<p><strong>ಆನೇಕಲ್: </strong>ಜಲ ಜೀವನ್ ಮಿಷನ್(ಜೆಜೆಎಂ) ಕಾಮಗಾರಿಯಿಂದಾಗಿ ಗ್ರಾಮಗಳ ರಸ್ತೆಗಳು ಅಧ್ವಾನಗೊಂಡಿದೆ. ಅಗೆದ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಬೇಕು ಹಾಗೂ ಕಾಮಗಾರಿಗೆ ವೇಗ ನೀಡಬೇಕೆಂದು ವಿವಿಧ ಗ್ರಾಮಸ್ಥರು ಆಗ್ರಹಿಸಿದರು.</p>.<p> ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಹುಸ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಅಹವಾಲು ಸಲ್ಲಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಆದರೆ ಕಾಮಗಾರಿ ಬಳಿಕ ಮುಚ್ಚಿಲ್ಲ. ಇದರಿಂದ ರಸ್ತೆಯಲ್ಲಿ ಸಂಚರಿಸಲು ಆಗುತ್ತಿಲ್ಲ. ನಿರಂತರ ಮಳೆ ಬರುತ್ತಿರುವುದರಿಂದ ಗುಂಡಿ ತೆಗೆದ ಜಾಗದಲ್ಲಿ ಕೆಸರು ಗದ್ದೆಯಂತೆ ಆಗಿದೆ ಎಂದು ಅವಲತ್ತು ಕೊಂಡರು.</p>.<p>ಚಿಂತಲ ಮಡಿವಾಳ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮಸಭೆಯಲ್ಲಿ ಸಾರ್ವಜನಿಕರು ಹೇಳಿರುವ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು. ಜಲಜೀವನ್ ಮಿಷನ್ ಅಡಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಮತ್ತು ಕಾಮಗಾರಿಗೆ ವೇಗ ನೀಡುವ ಸಲುವಾಗಿ ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರತ್ನಮ್ಮ ರಮೇಶ್ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಶ್ರೀನಾಥ್, ಯಲ್ಲಪ್ಪ, ಲಕ್ಷ್ಮಿ, ಮಂಜುಳಾ, ರಾಧಾ, ಗೀತಾ, ಭಾಗ್ಯ, ಚಿನ್ನಸ್ವಾಮಿ, ಮುನಿರಾಜು, ಬಾಬುರೆಡ್ಡಿ, ವೀರಭದ್ರಪ್ಪ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನುಸೂಯ, ಕಾರ್ಯದರ್ಶಿ ಅನಿತಾ ಇದ್ದರು.</p>.<div><blockquote>ಹುಸ್ಕೂರು ಗ್ರಾಮ ಪಂಚಾಯತಿಯು ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿದೆ. ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ನಗರದಲ್ಲಿ ದೊರೆಯುವ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡಲು ಆದ್ಯತೆ ನೀಡಲಾಗುತ್ತಿದೆ. </blockquote><span class="attribution">ಮುನಿರತ್ನಮ್ಮ ರಮೇಶ ಅಧ್ಯಕ್ಷ ಗ್ರಾಮ ಪಂಚಾಯಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆನೇಕಲ್: </strong>ಜಲ ಜೀವನ್ ಮಿಷನ್(ಜೆಜೆಎಂ) ಕಾಮಗಾರಿಯಿಂದಾಗಿ ಗ್ರಾಮಗಳ ರಸ್ತೆಗಳು ಅಧ್ವಾನಗೊಂಡಿದೆ. ಅಗೆದ ಗುಂಡಿಗಳನ್ನು ಮುಚ್ಚಿಸಿ ಸುಗಮ ಸಂಚಾರಕ್ಕೆ ಅನವು ಮಾಡಿಕೊಡಬೇಕು ಹಾಗೂ ಕಾಮಗಾರಿಗೆ ವೇಗ ನೀಡಬೇಕೆಂದು ವಿವಿಧ ಗ್ರಾಮಸ್ಥರು ಆಗ್ರಹಿಸಿದರು.</p>.<p> ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶುಕ್ರವಾರ ನಡೆದ ಗ್ರಾಮಸಭೆಯಲ್ಲಿ ಹುಸ್ಕೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳ ಗ್ರಾಮಸ್ಥರು ಅಹವಾಲು ಸಲ್ಲಿಸಿದರು.</p>.<p>ಜಲಜೀವನ್ ಮಿಷನ್ ಯೋಜನೆಯಡಿ ಪೈಪ್ ಅಳವಡಿಸಲು ರಸ್ತೆಯನ್ನು ಅಗೆಯಲಾಗಿತ್ತು. ಆದರೆ ಕಾಮಗಾರಿ ಬಳಿಕ ಮುಚ್ಚಿಲ್ಲ. ಇದರಿಂದ ರಸ್ತೆಯಲ್ಲಿ ಸಂಚರಿಸಲು ಆಗುತ್ತಿಲ್ಲ. ನಿರಂತರ ಮಳೆ ಬರುತ್ತಿರುವುದರಿಂದ ಗುಂಡಿ ತೆಗೆದ ಜಾಗದಲ್ಲಿ ಕೆಸರು ಗದ್ದೆಯಂತೆ ಆಗಿದೆ ಎಂದು ಅವಲತ್ತು ಕೊಂಡರು.</p>.<p>ಚಿಂತಲ ಮಡಿವಾಳ ಗ್ರಾಮದ ರಸ್ತೆ ಅಭಿವೃದ್ಧಿಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಗ್ರಾಮಸಭೆಯಲ್ಲಿ ಸಾರ್ವಜನಿಕರು ಹೇಳಿರುವ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಲಾಗುವುದು. ಜಲಜೀವನ್ ಮಿಷನ್ ಅಡಿಯಲ್ಲಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಮತ್ತು ಕಾಮಗಾರಿಗೆ ವೇಗ ನೀಡುವ ಸಲುವಾಗಿ ಜಿಲ್ಲಾ ಪಂಚಾಯಿತಿಗೆ ಪತ್ರ ಬರೆಯಲಾಗುವುದು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿರತ್ನಮ್ಮ ರಮೇಶ್ ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಶ್ರೀನಾಥ್, ಯಲ್ಲಪ್ಪ, ಲಕ್ಷ್ಮಿ, ಮಂಜುಳಾ, ರಾಧಾ, ಗೀತಾ, ಭಾಗ್ಯ, ಚಿನ್ನಸ್ವಾಮಿ, ಮುನಿರಾಜು, ಬಾಬುರೆಡ್ಡಿ, ವೀರಭದ್ರಪ್ಪ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಅನುಸೂಯ, ಕಾರ್ಯದರ್ಶಿ ಅನಿತಾ ಇದ್ದರು.</p>.<div><blockquote>ಹುಸ್ಕೂರು ಗ್ರಾಮ ಪಂಚಾಯತಿಯು ಎಲೆಕ್ಟ್ರಾನಿಕ್ ಸಿಟಿ ಸಮೀಪದಲ್ಲಿದೆ. ನಗರ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ನಗರದಲ್ಲಿ ದೊರೆಯುವ ಎಲ್ಲಾ ಸೌಲಭ್ಯ ದೊರೆಯುವಂತೆ ಮಾಡಲು ಆದ್ಯತೆ ನೀಡಲಾಗುತ್ತಿದೆ. </blockquote><span class="attribution">ಮುನಿರತ್ನಮ್ಮ ರಮೇಶ ಅಧ್ಯಕ್ಷ ಗ್ರಾಮ ಪಂಚಾಯಿತಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>