ, ಕಂಬಳಿ ದಾರ, ಮೂಗುಜಿಮ್ರ ಸೇರಿದಂತೆ ರಾಸುಗಳ ಅಲಂಕಾರಕ್ಕೆ ವಿವಿಧ ವಸ್ತುಗಳನ್ನು ಖರೀದಿಲಾಗಿದೆ ಎಂದು ರೈತರ ವಣಕನಹಳ್ಳಿಯ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಸುಗ್ಗಿ ಹಬ್ಬ ಸಂಕ್ರಾಂತಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಲು ತಾಲ್ಲೂಕಿನಲ್ಲಿ ಜನತೆ ಸಿದ್ಧತೆ ಮಾಡಿಕೊಂಡಿದ್ದು, ಹಬ್ಬಕ್ಕೆ ಬೇಕಾಗುವ ಸಾಮಗ್ರಿಗಳನ್ನು ಕೊಳ್ಳಲು ಬುಧವಾರ ಪಟ್ಟಣದಲ್ಲಿ ಜನರು ಜಮಾಯಿಸಿದ್ದರಿಂದ ರಸ್ತೆ ದಟ್ಟಣೆ ಉಂಟಾಗಿತ್ತು. ತಿಲಕ್ ವತ್ತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಜಮಾಯಿಸಿದ್ದರು.</p>.<p>ಎಲ್ಲಾ ಹಬ್ಬಗಳು ಜನರ ಹಬ್ಬಗಳಾದರೇ ಸಂಕ್ರಾಂತಿ ರಾಸುಗಳ ಹಬ್ಬ. ಹಾಗಾಗಿ ರೈತರು ರಾಸುಗಳನ್ನು ಸಿಂಗರಿಸಲು ಅವಶ್ಯಕ ಸಾಮಗ್ರಿಗಳಾದ ಹೊಸ ಹಗ್ಗ, ಮೂಗುದಾರ, ಕತ್ತಿನ ಕಣ್ಣಿ, ಕಪ್ಪು ದೃಷ್ಠಿದಾರ, ಗೆಜ್ಜೆ , ಗಂಟೆ, ಬಲೂನ್, ಬಣ್ಣಗಳು ಸೇರಿದಂತೆ ವಿವಿಧ ವಸ್ತುಗಳನ್ನು ಕೊಳ್ಳುವುದರಲ್ಲಿ ನಿರತರಾಗಿದ್ದರು.</p>.<p>ಗ್ರಾಮೀಣ ಭಾಗದ ರೈತರು ಹಬ್ಬದಲ್ಲಿ ರಾಸುಗಳನ್ನು ಸಿಂಗರಿಸಿ ತಮ್ಮ ಸಂಭ್ರಮವನ್ನು ಹಂಚಿಕೊಳ್ಳುವುದು ಸಾಮಾನ್ಯವಾಗಿದೆ. ಎಳ್ಳು ಬೆಲ್ಲವನ್ನು ಸಿದ್ಧಪಡಿಸುವ ಸಲುವಾಗಿ ಅವಶ್ಯಕ ಸಾಮಗ್ರಿ ಖರೀದಿಗೆ ಜನರು ಮುಗಿಬಿದ್ದಿದ್ದರು.</p>.<p>ಹಬ್ಬದಲ್ಲಿ ಕಡಲೆಕಾಯಿ, ಅವರೇಕಾಯಿ, ಗೆಣಸು ಬೇಯಿಸಿ ತಿನ್ನುವುದು ವಾಡಿಕೆಯಾಗಿದೆ. ಅವರೇಕಾಯಿ ಕೆಜಿಗೆ ₹100–120 ಮಾರಾಟವಾಗುತ್ತಿತ್ತು. ಕಡಲೆಕಾಯಿ ಕೆಜಿಗೆ ₹140–150, ಗೆಣಸು ₹80–100, ಕಬ್ಬು ಒಂದು ಜಲ್ಲೆ ₹80ಕ್ಕೆ ಮಾರಾಟವಾಗುತ್ತಿತ್ತು. ಹೂವುಗಳ ಬೆಲೆಯೂ ಏರಿಕೆಯಾಗಿತ್ತು. </p>.<p>ರಾಸುಗಳ ಹಬ್ಬ ಹಾಗೂ ವರ್ಷದ ಮೊದಲ ಹಬ್ಬ ಸಂಕ್ರಾಂತಿಯನ್ನು ಬೆಲೆ ಏರಿಕೆಯ ನಡುವೆಯೂ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ನಡೆಸಲಾಗಿದೆ. ಮುಖರಾಣಿ, ಕಂಬಳಿ ದಾರ, ಮೂಗುಜಿಮ್ರ ಸೇರಿದಂತೆ ರಾಸುಗಳ ಅಲಂಕಾರಕ್ಕೆ ವಿವಿಧ ವಸ್ತುಗಳನ್ನು ಖರೀದಿಲಾಗಿದೆ ಎಂದು ರೈತರ ವಣಕನಹಳ್ಳಿಯ ಬಸವರಾಜು ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>