<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಮಂಗಲದ ವಸತಿ ಸಮುಚ್ಚಯದಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ಬಂಧಿತರಿಂದ ₹1.14 ಕೋಟಿ ನಗದು ಹಾಗೂ 16 ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಹೆಬ್ಬಗೋಡಿ ಪೊಲೀಸರು ಬುಧವಾರ ತಿಳಿಸಿದ್ದಾರೆ. </p>.<p>ಸುಂಕದಕಟ್ಟೆ ನಿವಾಸಿ ಶ್ರೀನಿವಾಸ್ ಮೂರ್ತಿ (39) ಮತ್ತು ದಾಸನಪುರ ಚಿಕ್ಕ ಗೊಲ್ಲರಹಟ್ಟಿಯ ಅರುಣ್ ಕುಮಾರ್ (39) ಬಂಧಿತರು. </p>.<p>ನವೆಂಬರ್ 8ರಂದು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಮಂಗಲ ಗ್ರಾಮದ ಎಲಿಗನ್ಸ್ ಅಪಾರ್ಟ್ಮೆಂಟ್ನ ಸುನೀಲ್ ಅವರು ತಮ್ಮ ಮನೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಕೋಲಾರಕ್ಕೆ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ್ದ ಕಳ್ಳರು ನಗದು ಮತ್ತು ಚಿನ್ನ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ನವೆಂಬರ್ 9ರಂದು ಪ್ರಕರಣ ದಾಖಲಾಗಿತ್ತು. </p>.<p>ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್, ಎಸಿಪಿ ಸತೀಶ್ ಅವರ ಮಾರ್ಗದರ್ಶನದಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಸೋಮಶೇಖರ್, ಸಬ್ ಇನ್ಸ್ಪೆಕ್ಟರ್ ಅಯ್ಯಪ್ಪ, ಸಿಬ್ಬಂದಿ ಮಹಾಂತೇಶ್ ಗೌಡ, ಸಂತೋಷ್, ಪ್ರವೀಣ್, ವೇಣುಗೋಪಾಲ್, ಅಶೋಕ್, ನಾಗೇಶ್, ಆನಂದ್, ಮುರುಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಮಂಗಲದ ವಸತಿ ಸಮುಚ್ಚಯದಲ್ಲಿ ಇತ್ತೀಚೆಗೆ ನಡೆದಿದ್ದ ಕಳ್ಳತನ ಪ್ರಕರಣ ಭೇದಿಸಿರುವ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. </p>.<p>ಬಂಧಿತರಿಂದ ₹1.14 ಕೋಟಿ ನಗದು ಹಾಗೂ 16 ಗ್ರಾಂ ಚಿನ್ನದ ಸರ ವಶಕ್ಕೆ ಪಡೆಯಲಾಗಿದೆ ಎಂದು ಹೆಬ್ಬಗೋಡಿ ಪೊಲೀಸರು ಬುಧವಾರ ತಿಳಿಸಿದ್ದಾರೆ. </p>.<p>ಸುಂಕದಕಟ್ಟೆ ನಿವಾಸಿ ಶ್ರೀನಿವಾಸ್ ಮೂರ್ತಿ (39) ಮತ್ತು ದಾಸನಪುರ ಚಿಕ್ಕ ಗೊಲ್ಲರಹಟ್ಟಿಯ ಅರುಣ್ ಕುಮಾರ್ (39) ಬಂಧಿತರು. </p>.<p>ನವೆಂಬರ್ 8ರಂದು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಹುಲಿಮಂಗಲ ಗ್ರಾಮದ ಎಲಿಗನ್ಸ್ ಅಪಾರ್ಟ್ಮೆಂಟ್ನ ಸುನೀಲ್ ಅವರು ತಮ್ಮ ಮನೆ ಬೀಗ ಹಾಕಿಕೊಂಡು ಕುಟುಂಬ ಸಮೇತರಾಗಿ ಕೋಲಾರಕ್ಕೆ ಹೋಗಿದ್ದರು. ಈ ವೇಳೆ ಮನೆಗೆ ನುಗ್ಗಿದ್ದ ಕಳ್ಳರು ನಗದು ಮತ್ತು ಚಿನ್ನ ದೋಚಿ ಪರಾರಿಯಾಗಿದ್ದರು. ಈ ಸಂಬಂಧ ನವೆಂಬರ್ 9ರಂದು ಪ್ರಕರಣ ದಾಖಲಾಗಿತ್ತು. </p>.<p>ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್, ಎಸಿಪಿ ಸತೀಶ್ ಅವರ ಮಾರ್ಗದರ್ಶನದಲ್ಲಿ ಹೆಬ್ಬಗೋಡಿ ಪೊಲೀಸ್ ಇನ್ಸ್ಪೆಕ್ಟರ್ ಜಿ.ಸೋಮಶೇಖರ್, ಸಬ್ ಇನ್ಸ್ಪೆಕ್ಟರ್ ಅಯ್ಯಪ್ಪ, ಸಿಬ್ಬಂದಿ ಮಹಾಂತೇಶ್ ಗೌಡ, ಸಂತೋಷ್, ಪ್ರವೀಣ್, ವೇಣುಗೋಪಾಲ್, ಅಶೋಕ್, ನಾಗೇಶ್, ಆನಂದ್, ಮುರುಳಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>